ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳ: ಹೈ–ಸ್ಪೀಡ್‌ ರೈಲು ಯೋಜನೆಗೆ ಕೇಂದ್ರ ಅಸ್ತು

Last Updated 7 ಫೆಬ್ರುವರಿ 2021, 13:41 IST
ಅಕ್ಷರ ಗಾತ್ರ

ತಿರುವನಂತಪುರ: ಕೇರಳದ ರಾಜಧಾನಿ ತಿರುವನಂತಪುರ ಮತ್ತು ಕಾಸರಗೋಡು ನಡುವೆ ಸಂಪರ್ಕ ಕಲ್ಪಿಸುವ ಉದ್ದೇಶಿತ ಸೆಮಿ ಹೈಸ್ಪೀಡ್ ರೈಲು ಯೋಜನೆಗೆ ₹ 64 ಸಾವಿರ ಕೋಟಿ ಸಂಪನ್ಮೂಲ ಕ್ರೋಡೀಕರಿಸುವ ಯೋಜನೆಗೆ ಕೇಂದ್ರ ಹಣಕಾಸು ಸಚಿವಾಲಯ ಅನುಮೋದನೆ ನೀಡಿದೆ.

ರಾಜ್ಯದ ಹಿರಿಯ ಅಧಿಕಾರಿಯೊಬ್ಬರು ಈ ಮಾಹಿತಿ ದೃಢಪಡಿಸಿದ್ದಾರೆ. ಯೋಜನೆಗೆ ₹ 33,700 ಕೋಟಿ ಒದಗಿಸಲು ಜಪಾನ್‌ನ ಸಂಸ್ಥೆ ಜೆಐಸಿಎ ಸಮ್ಮತಿಸಿತ್ತು. ಆದರೆ, ಬಳಿಕ ಮೊತ್ತ ಕಡಿತ ಮಾಡಿದ ಬಳಿಕ ಸಂಪನ್ಮೂಲ ಸಂಗ್ರಹಿಸುವ ಪರಿಷ್ಕೃತ ಯೋಜನೆ ಸಲ್ಲಿಸುವಂತೆ ಕೇಂದ್ರ ಸೂಚಿಸಿತ್ತು.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಈ ಬಗ್ಗೆ ಬರೆದ ಪತ್ರದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ‘ಸಂಬಂಧಿತ ಅನುಮೋದನೆ ಬಳಿಕ ನೋಡಲ್ ಏಜೆನ್ಸಿ ಕೇರಳ ರೈಲು ಅಭಿವೃದ್ಧಿ ನಿಗಮ (ಕೆ–ರೈಲ್) ಸಂಬಂಧ ಭೂಸ್ವಾಧೀನ ಪ್ರಕ್ರಿಯೆ ಆರಂಭಿಸಬಹುದು’ ಎಂದು ತಿಳಿಸಿದ್ದಾರೆ.

ಸೆಮಿ ಹೈ ಸ್ಪೀಡ್ ರೈಲ್‌ ಯೋಜನೆಗೆ ₹ 63,941 ಕೋಟಿ ಸಂಪನ್ಮೂಲ ಕ್ರೋಡೀಕರಣ ಕುರಿತಂತೆ ಜಪಾನ್‌ ಇಂಟರ್‌ನ್ಯಾಷನಲ್‌ ಕೋ ಆಪರೇಟಿವ್ ಏಜೆನ್ಸಿ ಜೊತೆಗೂಡಿ ಕಾರ್ಯ ನಿರ್ವಹಿಸಬೇಕು ಎಂದು ಕೇಂದ್ರ ತಿಳಿಸಿದೆ.

ಉದ್ದೇಶಿತ ರೈಲು 529.45 ಕಿ.ಮೀ ಅಂತರ ಒಳಗೊಂಡಿದ್ದು, 4 ಗಂಟೆಯಲ್ಲಿ ಕ್ರಮಿಸಲಿದೆ ಎನ್ನಲಾಗಿದೆ. ಈಗ ಉಭಯ ನಗರಗಳ ನಡುವಣ ಪ್ರಯಾಣ ಅವಧಿ 12 ಗಂಟೆಗಳು. ತಿರುವನಂತಪುರ–ಎರ್ನಾಕುಲಂ–ಕೊಚ್ಚಿ ಮಾರ್ಗವನ್ನು ರೈಲು 90 ನಿಮಿಷಗಳ ಅಂತರದಲ್ಲಿ ಕ್ರಮಿಸಲಿದೆ ಎಂದು ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT