<p><strong>ನವದೆಹಲಿ</strong>: ಅಮರನಾಥ ಯಾತ್ರೆಗೆ ಭದ್ರತೆಯನ್ನು ಒದಗಿಸುವ ಸಲುವಾಗಿ 42,000 ಯೋಧರನ್ನು ಒಳಗೊಂಡ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯ (ಸಿಎಪಿಎಫ್) 580 ಕಂಪನಿಗಳನ್ನು ನಿಯೋಜಿಸಲು ಕೇಂದ್ರ ಸರ್ಕಾರ ಆದೇಶಿಸಿದೆ ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿವೆ.</p>.<p>424 ಕಂಪನಿಗಳು ಕೇಂದ್ರಾಡಳಿತ ಪ್ರದೇಶಕ್ಕೆ ಕಳುಹಿಸಲಾಗಿದ್ದು, ‘ಆಪರೇಷನ್ ಸಿಂಧೂರ’ ಸಮಯದಲ್ಲಿ ಕೇಂದ್ರಾಡಳಿತ ಪ್ರದೇಶಕ್ಕೆ ಸ್ಥಳಾಂತರಗೊಂಡಿದ್ದ 80 ಕಂಪನಿಗಳನ್ನು, ಶ್ರೀನಗರ ಸೇರಿದಂತೆ ಯಾತ್ರೆಯ ಮಾರ್ಗದಲ್ಲಿ ಭಕ್ತರ ಮತ್ತು ಇತರ ಪ್ರದೇಶಗಳ ಸುರಕ್ಷತೆಗೆ ಸ್ಥಳಾಂತರಿಸಲಾಗುವುದು. ಈ ಪಡೆಗಳು ಜೂನ್ ಎರಡನೇ ವಾರದೊಳಗೆ ಜಮ್ಮು ಮತ್ತು ಕಾಶ್ಮೀರಕ್ಕೆ ಬರುವಂತೆ ನಿರ್ದೇಶಿಸಲಾಗಿದೆ ಎಂದು ಗೃಹಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಅಮರನಾಥ ಯಾತ್ರೆಯು ಜುಲೈ 3ರಂದು ಆರಂಭಗೊಂಡು, ಆಗಸ್ಟ್ 9ಕ್ಕೆ ಕೊನೆಗೊಳ್ಳಲಿದೆ. ಪಹಲ್ಗಾಮ್ ದಾಳಿಯ ಪರಿಣಾಮ ಈ ಬಾರಿ ಭಕ್ತರಿಗೆ ಹೆಚ್ಚು ಭದ್ರತೆಯನ್ನು ಒದಗಿಸಲು ಈ ಯೋಜನೆಯನ್ನು ರೂಪಿಸಲಾಗಿದೆ. ಒಂದು ಕಂಪನಿಯು 70ರಿಂದ 75 ಸಿಬ್ಬಂದಿಯನ್ನು ಹೊಂದಿದೆ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಅಮರನಾಥ ಯಾತ್ರೆಗೆ ಭದ್ರತೆಯನ್ನು ಒದಗಿಸುವ ಸಲುವಾಗಿ 42,000 ಯೋಧರನ್ನು ಒಳಗೊಂಡ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯ (ಸಿಎಪಿಎಫ್) 580 ಕಂಪನಿಗಳನ್ನು ನಿಯೋಜಿಸಲು ಕೇಂದ್ರ ಸರ್ಕಾರ ಆದೇಶಿಸಿದೆ ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿವೆ.</p>.<p>424 ಕಂಪನಿಗಳು ಕೇಂದ್ರಾಡಳಿತ ಪ್ರದೇಶಕ್ಕೆ ಕಳುಹಿಸಲಾಗಿದ್ದು, ‘ಆಪರೇಷನ್ ಸಿಂಧೂರ’ ಸಮಯದಲ್ಲಿ ಕೇಂದ್ರಾಡಳಿತ ಪ್ರದೇಶಕ್ಕೆ ಸ್ಥಳಾಂತರಗೊಂಡಿದ್ದ 80 ಕಂಪನಿಗಳನ್ನು, ಶ್ರೀನಗರ ಸೇರಿದಂತೆ ಯಾತ್ರೆಯ ಮಾರ್ಗದಲ್ಲಿ ಭಕ್ತರ ಮತ್ತು ಇತರ ಪ್ರದೇಶಗಳ ಸುರಕ್ಷತೆಗೆ ಸ್ಥಳಾಂತರಿಸಲಾಗುವುದು. ಈ ಪಡೆಗಳು ಜೂನ್ ಎರಡನೇ ವಾರದೊಳಗೆ ಜಮ್ಮು ಮತ್ತು ಕಾಶ್ಮೀರಕ್ಕೆ ಬರುವಂತೆ ನಿರ್ದೇಶಿಸಲಾಗಿದೆ ಎಂದು ಗೃಹಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಅಮರನಾಥ ಯಾತ್ರೆಯು ಜುಲೈ 3ರಂದು ಆರಂಭಗೊಂಡು, ಆಗಸ್ಟ್ 9ಕ್ಕೆ ಕೊನೆಗೊಳ್ಳಲಿದೆ. ಪಹಲ್ಗಾಮ್ ದಾಳಿಯ ಪರಿಣಾಮ ಈ ಬಾರಿ ಭಕ್ತರಿಗೆ ಹೆಚ್ಚು ಭದ್ರತೆಯನ್ನು ಒದಗಿಸಲು ಈ ಯೋಜನೆಯನ್ನು ರೂಪಿಸಲಾಗಿದೆ. ಒಂದು ಕಂಪನಿಯು 70ರಿಂದ 75 ಸಿಬ್ಬಂದಿಯನ್ನು ಹೊಂದಿದೆ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>