<p><strong>ನವದೆಹಲಿ:</strong>ಪರಿಶಿಷ್ಟಜಾತಿಮತ್ತುಪರಿಶಿಷ್ಟಪಂಗಡಗಳ(ಎಸ್ಸಿ–ಎಸ್ಟಿ)ಉದ್ಯೋಗಿಗಳಿಗೆ ಬಡ್ತಿಯಲ್ಲಿ ಮೀಸಲಾತಿ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡುವಂತೆ ನೀಡಿದ್ದ ಆದೇಶದ ಕುರಿತು ಸ್ಪಷ್ಟನೆ ಕೋರಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಲೇರಿದೆ.</p>.<p>‘2020 ಜನವರಿ 31ರವರೆಗೆ ಒಟ್ಟು 78 ಇಲಾಖೆಗಳ ಪೈಕಿ 23 ಇಲಾಖೆಗಳಲ್ಲಿ 1.3 ಲಕ್ಷಕ್ಕೂ ಅಧಿಕ ಉದ್ಯೋಗಿಗಳ ಬಡ್ತಿಗೆ ತಡೆಯಾಗಿದೆ. ಇದರಿಂದಾಗಿ ಉದ್ಯೋಗಿಗಳು ಆರ್ಥಿಕ ನಷ್ಟ ಅನುಭವಿಸುತ್ತಿದ್ದು, ಅಸಮಾಧಾನಗೊಂಡಿದ್ದಾರೆ’ಎಂದು ಕೇಂದ್ರ ಉಲ್ಲೇಖಿಸಿದೆ.</p>.<p>‘ಈ ಪ್ರಕರಣದ ಅಂತಿಮ ತೀರ್ಪಿಗೆ ಅನುಗುಣವಾಗಿ, ಖಾಲಿ ಇರುವ ಹುದ್ದೆಗಳಿಗೆ ಅರ್ಹರನ್ನು ಬಡ್ತಿ ಮೂಲಕ ತುಂಬಿಸಲು ಅನುಮತಿ ನೀಡಬೇಕು’ ಎಂದು ಕೇಂದ್ರ ಸರ್ಕಾರ ಅರ್ಜಿಯಲ್ಲಿ ಮನವಿ ಮಾಡಿದೆ.</p>.<p>2019 ಏಪ್ರಿಲ್ 15ರಂದು ಬಡ್ತಿ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡಲು ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಇದರಿಂದಾಗಿ ಮೀಸಲು ಹಾಗೂ ಸಾಮಾನ್ಯ ವಿಭಾಗದಲ್ಲಿ ಬಡ್ತಿ ಸಂಪೂರ್ಣವಾಗಿ ಸ್ಥಗಿತವಾಗಿದೆ.</p>.<p>‘ಪ್ರತಿ ತಿಂಗಳು ಹಲವು ಸರ್ಕಾರಿ ನೌಕರರು ಬಡ್ತಿ ಸಿಗದೇ ನಿವೃತ್ತಿ ಹೊಂದುತ್ತಿದ್ದಾರೆ. ಇದರಿಂದಾಗಿ ನೌಕರರಲ್ಲಿ ಗೊಂದಲ, ಅಸಮಾಧಾನ, ಸ್ಥೈರ್ಯ ಕುಗ್ಗಿದೆ. ಕೋವಿಡ್–19 ಪಿಡುಗಿನ ಈ ಸಂದರ್ಭದಲ್ಲಿ ಜನರ ಸೇವೆಯಲ್ಲಿ ಸರ್ಕಾರಿ ನೌಕರರು ಮುಂಚೂಣಿಯಲ್ಲಿದ್ದು, ಅವರ ಸ್ಥೈರ್ಯ ಹೆಚ್ಚಿಸುವುದು ಮುಖ್ಯ’ ಎಂದು ಸರ್ಕಾರ ಅಭಿಪ್ರಾಯಪಟ್ಟಿದೆ.</p>.<p>‘ಇಲಾಖೆಗಳಲ್ಲಿ ಹಲವು ತಿಂಗಳಿಂದ ಹುದ್ದೆಗಳು ಖಾಲಿ ಇರುವುದು ಸರ್ಕಾರಗಳ ಕಾರ್ಯವೈಖರಿಯ ಮೇಲೂ ಪರಿಣಾಮ ಬೀರಲಿದೆ. ಇದರಿಂದ ಜನರಿಗೇ ಸಮಸ್ಯೆಯಾಗಲಿದೆ’ ಎಂದು ಕೇಂದ್ರ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong>ಪರಿಶಿಷ್ಟಜಾತಿಮತ್ತುಪರಿಶಿಷ್ಟಪಂಗಡಗಳ(ಎಸ್ಸಿ–ಎಸ್ಟಿ)ಉದ್ಯೋಗಿಗಳಿಗೆ ಬಡ್ತಿಯಲ್ಲಿ ಮೀಸಲಾತಿ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡುವಂತೆ ನೀಡಿದ್ದ ಆದೇಶದ ಕುರಿತು ಸ್ಪಷ್ಟನೆ ಕೋರಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಲೇರಿದೆ.</p>.<p>‘2020 ಜನವರಿ 31ರವರೆಗೆ ಒಟ್ಟು 78 ಇಲಾಖೆಗಳ ಪೈಕಿ 23 ಇಲಾಖೆಗಳಲ್ಲಿ 1.3 ಲಕ್ಷಕ್ಕೂ ಅಧಿಕ ಉದ್ಯೋಗಿಗಳ ಬಡ್ತಿಗೆ ತಡೆಯಾಗಿದೆ. ಇದರಿಂದಾಗಿ ಉದ್ಯೋಗಿಗಳು ಆರ್ಥಿಕ ನಷ್ಟ ಅನುಭವಿಸುತ್ತಿದ್ದು, ಅಸಮಾಧಾನಗೊಂಡಿದ್ದಾರೆ’ಎಂದು ಕೇಂದ್ರ ಉಲ್ಲೇಖಿಸಿದೆ.</p>.<p>‘ಈ ಪ್ರಕರಣದ ಅಂತಿಮ ತೀರ್ಪಿಗೆ ಅನುಗುಣವಾಗಿ, ಖಾಲಿ ಇರುವ ಹುದ್ದೆಗಳಿಗೆ ಅರ್ಹರನ್ನು ಬಡ್ತಿ ಮೂಲಕ ತುಂಬಿಸಲು ಅನುಮತಿ ನೀಡಬೇಕು’ ಎಂದು ಕೇಂದ್ರ ಸರ್ಕಾರ ಅರ್ಜಿಯಲ್ಲಿ ಮನವಿ ಮಾಡಿದೆ.</p>.<p>2019 ಏಪ್ರಿಲ್ 15ರಂದು ಬಡ್ತಿ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡಲು ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಇದರಿಂದಾಗಿ ಮೀಸಲು ಹಾಗೂ ಸಾಮಾನ್ಯ ವಿಭಾಗದಲ್ಲಿ ಬಡ್ತಿ ಸಂಪೂರ್ಣವಾಗಿ ಸ್ಥಗಿತವಾಗಿದೆ.</p>.<p>‘ಪ್ರತಿ ತಿಂಗಳು ಹಲವು ಸರ್ಕಾರಿ ನೌಕರರು ಬಡ್ತಿ ಸಿಗದೇ ನಿವೃತ್ತಿ ಹೊಂದುತ್ತಿದ್ದಾರೆ. ಇದರಿಂದಾಗಿ ನೌಕರರಲ್ಲಿ ಗೊಂದಲ, ಅಸಮಾಧಾನ, ಸ್ಥೈರ್ಯ ಕುಗ್ಗಿದೆ. ಕೋವಿಡ್–19 ಪಿಡುಗಿನ ಈ ಸಂದರ್ಭದಲ್ಲಿ ಜನರ ಸೇವೆಯಲ್ಲಿ ಸರ್ಕಾರಿ ನೌಕರರು ಮುಂಚೂಣಿಯಲ್ಲಿದ್ದು, ಅವರ ಸ್ಥೈರ್ಯ ಹೆಚ್ಚಿಸುವುದು ಮುಖ್ಯ’ ಎಂದು ಸರ್ಕಾರ ಅಭಿಪ್ರಾಯಪಟ್ಟಿದೆ.</p>.<p>‘ಇಲಾಖೆಗಳಲ್ಲಿ ಹಲವು ತಿಂಗಳಿಂದ ಹುದ್ದೆಗಳು ಖಾಲಿ ಇರುವುದು ಸರ್ಕಾರಗಳ ಕಾರ್ಯವೈಖರಿಯ ಮೇಲೂ ಪರಿಣಾಮ ಬೀರಲಿದೆ. ಇದರಿಂದ ಜನರಿಗೇ ಸಮಸ್ಯೆಯಾಗಲಿದೆ’ ಎಂದು ಕೇಂದ್ರ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>