ನವದೆಹಲಿ: ಈ ವರ್ಷದ ಆರಂಭದಲ್ಲಿ ಭೂಕುಸಿತದಿಂದ ನಲುಗಿದ್ದ ಜೋಶಿಮಠದಲ್ಲಿ ₹ 1,658 ಕೋಟಿ ಮೊತ್ತದ ಮರುನಿರ್ಮಾಣ ಯೋಜನೆ ಕೈಗೆತ್ತಿಕೊಳ್ಳಲು ಕೇಂದ್ರವು ಗುರುವಾರ ಒಪ್ಪಿಗೆ ನೀಡಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಮರುನಿರ್ಮಾಣ ಯೋಜನೆಗೆ ಕೇಂದ್ರ ಸರ್ಕಾರವು ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ (ಎನ್ಡಿಆರ್ಎಫ್) ₹ 1,079.96 ಕೋಟಿ ಒದಗಿಸಲಿದೆ. ಉತ್ತರಾಖಂಡ ಸರ್ಕಾರವು ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ (ಎಸ್ಡಿಆರ್ಎಫ್) ₹ 126.41 ಕೋಟಿ ಹಾಗೂ ರಾಜ್ಯ ಬಜೆಟ್ನಿಂದ ₹ 451.80 ಕೋಟಿ ನೀಡಲಿದೆ.