<p><strong>ನವದೆಹಲಿ</strong>: ಬರ ಪರಿಸ್ಥಿತಿ ನಿರ್ವಹಣೆಗೆ ರಾಷ್ಟ್ರೀಯ ಪ್ರಾಕೃತಿಕ ವಿಕೋಪ ಪರಿಹಾರ ನಿಧಿಯಿಂದ (ಎನ್ಡಿಆರ್ಎಫ್) ಹಣ ಬಿಡುಗಡೆ ಕುರಿತ ವಿವಾದವನ್ನು ಕೇಂದ್ರ ಮತ್ತು ಕರ್ನಾಟಕ ಸರ್ಕಾರಗಳೇ ಬಗೆಹರಿಸಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.</p>.<p>ಕೇಂದ್ರ ಸರ್ಕಾರವನ್ನು ಪ್ರತಿನಿಧಿಸಿದ್ದ ಅಟಾರ್ನಿ ಜನರಲ್ ಆರ್.ವೆಂಕಟರಮಣಿ ಅವರು, ಈ ಕುರಿತು ಪ್ರತಿಕ್ರಿಯೆ ದಾಖಲಿಸಲು ಕೆಲ ಸಮಯ ಬೇಕು ಎಂದು ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಕೆ.ವಿ.ವಿಶ್ವನಾಥನ್ ಅವರಿದ್ದ ಪೀಠಕ್ಕೆ ತಿಳಿಸಿದರು. </p>.<p>‘ನೀವೇ ಬಗೆಹರಿಸಿಕೊಳ್ಳಬೇಕು’ ಎಂದು ಈ ಸಂದರ್ಭದಲ್ಲಿ ಪೀಠ ಅಭಿಪ್ರಾಯಪಟ್ಟಿತು.</p>.<p>ಎನ್ಡಿಆರ್ಎಫ್ನಿಂದ ಹಣ ಬಿಡುಗಡೆ ಕುರಿತು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ನ ಮೆಟ್ಟಿಲೇರಿದೆ.</p>.<p>‘ಇದುವರೆಗೂ ಎಷ್ಟು ಹಣ ಬಿಡುಗಡೆ ಮಾಡಲಾಗಿದೆ’ ಎಂದು ಪೀಠ ಪ್ರಶ್ನಿಸಿತು. ಕರ್ನಾಟಕವನ್ನು ಪ್ರತಿನಿಧಿಸಿದ್ದ ವಕೀಲರು, ‘ಕರ್ನಾಟಕವು ₹18,171 ಕೋಟಿ ಬಿಡುಗಡೆಗೆ ಮನವಿ ಸಲ್ಲಿಸಿದೆ. ಕೇಂದ್ರ ₹3,819 ಕೋಟಿ ಬಿಡುಗಡೆ ಮಾಡಿದೆ’ ಎಂದರು.</p>.<p>ಈ ಕುರಿತ ವಿಚಾರಣೆಯನ್ನು ಪೀಠವು ಜನವರಿ ತಿಂಗಳಿಗೆ ಮುಂದೂಡಿತು. ಏಪ್ರಿಲ್ 29ರಂದು ವಿಚಾರಣೆ ವೇಳೆ ಕರ್ನಾಟಕದಲ್ಲಿ ಬರಪರಿಸ್ಥಿತಿ ನಿರ್ವಹಣೆಗೆ ಒಟ್ಟು ₹3,400 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ಗೆ ಮಾಹಿತಿ ನೀಡಿತ್ತು.</p>.<p>ಬರ ಪರಿಸ್ಥಿತಿ ನಿರ್ವಹಣೆಗೆ ಎನ್ಡಿಆರ್ಎಫ್ನಿಂದ ಪೂರ್ಣ ಆರ್ಥಿಕ ನೆರವು ಬಿಡುಗಡೆ ಮಾಡದ ಕೇಂದ್ರ ನಿಲುವು ಸಂವಿಧಾನದ ವಿಧಿ 14 ಮತ್ತು 21 ಅನ್ವಯ ರಾಜ್ಯದ ಜನರ ಮೂಲಭೂತ ಹಕ್ಕಿನ ಉಲ್ಲಂಘನೆ ಎಂದು ಕರ್ನಾಟಕ ತನ್ನ ಅರ್ಜಿಯಲ್ಲಿ ಪ್ರತಿಪಾದಿಸಿತ್ತು.</p>.<p>ರಾಜ್ಯದಲ್ಲಿ ಗಂಭೀರವಾದ ಬರ ಪರಿಸ್ಥಿತಿ ಇದೆ. 2023ರ ಮುಂಗಾರು ಹಂಗಾಮಿನಲ್ಲಿ ಜನರ ಬದುಕಿನ ಮೇಲೆ ಗಂಭೀರ ಪರಿಣಾಮವಾಗಿದೆ. 236 ತಾಲ್ಲೂಕುಗಳ ಪೈಕಿ 223 ತಾಲ್ಲೂಕುಗಳು ಬರಪೀಡಿತವಾಗಿವೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿತ್ತು.</p>.<p>‘196 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದೆ. ಮುಂಗಾರುಹಂಗಾಮಿನಲ್ಲಿ 48ಲಕ್ಷ ಹೆಕ್ಟೇರ್ನಲ್ಲಿ ಬೆಳೆ ನಷ್ಟ ಸಂಭವಿಸಿದ್ದು, ಒಟ್ಟಾರೆ ₹ 35,162 ಕೋಟಿ ನಷ್ಟ ಸಂಭವಿಸಿದೆ’ ಎಂದು ವಕೀಲ ಡಿ.ಎಲ್.ಚಿದಾನಂದ ಸಲ್ಲಿಸಿದ್ದ ಅರ್ಜಿಯಲ್ಲಿ ತಿಳಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಬರ ಪರಿಸ್ಥಿತಿ ನಿರ್ವಹಣೆಗೆ ರಾಷ್ಟ್ರೀಯ ಪ್ರಾಕೃತಿಕ ವಿಕೋಪ ಪರಿಹಾರ ನಿಧಿಯಿಂದ (ಎನ್ಡಿಆರ್ಎಫ್) ಹಣ ಬಿಡುಗಡೆ ಕುರಿತ ವಿವಾದವನ್ನು ಕೇಂದ್ರ ಮತ್ತು ಕರ್ನಾಟಕ ಸರ್ಕಾರಗಳೇ ಬಗೆಹರಿಸಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.</p>.<p>ಕೇಂದ್ರ ಸರ್ಕಾರವನ್ನು ಪ್ರತಿನಿಧಿಸಿದ್ದ ಅಟಾರ್ನಿ ಜನರಲ್ ಆರ್.ವೆಂಕಟರಮಣಿ ಅವರು, ಈ ಕುರಿತು ಪ್ರತಿಕ್ರಿಯೆ ದಾಖಲಿಸಲು ಕೆಲ ಸಮಯ ಬೇಕು ಎಂದು ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಕೆ.ವಿ.ವಿಶ್ವನಾಥನ್ ಅವರಿದ್ದ ಪೀಠಕ್ಕೆ ತಿಳಿಸಿದರು. </p>.<p>‘ನೀವೇ ಬಗೆಹರಿಸಿಕೊಳ್ಳಬೇಕು’ ಎಂದು ಈ ಸಂದರ್ಭದಲ್ಲಿ ಪೀಠ ಅಭಿಪ್ರಾಯಪಟ್ಟಿತು.</p>.<p>ಎನ್ಡಿಆರ್ಎಫ್ನಿಂದ ಹಣ ಬಿಡುಗಡೆ ಕುರಿತು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ನ ಮೆಟ್ಟಿಲೇರಿದೆ.</p>.<p>‘ಇದುವರೆಗೂ ಎಷ್ಟು ಹಣ ಬಿಡುಗಡೆ ಮಾಡಲಾಗಿದೆ’ ಎಂದು ಪೀಠ ಪ್ರಶ್ನಿಸಿತು. ಕರ್ನಾಟಕವನ್ನು ಪ್ರತಿನಿಧಿಸಿದ್ದ ವಕೀಲರು, ‘ಕರ್ನಾಟಕವು ₹18,171 ಕೋಟಿ ಬಿಡುಗಡೆಗೆ ಮನವಿ ಸಲ್ಲಿಸಿದೆ. ಕೇಂದ್ರ ₹3,819 ಕೋಟಿ ಬಿಡುಗಡೆ ಮಾಡಿದೆ’ ಎಂದರು.</p>.<p>ಈ ಕುರಿತ ವಿಚಾರಣೆಯನ್ನು ಪೀಠವು ಜನವರಿ ತಿಂಗಳಿಗೆ ಮುಂದೂಡಿತು. ಏಪ್ರಿಲ್ 29ರಂದು ವಿಚಾರಣೆ ವೇಳೆ ಕರ್ನಾಟಕದಲ್ಲಿ ಬರಪರಿಸ್ಥಿತಿ ನಿರ್ವಹಣೆಗೆ ಒಟ್ಟು ₹3,400 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ಗೆ ಮಾಹಿತಿ ನೀಡಿತ್ತು.</p>.<p>ಬರ ಪರಿಸ್ಥಿತಿ ನಿರ್ವಹಣೆಗೆ ಎನ್ಡಿಆರ್ಎಫ್ನಿಂದ ಪೂರ್ಣ ಆರ್ಥಿಕ ನೆರವು ಬಿಡುಗಡೆ ಮಾಡದ ಕೇಂದ್ರ ನಿಲುವು ಸಂವಿಧಾನದ ವಿಧಿ 14 ಮತ್ತು 21 ಅನ್ವಯ ರಾಜ್ಯದ ಜನರ ಮೂಲಭೂತ ಹಕ್ಕಿನ ಉಲ್ಲಂಘನೆ ಎಂದು ಕರ್ನಾಟಕ ತನ್ನ ಅರ್ಜಿಯಲ್ಲಿ ಪ್ರತಿಪಾದಿಸಿತ್ತು.</p>.<p>ರಾಜ್ಯದಲ್ಲಿ ಗಂಭೀರವಾದ ಬರ ಪರಿಸ್ಥಿತಿ ಇದೆ. 2023ರ ಮುಂಗಾರು ಹಂಗಾಮಿನಲ್ಲಿ ಜನರ ಬದುಕಿನ ಮೇಲೆ ಗಂಭೀರ ಪರಿಣಾಮವಾಗಿದೆ. 236 ತಾಲ್ಲೂಕುಗಳ ಪೈಕಿ 223 ತಾಲ್ಲೂಕುಗಳು ಬರಪೀಡಿತವಾಗಿವೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿತ್ತು.</p>.<p>‘196 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದೆ. ಮುಂಗಾರುಹಂಗಾಮಿನಲ್ಲಿ 48ಲಕ್ಷ ಹೆಕ್ಟೇರ್ನಲ್ಲಿ ಬೆಳೆ ನಷ್ಟ ಸಂಭವಿಸಿದ್ದು, ಒಟ್ಟಾರೆ ₹ 35,162 ಕೋಟಿ ನಷ್ಟ ಸಂಭವಿಸಿದೆ’ ಎಂದು ವಕೀಲ ಡಿ.ಎಲ್.ಚಿದಾನಂದ ಸಲ್ಲಿಸಿದ್ದ ಅರ್ಜಿಯಲ್ಲಿ ತಿಳಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>