<p><strong>ತಿರುವನಂತಪುರ</strong>: ಯೆಮೆನ್ನಲ್ಲಿ ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಕೇರಳದ ನರ್ಸ್ ನಿಮಿಷಾ ಪ್ರಿಯಾಳ ಮರಣದಂಡನೆ ರದ್ದು ಮಾಡಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಆರೋಪಿಸಿದ್ದಾರೆ.</p><p>ಈ ವಿಷಯವನ್ನು ಪ್ರಧಾನಿ ಮತ್ತು ವಿದೇಶಾಂಗ ಸಚಿವಾಲಯದ ಗಮನಕ್ಕೆ ತಂದಿದ್ದರೂ ಕೇಂದ್ರವು ಯಾವುದೇ ತುರ್ತು ಆಸಕ್ತಿ ತೋರಿಸದಿರುವುದು ದುಃಖಕರ ಎಂದು ವೇಣುಗೋಪಾಲ್ ವಾದಿಸಿದ್ದಾರೆ.</p><p>ಅಲಪ್ಪುಳ ಲೋಕಸಭಾ ಕ್ಷೇತ್ರದ ಸಂಸದರೂ ಆಗಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್, ಸಾಮಾಜಿಕ ಮಾಧ್ಯಮ ವೇದಿಕೆ 'ಎಕ್ಸ್' ನಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಪ್ರಿಯಾಗೆ ವಿಧಿಸಲಾಗಿರುವ ಮರಣದಂಡನೆ ಶಿಕ್ಷೆಯು ನ್ಯಾಯದ ಗಂಭೀರ ವಿಡಂಬನೆ ಎಂದು ಹೇಳಿದ್ದಾರೆ.</p><p>ವಿದೇಶಿ ನೆಲದಲ್ಲಿ ಊಹಿಸಲಾಗದ ಕ್ರೌರ್ಯ ಮತ್ತು ದೌರ್ಜನ್ಯಕ್ಕೆ ಪ್ರಿಯಾ ಬಲಿಯಾಗಿದ್ದಾರೆ. ಅವರಿಗೆ ವಿಧಿಸಿರುವ ಶಿಕ್ಷೆ ನ್ಯಾಯವಲ್ಲ. ಅವರ ಮರಣದಂಡನೆಯನ್ನು ತಡೆಯಲು ತುರ್ತು ಮಧ್ಯಪ್ರವೇಶಕ್ಕೆ ಕೋರಿ ನಾನು ಪ್ರಧಾನಿಗೆ ಪತ್ರ ಬರೆದಿದ್ದೇನೆ ಎಂದು ಅವರು ಪೋಸ್ಟ್ನಲ್ಲಿ ತಿಳಿಸಿದ್ದಾರೆ.</p><p>ಪ್ರಿಯಾಳ ಬಿಡುಗಡೆ ಪ್ರಯತ್ನಗಳಿಗಾಗಿ ₹ 1 ಕೋಟಿ ದೇಣಿಗೆ ಸಂಗ್ರಹಿಸಿದ್ದು, ಕೂಡಲೇ ಒಮನ್ಗೆ ತೆರಳುತ್ತಿದ್ದಾನೆ. ಪ್ರಿಯಾ ಬಿಡುಗಡೆ ಸಂಬಂಧ ನನಗೆ ಸಹಾಯ ಮಾಡುವುದಾಗಿ ಅಲ್ಲೊಬ್ಬರು ಹೇಳಿದ್ದಾರೆ ಎಂದು ಉದ್ಯಮಿ ಬಾಬಿ ಚೆಮ್ಮನೂರ್ ಹೇಳಿದ್ದಾರೆ.</p><p>ಬೋಚೆ ಫ್ಯಾನ್ಸ್ ಚಾರಿಟೇಬಲ್ ಟ್ರಸ್ಟ್ ಈ ಹಣವನ್ನು ಸಂಗ್ರಹಿಸಿದೆ ಎಂದು ಅವರು ಹೇಳಿದ್ದು, ಅಗತ್ಯವಿರುವ ಯಾವುದೇ ಹೆಚ್ಚುವರಿ ಹಣವನ್ನು ಮಲಯಾಳಿ ಸಮುದಾಯ ಮತ್ತು ನಿಮಿಷ ಪ್ರಿಯಾ ಆಕ್ಷನ್ ಕೌನ್ಸಿಲ್ ಒದಗಿಸಲಿದೆ ಎಂದು ಅವರು ತಿಳಿಸಿದ್ದಾರೆ.</p><p>ಶಿಕ್ಷೆಯನ್ನು ಕಡಿಮೆ ಮಾಡಲು ತಕ್ಷಣವೇ ಮಧ್ಯಪ್ರವೇಶಿಸುವಂತೆ ಕೇರಳದ ಆಡಳಿತಾರೂಢ ಎಡ ಪ್ರಜಾಸತ್ತಾತ್ಮಕ ರಂಗ (ಎಲ್ಡಿಎಫ್) ಶುಕ್ರವಾರ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.</p><p>ಪಾಲಕ್ಕಾಡ್ ಜಿಲ್ಲೆಯ ಕೊಲ್ಲೆಂಗೋಡ್ನವರಾದ ನಿಮಿಷಾ ಪ್ರಿಯಾ, ತನ್ನ ವ್ಯವಹಾರ ಪಾಲುದಾರನಾಗಿದ್ದ ಯೆಮೆನ್ ವ್ಯಕ್ತಿಯ ಕೊಲೆಗೆ ಸಂಬಂಧಿಸಿದಂತೆ 2020ರಲ್ಲಿ ಶಿಕ್ಷೆಗೊಳಗಾಗಿದ್ದರು.</p><p>2017ರ ಜುಲೈನಲ್ಲಿ ಕೊಲೆ ನಡೆದಿತ್ತು. ಕಳೆದ ವರ್ಷದ ನವೆಂಬರ್ನಲ್ಲಿ ಯೆಮೆನ್ನ ಸುಪ್ರೀಂ ಜುಡಿಷಿಯಲ್ ಕೌನ್ಸಿಲ್, ನಿಮಿಷಾ ಅವರ ಮೇಲ್ಮನವಿಯನ್ನು ತಿರಸ್ಕರಿಸಿತ್ತು. ಈ ಹಿನ್ನೆಲೆಯಲ್ಲಿ ಅವರ ಗಲ್ಲು ಶಿಕ್ಷೆಯನ್ನು ಜುಲೈ 16ರಂದು ಜಾರಿಗೊಳಿಸಲು ಆದೇಶಿಸಲಾಗಿದೆ. ಪ್ರಿಯಾ ಪ್ರಸ್ತುತ ಸನಾ ಕೇಂದ್ರ ಕಾರಾಗೃಹದಲ್ಲಿದ್ದಾರೆ.</p>.ಯೆಮೆನ್: ಕೇರಳ ಮೂಲದ ನರ್ಸ್ ನಿಮಿಷಾ ಪ್ರಿಯಾಗೆ 16ರಂದು ಮರಣದಂಡನೆ.ಕ್ಷಮೆಯ ನಿರೀಕ್ಷೆಯಲ್ಲಿ ಮರಣ ದಂಡನೆಗೆ ಗುರಿಯಾಗಿರುವ ಕೇರಳ ನರ್ಸ್ ಕುಟುಂಬಸ್ಥರು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ</strong>: ಯೆಮೆನ್ನಲ್ಲಿ ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಕೇರಳದ ನರ್ಸ್ ನಿಮಿಷಾ ಪ್ರಿಯಾಳ ಮರಣದಂಡನೆ ರದ್ದು ಮಾಡಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಆರೋಪಿಸಿದ್ದಾರೆ.</p><p>ಈ ವಿಷಯವನ್ನು ಪ್ರಧಾನಿ ಮತ್ತು ವಿದೇಶಾಂಗ ಸಚಿವಾಲಯದ ಗಮನಕ್ಕೆ ತಂದಿದ್ದರೂ ಕೇಂದ್ರವು ಯಾವುದೇ ತುರ್ತು ಆಸಕ್ತಿ ತೋರಿಸದಿರುವುದು ದುಃಖಕರ ಎಂದು ವೇಣುಗೋಪಾಲ್ ವಾದಿಸಿದ್ದಾರೆ.</p><p>ಅಲಪ್ಪುಳ ಲೋಕಸಭಾ ಕ್ಷೇತ್ರದ ಸಂಸದರೂ ಆಗಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್, ಸಾಮಾಜಿಕ ಮಾಧ್ಯಮ ವೇದಿಕೆ 'ಎಕ್ಸ್' ನಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಪ್ರಿಯಾಗೆ ವಿಧಿಸಲಾಗಿರುವ ಮರಣದಂಡನೆ ಶಿಕ್ಷೆಯು ನ್ಯಾಯದ ಗಂಭೀರ ವಿಡಂಬನೆ ಎಂದು ಹೇಳಿದ್ದಾರೆ.</p><p>ವಿದೇಶಿ ನೆಲದಲ್ಲಿ ಊಹಿಸಲಾಗದ ಕ್ರೌರ್ಯ ಮತ್ತು ದೌರ್ಜನ್ಯಕ್ಕೆ ಪ್ರಿಯಾ ಬಲಿಯಾಗಿದ್ದಾರೆ. ಅವರಿಗೆ ವಿಧಿಸಿರುವ ಶಿಕ್ಷೆ ನ್ಯಾಯವಲ್ಲ. ಅವರ ಮರಣದಂಡನೆಯನ್ನು ತಡೆಯಲು ತುರ್ತು ಮಧ್ಯಪ್ರವೇಶಕ್ಕೆ ಕೋರಿ ನಾನು ಪ್ರಧಾನಿಗೆ ಪತ್ರ ಬರೆದಿದ್ದೇನೆ ಎಂದು ಅವರು ಪೋಸ್ಟ್ನಲ್ಲಿ ತಿಳಿಸಿದ್ದಾರೆ.</p><p>ಪ್ರಿಯಾಳ ಬಿಡುಗಡೆ ಪ್ರಯತ್ನಗಳಿಗಾಗಿ ₹ 1 ಕೋಟಿ ದೇಣಿಗೆ ಸಂಗ್ರಹಿಸಿದ್ದು, ಕೂಡಲೇ ಒಮನ್ಗೆ ತೆರಳುತ್ತಿದ್ದಾನೆ. ಪ್ರಿಯಾ ಬಿಡುಗಡೆ ಸಂಬಂಧ ನನಗೆ ಸಹಾಯ ಮಾಡುವುದಾಗಿ ಅಲ್ಲೊಬ್ಬರು ಹೇಳಿದ್ದಾರೆ ಎಂದು ಉದ್ಯಮಿ ಬಾಬಿ ಚೆಮ್ಮನೂರ್ ಹೇಳಿದ್ದಾರೆ.</p><p>ಬೋಚೆ ಫ್ಯಾನ್ಸ್ ಚಾರಿಟೇಬಲ್ ಟ್ರಸ್ಟ್ ಈ ಹಣವನ್ನು ಸಂಗ್ರಹಿಸಿದೆ ಎಂದು ಅವರು ಹೇಳಿದ್ದು, ಅಗತ್ಯವಿರುವ ಯಾವುದೇ ಹೆಚ್ಚುವರಿ ಹಣವನ್ನು ಮಲಯಾಳಿ ಸಮುದಾಯ ಮತ್ತು ನಿಮಿಷ ಪ್ರಿಯಾ ಆಕ್ಷನ್ ಕೌನ್ಸಿಲ್ ಒದಗಿಸಲಿದೆ ಎಂದು ಅವರು ತಿಳಿಸಿದ್ದಾರೆ.</p><p>ಶಿಕ್ಷೆಯನ್ನು ಕಡಿಮೆ ಮಾಡಲು ತಕ್ಷಣವೇ ಮಧ್ಯಪ್ರವೇಶಿಸುವಂತೆ ಕೇರಳದ ಆಡಳಿತಾರೂಢ ಎಡ ಪ್ರಜಾಸತ್ತಾತ್ಮಕ ರಂಗ (ಎಲ್ಡಿಎಫ್) ಶುಕ್ರವಾರ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.</p><p>ಪಾಲಕ್ಕಾಡ್ ಜಿಲ್ಲೆಯ ಕೊಲ್ಲೆಂಗೋಡ್ನವರಾದ ನಿಮಿಷಾ ಪ್ರಿಯಾ, ತನ್ನ ವ್ಯವಹಾರ ಪಾಲುದಾರನಾಗಿದ್ದ ಯೆಮೆನ್ ವ್ಯಕ್ತಿಯ ಕೊಲೆಗೆ ಸಂಬಂಧಿಸಿದಂತೆ 2020ರಲ್ಲಿ ಶಿಕ್ಷೆಗೊಳಗಾಗಿದ್ದರು.</p><p>2017ರ ಜುಲೈನಲ್ಲಿ ಕೊಲೆ ನಡೆದಿತ್ತು. ಕಳೆದ ವರ್ಷದ ನವೆಂಬರ್ನಲ್ಲಿ ಯೆಮೆನ್ನ ಸುಪ್ರೀಂ ಜುಡಿಷಿಯಲ್ ಕೌನ್ಸಿಲ್, ನಿಮಿಷಾ ಅವರ ಮೇಲ್ಮನವಿಯನ್ನು ತಿರಸ್ಕರಿಸಿತ್ತು. ಈ ಹಿನ್ನೆಲೆಯಲ್ಲಿ ಅವರ ಗಲ್ಲು ಶಿಕ್ಷೆಯನ್ನು ಜುಲೈ 16ರಂದು ಜಾರಿಗೊಳಿಸಲು ಆದೇಶಿಸಲಾಗಿದೆ. ಪ್ರಿಯಾ ಪ್ರಸ್ತುತ ಸನಾ ಕೇಂದ್ರ ಕಾರಾಗೃಹದಲ್ಲಿದ್ದಾರೆ.</p>.ಯೆಮೆನ್: ಕೇರಳ ಮೂಲದ ನರ್ಸ್ ನಿಮಿಷಾ ಪ್ರಿಯಾಗೆ 16ರಂದು ಮರಣದಂಡನೆ.ಕ್ಷಮೆಯ ನಿರೀಕ್ಷೆಯಲ್ಲಿ ಮರಣ ದಂಡನೆಗೆ ಗುರಿಯಾಗಿರುವ ಕೇರಳ ನರ್ಸ್ ಕುಟುಂಬಸ್ಥರು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>