<p><strong>ನವದೆಹಲಿ: </strong>ಗ್ರಾಮೀಣ ಪ್ರದೇಶಗಳಲ್ಲಿರುವ ಗುಡಿ ಕೈಗಾರಿಕೆಗಳ ವಾರ್ಷಿಕ ವಹಿವಾಟನ್ನು ಮುಂದಿನ 2–3 ವರ್ಷಗಳಲ್ಲಿ ₹ 80,000 ಕೋಟಿಯಿಂದ ₹ 5 ಲಕ್ಷ ಕೋಟಿಗೆ ಹೆಚ್ಚಿಸುವುದು ಕೇಂದ್ರ ಸರ್ಕಾರದ ಗುರಿಯಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾನುವಾರ ಹೇಳಿದರು.</p>.<p>ಇಲ್ಲಿನ ಜವಾಹರಲಾಲ್ ನೆಹರೂ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿರುವ ‘ಹುನರ್ ಹಾಟ್’ನ 26ನೇ ಆವೃತ್ತಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ದೇಶದ ಆರ್ಥಿಕತೆಗೆ ಕರಕುಶಲ ಕರ್ಮಿಗಳು ಮಹತ್ತರ ಕೊಡುಗೆ ನೀಡಲು ಸಾಧ್ಯ’ ಎಂದರು.</p>.<p>‘ಗ್ರಾಮೀಣ ಭಾಗದಲ್ಲಿರುವ ಕೈಗಾರಿಕೆಗಳಿಗೆ ಎಷ್ಟು ಪ್ರಮಾಣದಲ್ಲಿ ಪ್ರೋತ್ಸಾಹ ಸಿಗಬೇಕಿತ್ತೋ ಅಷ್ಟು ಸಿಗುತ್ತಿಲ್ಲ. ನಮ್ಮ ಸರ್ಕಾರ ಈ ನಿಟ್ಟಿನಲ್ಲಿ ಹೆಚ್ಚು ಮುತುವರ್ಜಿ ವಹಿಸುತ್ತಿದೆ’ ಎಂದೂ ರಾಜನಾಥ್ ಸಿಂಗ್ ಹೇಳಿದರು.</p>.<p>‘ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವಾಲಯ ಹುನರ್ ಹಾಟ್ ಆರಂಭಿಸುವ ಮೂಲಕ ಉತ್ತಮ ಕಾರ್ಯ ಮಾಡಿದೆ. ಇದು ಆತ್ಮನಿರ್ಭರ ಭಾರತ ಉದ್ದೇಶ ಈಡೇರಿಸುವಲ್ಲಿ ಮಹತ್ತರ ಪಾತ್ರ ವಹಿಸುವುದು’ ಎಂದರು.</p>.<p>ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ಮಾತನಾಡಿ, ‘5 ಲಕ್ಷಕ್ಕೂ ಅಧಿಕ ಕುಶಲಕರ್ಮಿಗಳಿಗೆ ಹುನರ್ ಹಾಟ್ ಉದ್ಯೋಗ ಒದಗಿಸಿದೆ’ ಎಂದರು.</p>.<p>‘ದೇಶದ 75ನೇ ಸ್ವಾತಂತ್ರ್ಯೋತ್ಸವ ಮುಂದಿನ ವರ್ಷ ನಡೆಯುವುದು. ಈ ವೇಳೆಗೆ 75 ಇಂಥ ಮೇಳಗಳನ್ನು ಆಯೋಜಿಸಿ, 7,50,000 ಕುಶಲಕರ್ಮಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲಾಗುವುದು’ ಎಂದೂ ಹೇಳಿದರು.</p>.<p>ಆಂಧ್ರಪ್ರದೇಶ, ಅಸ್ಸಾಂ, ಬಿಹಾರ, ಚಂಡಿಗಡ, ಗೋವಾ, ಗುಜರಾತ್ ಸೇರಿದಂತೆ 31 ರಾಜ್ಯಗಳ 600ಕ್ಕೂ ಅಧಿಕ ಕುಶಲಕರ್ಮಿಗಳು ತಯಾರಿಸಿರುವ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಗಮನ ಸೆಳೆಯುತ್ತಿದೆ.</p>.<p>ಈ ಮೇಳ ಮಾರ್ಚ್ 1ರ ವರೆಗೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಗ್ರಾಮೀಣ ಪ್ರದೇಶಗಳಲ್ಲಿರುವ ಗುಡಿ ಕೈಗಾರಿಕೆಗಳ ವಾರ್ಷಿಕ ವಹಿವಾಟನ್ನು ಮುಂದಿನ 2–3 ವರ್ಷಗಳಲ್ಲಿ ₹ 80,000 ಕೋಟಿಯಿಂದ ₹ 5 ಲಕ್ಷ ಕೋಟಿಗೆ ಹೆಚ್ಚಿಸುವುದು ಕೇಂದ್ರ ಸರ್ಕಾರದ ಗುರಿಯಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾನುವಾರ ಹೇಳಿದರು.</p>.<p>ಇಲ್ಲಿನ ಜವಾಹರಲಾಲ್ ನೆಹರೂ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿರುವ ‘ಹುನರ್ ಹಾಟ್’ನ 26ನೇ ಆವೃತ್ತಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ದೇಶದ ಆರ್ಥಿಕತೆಗೆ ಕರಕುಶಲ ಕರ್ಮಿಗಳು ಮಹತ್ತರ ಕೊಡುಗೆ ನೀಡಲು ಸಾಧ್ಯ’ ಎಂದರು.</p>.<p>‘ಗ್ರಾಮೀಣ ಭಾಗದಲ್ಲಿರುವ ಕೈಗಾರಿಕೆಗಳಿಗೆ ಎಷ್ಟು ಪ್ರಮಾಣದಲ್ಲಿ ಪ್ರೋತ್ಸಾಹ ಸಿಗಬೇಕಿತ್ತೋ ಅಷ್ಟು ಸಿಗುತ್ತಿಲ್ಲ. ನಮ್ಮ ಸರ್ಕಾರ ಈ ನಿಟ್ಟಿನಲ್ಲಿ ಹೆಚ್ಚು ಮುತುವರ್ಜಿ ವಹಿಸುತ್ತಿದೆ’ ಎಂದೂ ರಾಜನಾಥ್ ಸಿಂಗ್ ಹೇಳಿದರು.</p>.<p>‘ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವಾಲಯ ಹುನರ್ ಹಾಟ್ ಆರಂಭಿಸುವ ಮೂಲಕ ಉತ್ತಮ ಕಾರ್ಯ ಮಾಡಿದೆ. ಇದು ಆತ್ಮನಿರ್ಭರ ಭಾರತ ಉದ್ದೇಶ ಈಡೇರಿಸುವಲ್ಲಿ ಮಹತ್ತರ ಪಾತ್ರ ವಹಿಸುವುದು’ ಎಂದರು.</p>.<p>ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ಮಾತನಾಡಿ, ‘5 ಲಕ್ಷಕ್ಕೂ ಅಧಿಕ ಕುಶಲಕರ್ಮಿಗಳಿಗೆ ಹುನರ್ ಹಾಟ್ ಉದ್ಯೋಗ ಒದಗಿಸಿದೆ’ ಎಂದರು.</p>.<p>‘ದೇಶದ 75ನೇ ಸ್ವಾತಂತ್ರ್ಯೋತ್ಸವ ಮುಂದಿನ ವರ್ಷ ನಡೆಯುವುದು. ಈ ವೇಳೆಗೆ 75 ಇಂಥ ಮೇಳಗಳನ್ನು ಆಯೋಜಿಸಿ, 7,50,000 ಕುಶಲಕರ್ಮಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲಾಗುವುದು’ ಎಂದೂ ಹೇಳಿದರು.</p>.<p>ಆಂಧ್ರಪ್ರದೇಶ, ಅಸ್ಸಾಂ, ಬಿಹಾರ, ಚಂಡಿಗಡ, ಗೋವಾ, ಗುಜರಾತ್ ಸೇರಿದಂತೆ 31 ರಾಜ್ಯಗಳ 600ಕ್ಕೂ ಅಧಿಕ ಕುಶಲಕರ್ಮಿಗಳು ತಯಾರಿಸಿರುವ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಗಮನ ಸೆಳೆಯುತ್ತಿದೆ.</p>.<p>ಈ ಮೇಳ ಮಾರ್ಚ್ 1ರ ವರೆಗೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>