ನವದೆಹಲಿ: ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯ ಮೂರ್ತಿ ಪಿ.ಬಿ.ವರಾಳೆ ಅವರನ್ನು ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿಯಾಗಿ ನೇಮಕ ಮಾಡಿ ರಾಷ್ಟ್ರಪತಿಯವರು ಆದೇಶ ಹೊರಡಿಸಿದ್ದಾರೆ.
ಕೊಲಿಜಿಯಂ ಮಾಡಿದ್ದ ಶಿಫಾರಸಿಗೆ ಕೇಂದ್ರ ಸರ್ಕಾರ ಬುಧವಾರ ಅನುಮೋದನೆ ನೀಡಿದ ಬಳಿಕ ಈ ಆದೇಶ ಹೊರಡಿಸಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಇದರಿಂದಾಗಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆ 34ಕ್ಕೆ ಏರಿದೆ. ಹೈಕೋರ್ಟ್ ಮುಖ್ಯ ನ್ಯಾಯ ಮೂರ್ತಿಯಾಗಿ ಪಿ.ಎಸ್.ದಿನೇಶ್ ಕುಮಾರ್ ಅವರನ್ನು ನೇಮಕ ಮಾಡ ಬೇಕೆಂಬ ಶಿಫಾರಸಿಗೂ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಅವರು ಫೆ. 24ರಂದು ನಿವೃತ್ತರಾಗಲಿದ್ದಾರೆ.