<p><strong>ನವದೆಹಲಿ:</strong> ಕೋವಿಡ್–19 ಸಾಂಕ್ರಾಮಿಕ ರೋಗಕ್ಕೆ ಸಂಬಂಧಿಸಿದಂತೆ ಸಮಸ್ಯೆಗಳನ್ನು ಪರಿಹರಿಸಲು ಕರ್ನಾಟಕ ಸೇರಿದಂತೆ ಐದು ರಾಜ್ಯಗಳಲ್ಲಿ ಕೇಂದ್ರ ಸರ್ಕಾರವು ವೃದ್ಧರಿಗಾಗಿ ಸಹಾಯವಾಣಿಯನ್ನು ಆರಂಭಿಸಿದೆ.</p>.<p>ಸಾಂಕ್ರಾಮಿಕ ರೋಗದ ಸಮಯದಲ್ಲಿ ಹಿರಿಯ ನಾಗರಿಕರ ವಿರುದ್ಧ ನಡೆಯುವ ದೌರ್ಜನ್ಯ ತಡೆಯಲು ಹಾಗೂ ಅವರಿಗೆ ಭಾವನಾತ್ಮಕ ಬೆಂಬಲ ನೀಡುವ ಕೆಲಸವನ್ನೂ ಸಹಾಯವಾಣಿ ಮಾಡಲಿದೆ.</p>.<p>‘14567’– ಇದು ಸಹಾಯವಾಣಿಯ ದೂರವಾಣಿ ಸಂಖ್ಯೆಯಾಗಿದ್ದು, ಸಹಾಯವಾಣಿಗೆ ‘ಎಲ್ಡರ್ಲೈನ್’ ಎಂದೂ ಹೆಸರಿಸಲಾಗಿದೆ. 2019ರಲ್ಲಿ ತೆಲಂಗಾಣದಲ್ಲಿ ವೃದ್ಧರಿಗೆ ಸಹಾಯವಾಣಿ ಆರಂಭಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ ‘ಎಲ್ಡರ್ಲೈನ್’ ಕಾರ್ಯ ನಿರ್ವಹಿಸಲಿದೆ.</p>.<p>ಟಾಟಾ ಟ್ರಸ್ಟ್ ಮತ್ತು ಎನ್ಎಸ್ಇ ಫೌಂಡೇಷನ್ ಸಹಾಯದಿಂದ ಈ ಸಹಾಯವಾಣಿಯನ್ನು ಕಾರ್ಯಗತಗೊಳಿಸಲಾಗಿದೆ. ‘ಎಲ್ಡರ್ಲೈನ್’ ಸಹಾಯವಾಣಿಯು ಉತ್ತರ ಪ್ರದೇಶ, ಮಧ್ಯಪ್ರದೇಶ, ಕರ್ನಾಟಕ, ರಾಜಸ್ಥಾನ ಮತ್ತು ತಮಿಳನಾಡಿನಲ್ಲಿ ಕಾರ್ಯನಿರ್ವಹಿಸುತ್ತಿವೆ. ಮೇ ಅಂತ್ಯದ ವೇಳೆಗೆ ಎಲ್ಲಾ ರಾಜ್ಯಗಳಲ್ಲೂ ಈ ಸಹಾಯವಾಣಿ ಕಾರ್ಯಾರಂಭ ಮಾಡಲಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೋವಿಡ್–19 ಸಾಂಕ್ರಾಮಿಕ ರೋಗಕ್ಕೆ ಸಂಬಂಧಿಸಿದಂತೆ ಸಮಸ್ಯೆಗಳನ್ನು ಪರಿಹರಿಸಲು ಕರ್ನಾಟಕ ಸೇರಿದಂತೆ ಐದು ರಾಜ್ಯಗಳಲ್ಲಿ ಕೇಂದ್ರ ಸರ್ಕಾರವು ವೃದ್ಧರಿಗಾಗಿ ಸಹಾಯವಾಣಿಯನ್ನು ಆರಂಭಿಸಿದೆ.</p>.<p>ಸಾಂಕ್ರಾಮಿಕ ರೋಗದ ಸಮಯದಲ್ಲಿ ಹಿರಿಯ ನಾಗರಿಕರ ವಿರುದ್ಧ ನಡೆಯುವ ದೌರ್ಜನ್ಯ ತಡೆಯಲು ಹಾಗೂ ಅವರಿಗೆ ಭಾವನಾತ್ಮಕ ಬೆಂಬಲ ನೀಡುವ ಕೆಲಸವನ್ನೂ ಸಹಾಯವಾಣಿ ಮಾಡಲಿದೆ.</p>.<p>‘14567’– ಇದು ಸಹಾಯವಾಣಿಯ ದೂರವಾಣಿ ಸಂಖ್ಯೆಯಾಗಿದ್ದು, ಸಹಾಯವಾಣಿಗೆ ‘ಎಲ್ಡರ್ಲೈನ್’ ಎಂದೂ ಹೆಸರಿಸಲಾಗಿದೆ. 2019ರಲ್ಲಿ ತೆಲಂಗಾಣದಲ್ಲಿ ವೃದ್ಧರಿಗೆ ಸಹಾಯವಾಣಿ ಆರಂಭಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ ‘ಎಲ್ಡರ್ಲೈನ್’ ಕಾರ್ಯ ನಿರ್ವಹಿಸಲಿದೆ.</p>.<p>ಟಾಟಾ ಟ್ರಸ್ಟ್ ಮತ್ತು ಎನ್ಎಸ್ಇ ಫೌಂಡೇಷನ್ ಸಹಾಯದಿಂದ ಈ ಸಹಾಯವಾಣಿಯನ್ನು ಕಾರ್ಯಗತಗೊಳಿಸಲಾಗಿದೆ. ‘ಎಲ್ಡರ್ಲೈನ್’ ಸಹಾಯವಾಣಿಯು ಉತ್ತರ ಪ್ರದೇಶ, ಮಧ್ಯಪ್ರದೇಶ, ಕರ್ನಾಟಕ, ರಾಜಸ್ಥಾನ ಮತ್ತು ತಮಿಳನಾಡಿನಲ್ಲಿ ಕಾರ್ಯನಿರ್ವಹಿಸುತ್ತಿವೆ. ಮೇ ಅಂತ್ಯದ ವೇಳೆಗೆ ಎಲ್ಲಾ ರಾಜ್ಯಗಳಲ್ಲೂ ಈ ಸಹಾಯವಾಣಿ ಕಾರ್ಯಾರಂಭ ಮಾಡಲಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>