‘ರೈತರ ಆದಾಯವನ್ನು ದ್ವಿಗುಣ ಮಾಡುತ್ತೇವೆ, ಎಂಎಸ್ಪಿ ಜಾರಿ ಮಾಡುತ್ತೇವೆ ಎಂದವರೇ ಇಂದು ರೈತರ ಧ್ವನಿಯನ್ನು ಹತ್ತಿಕ್ಕುತ್ತಿದ್ದಾರೆ. ಕೆಲ ವರ್ಷಗಳ ಹಿಂದೆ ರೈತರು ಇದೇ ರೀತಿ ಬಂದು ಧರಣಿ ಕುಳಿತಿದ್ದರು. ಇದರಿಂದಾಗಿ 800ಕ್ಕೂ ಹೆಚ್ಚು ರೈತರು ಪ್ರಾಣ ಕಳೆದುಕೊಂಡಿದ್ದರು. ಇಷ್ಟಾಗಿಯೂ ಸರ್ಕಾರ ರೈತರಿಗೆ ಎಂಎಸ್ಪಿ ನೀಡುತ್ತಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.