<p><strong>ಇಂಫಾಲ್(ಪಿಟಿಐ):</strong> ಕೇಂದ್ರ ಗೃಹ ಸಚಿವಾಲಯವು ಮಣಿಪುರದಲ್ಲಿ ‘ಸಂರಕ್ಷಿತ ಪ್ರದೇಶ ಪರವಾನಗಿ’(ಪಿಎಪಿ) ವ್ಯವಸ್ಥೆಯನ್ನು ಮತ್ತೆ ಜಾರಿಗೊಳಿಸಿದೆ.</p>.<p>ಭದ್ರತೆ ವಿಚಾರವಾಗಿ, ನೆರೆ ದೇಶಗಳಿಂದ ಮಣಿಪುರದೊಳಗೆ ನುಸುಳುವವರಿಂದ ಉಂಟಾಗುತ್ತಿರುವ ಸಮಸ್ಯೆ ಪರಿಗಣಿಸಿ, ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರದ ಪ್ರಕಟಣೆ ತಿಳಿಸಿದೆ.</p>.<p>‘ಈ (ಪಿಎಪಿ) ವ್ಯವಸ್ಥೆ ಜಾರಿಯಾಗಿರುವುದರಿಂದ, ಮಣಿಪುರಕ್ಕೆ ಭೇಟಿ ನೀಡುವ ವಿದೇಶಿಯರ ಚಲನವಲಗಳ ಮೇಲೆ ನಿಗಾ ಇಡಲಾಗುತ್ತದೆ. ಅಲ್ಲದೇ, ‘ವಿದೇಶಿಯರ (ಸಂರಕ್ಷಿತ ಪ್ರದೇಶಗಳು) ಆದೇಶ–1958’ರ ಅನ್ವಯ, ರಾಜ್ಯಕ್ಕೆ ಭೇಟಿ ನೀಡುವ ವಿದೇಶಿ ಪ್ರಜೆಗಳು ‘ಪಿಎಪಿ’ ಪಡೆಯುವುದು ಕಡ್ಡಾಯ’ ಎಂದು ಪ್ರಕಟಣೆ ತಿಳಿಸಿದೆ.</p>.<p>ನಾಗಾಲ್ಯಾಂಡ್ ಹಾಗೂ ಮಿಜೋರಾಂ ರಾಜ್ಯಗಳಲ್ಲಿಯೂ ‘ಪಿಎಪಿ’ ವ್ಯವಸ್ಥೆಯನ್ನು ಗೃಹ ಸಚಿವಾಲಯ ಜಾರಿಗೊಳಿಸಿದೆ.</p>.<p><strong>ಕಾರಣವೇನು?:</strong> ಸೇನಾಪತಿ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಕ್ಕೆ ಪ್ರಯಾಣಿಸುವಾಗ ಕಾಂಗ್ಪೋಕ್ಪಿ ಜಿಲ್ಲೆ ಮೂಲಕ ಸಾಗದಂತೆ ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ಅವರಿಗೆ ‘ಕುಕಿ ಜೋ ಕೌನ್ಸಿಲ್’ ಎಂಬ ಸಂಘಟನೆ ಇತ್ತೀಚೆಗೆ ಎಚ್ಚರಿಕೆ ನೀಡಿತ್ತು.</p>.<p>‘ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಮಣಿಪುರ ಪೊಲೀಸರು ತನಿಖೆ ನಡೆಸಿದಾಗ, ಮಣಿಪುರದಲ್ಲಿ ಅಂತಹ ಹೆಸರಿನ ಸಂಘಟನೆಯೇ ಅಸ್ತಿತ್ವದಲ್ಲಿ ಇಲ್ಲ ಎಂಬುದು ಗೊತ್ತಾಯಿತು. ಅಲ್ಲದೇ, ಈ ಸಂಘಟನೆಯ ಮೂಲ ಹಾಗೂ ವಿಶ್ವಾಸಾರ್ಹತೆಯೇ ಪ್ರಶ್ನಾರ್ಹವಾಗಿರುವುದು ಕಂಡುಬಂತು’ ಎಂದು ಪ್ರಕಟಣೆ ತಿಳಿಸಿದೆ.</p>.<p>‘ಇಂತಹ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಇಲಾಖೆ ಮುಂದಾಗಿದ್ದು, ಸಂಘಟನೆಯ ಸ್ವರೂಪವನ್ನು ದೃಢಪಡಿಸಿಕೊಳ್ಳುವುದಕ್ಕಾಗಿ ಎಫ್ಐಆರ್ ದಾಖಲಿಸಲು ನಿರ್ಧರಿಸಿದೆ’ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂಫಾಲ್(ಪಿಟಿಐ):</strong> ಕೇಂದ್ರ ಗೃಹ ಸಚಿವಾಲಯವು ಮಣಿಪುರದಲ್ಲಿ ‘ಸಂರಕ್ಷಿತ ಪ್ರದೇಶ ಪರವಾನಗಿ’(ಪಿಎಪಿ) ವ್ಯವಸ್ಥೆಯನ್ನು ಮತ್ತೆ ಜಾರಿಗೊಳಿಸಿದೆ.</p>.<p>ಭದ್ರತೆ ವಿಚಾರವಾಗಿ, ನೆರೆ ದೇಶಗಳಿಂದ ಮಣಿಪುರದೊಳಗೆ ನುಸುಳುವವರಿಂದ ಉಂಟಾಗುತ್ತಿರುವ ಸಮಸ್ಯೆ ಪರಿಗಣಿಸಿ, ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರದ ಪ್ರಕಟಣೆ ತಿಳಿಸಿದೆ.</p>.<p>‘ಈ (ಪಿಎಪಿ) ವ್ಯವಸ್ಥೆ ಜಾರಿಯಾಗಿರುವುದರಿಂದ, ಮಣಿಪುರಕ್ಕೆ ಭೇಟಿ ನೀಡುವ ವಿದೇಶಿಯರ ಚಲನವಲಗಳ ಮೇಲೆ ನಿಗಾ ಇಡಲಾಗುತ್ತದೆ. ಅಲ್ಲದೇ, ‘ವಿದೇಶಿಯರ (ಸಂರಕ್ಷಿತ ಪ್ರದೇಶಗಳು) ಆದೇಶ–1958’ರ ಅನ್ವಯ, ರಾಜ್ಯಕ್ಕೆ ಭೇಟಿ ನೀಡುವ ವಿದೇಶಿ ಪ್ರಜೆಗಳು ‘ಪಿಎಪಿ’ ಪಡೆಯುವುದು ಕಡ್ಡಾಯ’ ಎಂದು ಪ್ರಕಟಣೆ ತಿಳಿಸಿದೆ.</p>.<p>ನಾಗಾಲ್ಯಾಂಡ್ ಹಾಗೂ ಮಿಜೋರಾಂ ರಾಜ್ಯಗಳಲ್ಲಿಯೂ ‘ಪಿಎಪಿ’ ವ್ಯವಸ್ಥೆಯನ್ನು ಗೃಹ ಸಚಿವಾಲಯ ಜಾರಿಗೊಳಿಸಿದೆ.</p>.<p><strong>ಕಾರಣವೇನು?:</strong> ಸೇನಾಪತಿ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಕ್ಕೆ ಪ್ರಯಾಣಿಸುವಾಗ ಕಾಂಗ್ಪೋಕ್ಪಿ ಜಿಲ್ಲೆ ಮೂಲಕ ಸಾಗದಂತೆ ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ಅವರಿಗೆ ‘ಕುಕಿ ಜೋ ಕೌನ್ಸಿಲ್’ ಎಂಬ ಸಂಘಟನೆ ಇತ್ತೀಚೆಗೆ ಎಚ್ಚರಿಕೆ ನೀಡಿತ್ತು.</p>.<p>‘ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಮಣಿಪುರ ಪೊಲೀಸರು ತನಿಖೆ ನಡೆಸಿದಾಗ, ಮಣಿಪುರದಲ್ಲಿ ಅಂತಹ ಹೆಸರಿನ ಸಂಘಟನೆಯೇ ಅಸ್ತಿತ್ವದಲ್ಲಿ ಇಲ್ಲ ಎಂಬುದು ಗೊತ್ತಾಯಿತು. ಅಲ್ಲದೇ, ಈ ಸಂಘಟನೆಯ ಮೂಲ ಹಾಗೂ ವಿಶ್ವಾಸಾರ್ಹತೆಯೇ ಪ್ರಶ್ನಾರ್ಹವಾಗಿರುವುದು ಕಂಡುಬಂತು’ ಎಂದು ಪ್ರಕಟಣೆ ತಿಳಿಸಿದೆ.</p>.<p>‘ಇಂತಹ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಇಲಾಖೆ ಮುಂದಾಗಿದ್ದು, ಸಂಘಟನೆಯ ಸ್ವರೂಪವನ್ನು ದೃಢಪಡಿಸಿಕೊಳ್ಳುವುದಕ್ಕಾಗಿ ಎಫ್ಐಆರ್ ದಾಖಲಿಸಲು ನಿರ್ಧರಿಸಿದೆ’ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>