<p><strong>ನವದೆಹಲಿ: </strong>ಪ್ರಧಾನಮಂತ್ರಿ ಆವಾಸ್ ಯೋಜನಾ– ಗ್ರಾಮೀಣ (ಪಿಎಂಎವೈ–ಜಿ) ಅಡಿ ಮುಂದಿನ ವರ್ಷ ಆಗಸ್ಟ್ 15ರೊಳಗೆ 2.02 ಕೋಟಿ ಮನೆಗಳನ್ನು ನಿರ್ಮಿಸುವಂತೆ ಕೇಂದ್ರವು ಕರ್ನಾಟಕ ಸರ್ಕಾರಕ್ಕೆ ಗುರಿ ನಿಗದಿ ಮಾಡಿದೆ.</p>.<p>‘ಈ ಯೋಜನೆಯಡಿ ಕರ್ನಾಟಕಕ್ಕೆ ಹಂಚಿಕೆ ಮಾಡಲಾಗಿರುವ ಒಟ್ಟು 2.95 ಕೋಟಿ ಮನೆಗಳ ನಿರ್ಮಾಣ ಕಾರ್ಯವನ್ನು 2024ರ ಮಾರ್ಚ್ ಒಳಗಾಗಿ ಪೂರ್ಣಗೊಳಿಸಲು ರಾಜ್ಯಕ್ಕೆ ಸೂಚಿಸಲಾಗಿದೆ’ ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವೆ ಸಾಧ್ವಿ ನಿರಂಜನಜ್ಯೋತಿ ಹೇಳಿದ್ದಾರೆ.</p>.<p>‘ಯೋಜನೆಯಡಿ ಕರ್ನಾಟಕಕ್ಕೆ 2019–20ನೇ ಸಾಲಿಗೆ 86,000, 2020–21ನೇ ಸಾಲಿಗೆ 1,51,715 ಮನೆಗಳನ್ನು ಹಂಚಿಕೆ ಮಾಡಲಾಗಿತ್ತು’ ಎಂದು ಅವರು ತಿಳಿಸಿದ್ದಾರೆ.</p>.<p>2016–17 ರಿಂದ 2018–19ರ ವರೆಗೆ ಅವಧಿಯಲ್ಲಿ ಮೊದಲ ಹಂತದಲ್ಲಿ ರಾಜ್ಯಕ್ಕೆ 1,24,088 ಮನೆಗಳನ್ನು ನಿರ್ಮಿಸುವ ಗುರಿ ನಿಗದಿ ಮಾಡಲಾಗಿತ್ತು. ಈ ಅವಧಿಗೆ ಸಂಬಂಧಿಸಿದಂತೆ, 1,11,108 ಫಲಾನುಭವಿಗಳಿಗೆ ಸಹಾಯಧನದ ಮೊದಲ ಕಂತು ಹಾಗೂ 1,01,218 ಫಲಾನುಭವಿಗಳಿಗೆ ಎರಡನೇ ಕಂತನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಪ್ರಧಾನಮಂತ್ರಿ ಆವಾಸ್ ಯೋಜನಾ– ಗ್ರಾಮೀಣ (ಪಿಎಂಎವೈ–ಜಿ) ಅಡಿ ಮುಂದಿನ ವರ್ಷ ಆಗಸ್ಟ್ 15ರೊಳಗೆ 2.02 ಕೋಟಿ ಮನೆಗಳನ್ನು ನಿರ್ಮಿಸುವಂತೆ ಕೇಂದ್ರವು ಕರ್ನಾಟಕ ಸರ್ಕಾರಕ್ಕೆ ಗುರಿ ನಿಗದಿ ಮಾಡಿದೆ.</p>.<p>‘ಈ ಯೋಜನೆಯಡಿ ಕರ್ನಾಟಕಕ್ಕೆ ಹಂಚಿಕೆ ಮಾಡಲಾಗಿರುವ ಒಟ್ಟು 2.95 ಕೋಟಿ ಮನೆಗಳ ನಿರ್ಮಾಣ ಕಾರ್ಯವನ್ನು 2024ರ ಮಾರ್ಚ್ ಒಳಗಾಗಿ ಪೂರ್ಣಗೊಳಿಸಲು ರಾಜ್ಯಕ್ಕೆ ಸೂಚಿಸಲಾಗಿದೆ’ ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವೆ ಸಾಧ್ವಿ ನಿರಂಜನಜ್ಯೋತಿ ಹೇಳಿದ್ದಾರೆ.</p>.<p>‘ಯೋಜನೆಯಡಿ ಕರ್ನಾಟಕಕ್ಕೆ 2019–20ನೇ ಸಾಲಿಗೆ 86,000, 2020–21ನೇ ಸಾಲಿಗೆ 1,51,715 ಮನೆಗಳನ್ನು ಹಂಚಿಕೆ ಮಾಡಲಾಗಿತ್ತು’ ಎಂದು ಅವರು ತಿಳಿಸಿದ್ದಾರೆ.</p>.<p>2016–17 ರಿಂದ 2018–19ರ ವರೆಗೆ ಅವಧಿಯಲ್ಲಿ ಮೊದಲ ಹಂತದಲ್ಲಿ ರಾಜ್ಯಕ್ಕೆ 1,24,088 ಮನೆಗಳನ್ನು ನಿರ್ಮಿಸುವ ಗುರಿ ನಿಗದಿ ಮಾಡಲಾಗಿತ್ತು. ಈ ಅವಧಿಗೆ ಸಂಬಂಧಿಸಿದಂತೆ, 1,11,108 ಫಲಾನುಭವಿಗಳಿಗೆ ಸಹಾಯಧನದ ಮೊದಲ ಕಂತು ಹಾಗೂ 1,01,218 ಫಲಾನುಭವಿಗಳಿಗೆ ಎರಡನೇ ಕಂತನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>