ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಜೆ.ಬಿ. ಪಾರ್ದಿವಾಲಾ ಅವರನ್ನೊಳಗೊಂಡ ನ್ಯಾಯಪೀಠವು, ‘ಭಾರತ ಸರ್ಕಾರ ಹಾಗೂ ತನಿಖಾ ಸಂಸ್ಥೆಗಳು ಮಾದಕ ದ್ರವ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ದೊಡ್ಡದೊಡ್ಡ ತಿಮಿಂಗಲಗಳನ್ನು ಬಂಧಿಸುತ್ತಿಲ್ಲ. ಅಷ್ಟೇ ಅಲ್ಲ, ಅಂತರರಾಷ್ಟ್ರೀಯ ಡ್ರಗ್ಸ್ ಒಕ್ಕೂಟಗಳತ್ತಲೂ ಗಮನ ಹರಿಸುತ್ತಿಲ್ಲ. ಅದರ ಬದಲು ಸಣ್ಣ ಮೀನುಗಳನ್ನು ಹಿಡಿಯುತ್ತಿದ್ದೀರಿ’ ಎಂದು ಚಾಟಿ ಬೀಸಿದೆ.