<p><strong>ನವದೆಹಲಿ:</strong> ರಸ್ತೆ ಅಪಘಾತಗಳಲ್ಲಿ ತೊಂದರೆಗೆ ಒಳಗಾದವರಿಗೆ ತುರ್ತು ನೆರವು ನೀಡಲು ಸಾರ್ವಜನಿಕರನ್ನು ಪ್ರೇರೇಪಿಸುವ ಸಲುವಾಗಿ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಸಚಿವಾಲಯ ಹೊಸ ಯೋಜನೆಗೆ ಚಾಲನೆ ನೀಡಿದೆ.</p>.<p>ಅಪಘಾತಗಳು ಸಂಭವಿಸಿದ ಸಂದರ್ಭದಲ್ಲಿ ಸಂತ್ರಸ್ತರ ನೆರವಿಗೆ ಧಾವಿಸಿ, ಅವರ ಜೀವ ಉಳಿಸುವವರಿಗೆ ಈ ಯೋಜನೆಯಡಿ ‘ಉತ್ತಮ ಆಪದ್ಬಾಂಧವ’ ಎಂಬ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.</p>.<p>ಈ ಯೋಜನೆ ಅ. 15ರಿಂದ ಜಾರಿಗೆ ಬರಲಿದ್ದು, 2026ರ ಮಾರ್ಚ್ 31ರ ವರೆಗೆ ಜಾರಿಯಲ್ಲಿರುವುದು. ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಪ್ರಧಾನ ಕಾರ್ಯದರ್ಶಿಗಳು ಹಾಗೂ ಸಾರಿಗೆ ಇಲಾಖೆ ಕಾರ್ಯದರ್ಶಿಗಳಿಗೆ ಸಚಿವಾಲಯ ಈ ಸಂಬಂಧ ಪತ್ರ ಬರೆದಿದೆ.</p>.<p><strong>ಓದಿ:</strong><a href="https://www.prajavani.net/india-news/pm-narendra-modi-hands-over-keys-to-75000-beneficiaries-of-central-housing-scheme-in-up-872837.html" itemprop="url">ಉತ್ತರ ಪ್ರದೇಶ: 75 ಸಾವಿರ ಫಲಾನುಭವಿಗಳಿಗೆ ಮನೆ ಹಸ್ತಾಂತರಿಸಿದ ಪ್ರಧಾನಿ ಮೋದಿ</a></p>.<p>ರಸ್ತೆ ಅಪಘಾತ ಸಂಭವಿಸಿದ ಸಂದರ್ಭದಲ್ಲಿ ಗಾಯಾಳುಗಳನ್ನು ತ್ವರಿತವಾಗಿ ಆಸ್ಪತ್ರೆಗೆ ದಾಖಲಿಸಿ, ಅವರ ಜೀವ ಉಳಿಸುವವರಿಗೆ ₹ 5,000 ನಗದು ಬಹುಮಾನ ನೀಡಲಾಗುತ್ತದೆ.</p>.<p>ಈ ‘ಆಪದ್ಬಾಂಧವ’ರ ಪೈಕಿ, ಒಂದು ವರ್ಷದ ಅವಧಿಯಲ್ಲಿ ಗಮನಾರ್ಹ ಸೇವೆ ಕಾರ್ಯ ಮಾಡಿರುವ 10 ಜನರಿಗೆ ರಾಷ್ಟ್ರ ಮಟ್ಟದ ಪ್ರಶಸ್ತಿಯನ್ನು ನೀಡಲಾಗುವುದು. ಈ ಪ್ರಶಸ್ತಿ ತಲಾ ₹ 1 ಲಕ್ಷ ನಗದು ಒಳಗೊಂಡಿರುತ್ತದೆ ಎಂದು ಸಚಿವಾಲಯ ತಿಳಿಸಿದೆ.</p>.<p>ಈ ಪ್ರಶಸ್ತಿಗೆ ಆಯ್ಕೆಯಾಗುವವರಿಗೆ ನಗದು ಬಹುಮಾನ ನೀಡುವ ಸಂಬಂಧ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಸಾರಿಗೆ ಇಲಾಖೆಗಳಿಗೆ ಆರಂಭಿಕ ಅನುದಾನವಾಗಿ ತಲಾ ₹ 5 ಲಕ್ಷ ನೀಡಲಾಗುವುದು ಎಂದೂ ಸಚಿವಾಲಯ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ರಸ್ತೆ ಅಪಘಾತಗಳಲ್ಲಿ ತೊಂದರೆಗೆ ಒಳಗಾದವರಿಗೆ ತುರ್ತು ನೆರವು ನೀಡಲು ಸಾರ್ವಜನಿಕರನ್ನು ಪ್ರೇರೇಪಿಸುವ ಸಲುವಾಗಿ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಸಚಿವಾಲಯ ಹೊಸ ಯೋಜನೆಗೆ ಚಾಲನೆ ನೀಡಿದೆ.</p>.<p>ಅಪಘಾತಗಳು ಸಂಭವಿಸಿದ ಸಂದರ್ಭದಲ್ಲಿ ಸಂತ್ರಸ್ತರ ನೆರವಿಗೆ ಧಾವಿಸಿ, ಅವರ ಜೀವ ಉಳಿಸುವವರಿಗೆ ಈ ಯೋಜನೆಯಡಿ ‘ಉತ್ತಮ ಆಪದ್ಬಾಂಧವ’ ಎಂಬ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.</p>.<p>ಈ ಯೋಜನೆ ಅ. 15ರಿಂದ ಜಾರಿಗೆ ಬರಲಿದ್ದು, 2026ರ ಮಾರ್ಚ್ 31ರ ವರೆಗೆ ಜಾರಿಯಲ್ಲಿರುವುದು. ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಪ್ರಧಾನ ಕಾರ್ಯದರ್ಶಿಗಳು ಹಾಗೂ ಸಾರಿಗೆ ಇಲಾಖೆ ಕಾರ್ಯದರ್ಶಿಗಳಿಗೆ ಸಚಿವಾಲಯ ಈ ಸಂಬಂಧ ಪತ್ರ ಬರೆದಿದೆ.</p>.<p><strong>ಓದಿ:</strong><a href="https://www.prajavani.net/india-news/pm-narendra-modi-hands-over-keys-to-75000-beneficiaries-of-central-housing-scheme-in-up-872837.html" itemprop="url">ಉತ್ತರ ಪ್ರದೇಶ: 75 ಸಾವಿರ ಫಲಾನುಭವಿಗಳಿಗೆ ಮನೆ ಹಸ್ತಾಂತರಿಸಿದ ಪ್ರಧಾನಿ ಮೋದಿ</a></p>.<p>ರಸ್ತೆ ಅಪಘಾತ ಸಂಭವಿಸಿದ ಸಂದರ್ಭದಲ್ಲಿ ಗಾಯಾಳುಗಳನ್ನು ತ್ವರಿತವಾಗಿ ಆಸ್ಪತ್ರೆಗೆ ದಾಖಲಿಸಿ, ಅವರ ಜೀವ ಉಳಿಸುವವರಿಗೆ ₹ 5,000 ನಗದು ಬಹುಮಾನ ನೀಡಲಾಗುತ್ತದೆ.</p>.<p>ಈ ‘ಆಪದ್ಬಾಂಧವ’ರ ಪೈಕಿ, ಒಂದು ವರ್ಷದ ಅವಧಿಯಲ್ಲಿ ಗಮನಾರ್ಹ ಸೇವೆ ಕಾರ್ಯ ಮಾಡಿರುವ 10 ಜನರಿಗೆ ರಾಷ್ಟ್ರ ಮಟ್ಟದ ಪ್ರಶಸ್ತಿಯನ್ನು ನೀಡಲಾಗುವುದು. ಈ ಪ್ರಶಸ್ತಿ ತಲಾ ₹ 1 ಲಕ್ಷ ನಗದು ಒಳಗೊಂಡಿರುತ್ತದೆ ಎಂದು ಸಚಿವಾಲಯ ತಿಳಿಸಿದೆ.</p>.<p>ಈ ಪ್ರಶಸ್ತಿಗೆ ಆಯ್ಕೆಯಾಗುವವರಿಗೆ ನಗದು ಬಹುಮಾನ ನೀಡುವ ಸಂಬಂಧ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಸಾರಿಗೆ ಇಲಾಖೆಗಳಿಗೆ ಆರಂಭಿಕ ಅನುದಾನವಾಗಿ ತಲಾ ₹ 5 ಲಕ್ಷ ನೀಡಲಾಗುವುದು ಎಂದೂ ಸಚಿವಾಲಯ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>