ಹೇಗ್ನಲ್ಲಿರುವ ವ್ಯಾಜ್ಯಗಳ ಕಾಯಂ ನ್ಯಾಯಾಲಯವು (ಪಿಸಿಎ) ನೀಡಿರುವ ತೀರ್ಪಿನ ಬೆನ್ನಲ್ಲೇ ಕೇಂದ್ರ ಸರ್ಕಾರವು ಈ ನಿರ್ಧಾರ ಕೈಗೊಂಡಿದೆ. ಭಾರತದ ಪರವಾಗಿ ತೀರ್ಪು ನೀಡಿದ್ದ ಪಿಸಿಎ, ಮೃತ ಮೀನುಗಾರರ ಕುಟುಂಬಕ್ಕೆ ಪರಿಹಾರ ಒದಗಿಸಲು ಆದೇಶಿಸಿತ್ತು. ಆದರೆ, ನಾವಿಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಅವಕಾಶವಿಲ್ಲ ಎಂದು ಸೂಚಿಸಿತ್ತು.