<p><strong>ನವದೆಹಲಿ</strong>: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (ಎನ್ಎಫ್ಎಸ್ಎ) ಅಡಿಯಲ್ಲಿ ದೇಶದ 81.35 ಕೋಟಿ ಬಡವರಿಗೆ ಒಂದು ವರ್ಷದವರೆಗೆ ಉಚಿತ ಪಡಿತರ ನೀಡುವ ಮಹತ್ವದ ನಿರ್ಧಾರವೊಂದನ್ನು ಕೇಂದ್ರ ಸರ್ಕಾರವು ಶುಕ್ರವಾರ ಪ್ರಕಟಿಸಿದೆ.</p>.<p>ಕೇಂದ್ರ ಸಂಪುಟದ ಈ ನಿರ್ಧಾರದ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿದ ಕೇಂದ್ರ ಆಹಾರ ಸಚಿವ ಪೀಯೂಷ್ ಗೋಯಲ್ ಅವರು ‘ಎನ್ಎಫ್ಎಸ್ಎ ಅಡಿಯಲ್ಲಿ ಉಚಿತ ಆಹಾರ ಧಾನ್ಯಗಳನ್ನು ಒದಗಿಸುವ ಸಂಪೂರ್ಣ ಹೊರೆಯನ್ನು ಕೇಂದ್ರವು ಭರಿಸಲಿದೆ. ಇದರಿಂದ ಬೊಕ್ಕಸಕ್ಕೆ ವಾರ್ಷಿಕವಾಗಿ ₹ 2 ಲಕ್ಷ ಕೋಟಿ ವೆಚ್ಚವಾಗಲಿದೆ’ ಎಂದು ಹೇಳಿದ್ದಾರೆ.</p>.<p>ಎನ್ಎಫ್ಎಸ್ಎ ಅಡಿಯಲ್ಲಿ ಸರ್ಕಾರವು ಪ್ರಸ್ತುತ ಪ್ರತಿ ವ್ಯಕ್ತಿಗೆ ಕೆ.ಜಿ.ಗೆ ₹ 2ರಿಂದ ₹ 3ರಂತೆ 5 ಕೆ.ಜಿ.ಯಷ್ಟು ಆಹಾರ ಧಾನ್ಯವನ್ನು ಒದಗಿಸುತ್ತಿದೆ.ಅಂತ್ಯೋದಯ ಅನ್ನ ಯೋಜನೆ (ಎಎವೈ) ಅಡಿಯಲ್ಲಿ ಬರುವ ಕುಟುಂಬಗಳು ತಿಂಗಳಿಗೆ 35 ಕೆ.ಜಿ. ಆಹಾರ ಧಾನ್ಯಗಳನ್ನು ಪಡೆಯುತ್ತಿವೆ. ಅಂತೆಯೇ ಬಡವರಿಗೆ ಪ್ರತಿ ಕೆ.ಜಿಗೆ ₹ 3ರಂತೆ ಅಕ್ಕಿಯನ್ನು ಹಾಗೂ ಪ್ರತಿ ಕೆ.ಜಿ.ಗೆ ₹ 2ರಂತೆ ಗೋಧಿಯನ್ನು ನೀಡಲಾಗುತ್ತಿದೆ.</p>.<p>ಈ ಮಧ್ಯೆ, ಕೇಂದ್ರ ಸರ್ಕಾರವು ಇದೇ ಡಿ. 31ಕ್ಕೆ ಮುಕ್ತಾಯವಾಗಲಿರುವಉಚಿತ ಪಡಿತರವನ್ನೊದಗಿಸುವ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು(ಪಿಎಂಜಿಕೆಎವೈ) ವಿಸ್ತರಿಸದಿರಲು ನಿರ್ಧರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (ಎನ್ಎಫ್ಎಸ್ಎ) ಅಡಿಯಲ್ಲಿ ದೇಶದ 81.35 ಕೋಟಿ ಬಡವರಿಗೆ ಒಂದು ವರ್ಷದವರೆಗೆ ಉಚಿತ ಪಡಿತರ ನೀಡುವ ಮಹತ್ವದ ನಿರ್ಧಾರವೊಂದನ್ನು ಕೇಂದ್ರ ಸರ್ಕಾರವು ಶುಕ್ರವಾರ ಪ್ರಕಟಿಸಿದೆ.</p>.<p>ಕೇಂದ್ರ ಸಂಪುಟದ ಈ ನಿರ್ಧಾರದ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿದ ಕೇಂದ್ರ ಆಹಾರ ಸಚಿವ ಪೀಯೂಷ್ ಗೋಯಲ್ ಅವರು ‘ಎನ್ಎಫ್ಎಸ್ಎ ಅಡಿಯಲ್ಲಿ ಉಚಿತ ಆಹಾರ ಧಾನ್ಯಗಳನ್ನು ಒದಗಿಸುವ ಸಂಪೂರ್ಣ ಹೊರೆಯನ್ನು ಕೇಂದ್ರವು ಭರಿಸಲಿದೆ. ಇದರಿಂದ ಬೊಕ್ಕಸಕ್ಕೆ ವಾರ್ಷಿಕವಾಗಿ ₹ 2 ಲಕ್ಷ ಕೋಟಿ ವೆಚ್ಚವಾಗಲಿದೆ’ ಎಂದು ಹೇಳಿದ್ದಾರೆ.</p>.<p>ಎನ್ಎಫ್ಎಸ್ಎ ಅಡಿಯಲ್ಲಿ ಸರ್ಕಾರವು ಪ್ರಸ್ತುತ ಪ್ರತಿ ವ್ಯಕ್ತಿಗೆ ಕೆ.ಜಿ.ಗೆ ₹ 2ರಿಂದ ₹ 3ರಂತೆ 5 ಕೆ.ಜಿ.ಯಷ್ಟು ಆಹಾರ ಧಾನ್ಯವನ್ನು ಒದಗಿಸುತ್ತಿದೆ.ಅಂತ್ಯೋದಯ ಅನ್ನ ಯೋಜನೆ (ಎಎವೈ) ಅಡಿಯಲ್ಲಿ ಬರುವ ಕುಟುಂಬಗಳು ತಿಂಗಳಿಗೆ 35 ಕೆ.ಜಿ. ಆಹಾರ ಧಾನ್ಯಗಳನ್ನು ಪಡೆಯುತ್ತಿವೆ. ಅಂತೆಯೇ ಬಡವರಿಗೆ ಪ್ರತಿ ಕೆ.ಜಿಗೆ ₹ 3ರಂತೆ ಅಕ್ಕಿಯನ್ನು ಹಾಗೂ ಪ್ರತಿ ಕೆ.ಜಿ.ಗೆ ₹ 2ರಂತೆ ಗೋಧಿಯನ್ನು ನೀಡಲಾಗುತ್ತಿದೆ.</p>.<p>ಈ ಮಧ್ಯೆ, ಕೇಂದ್ರ ಸರ್ಕಾರವು ಇದೇ ಡಿ. 31ಕ್ಕೆ ಮುಕ್ತಾಯವಾಗಲಿರುವಉಚಿತ ಪಡಿತರವನ್ನೊದಗಿಸುವ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು(ಪಿಎಂಜಿಕೆಎವೈ) ವಿಸ್ತರಿಸದಿರಲು ನಿರ್ಧರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>