<p class="title"><strong>ನವದೆಹಲಿ: </strong>ಕೋವಿಡ್–19ನಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡಲು ರಾಜ್ಯ ವಿಕೋಪ ಸ್ಪಂದನೆ ನಿಧಿಗೆ (ಎಸ್ಡಿಆರ್ಎಫ್) ಸಂಬಂಧಿಸಿದ ತನ್ನ ಪಾಲಿನ ಎರಡನೇ ಕಂತಿನ ಮೊತ್ತ ₹7,274 ಕೋಟಿಯನ್ನು 23 ರಾಜ್ಯಗಳಿಗೆ ಮುಂಗಡವಾಗಿ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಶುಕ್ರವಾರ ಅನುಮೋದನೆ ನೀಡಿದೆ.</p>.<p class="title">ಕೋವಿಡ್–19ನಿಂದ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ನೀಡುವಂತೆ ಕೋರಿ ಕೆಲವರು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ನಂತರ, ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿತ್ತು. ಕೋವಿಡ್ ಸಂತ್ರಸ್ತರ ಕುಟಂಬಗಳಿಗೆ ₹50 ಸಾವಿರ ಪರಿಹಾರ ನೀಡುವುದಾಗಿ ಕೇಂದ್ರ ಸರ್ಕಾರ ಕಳೆದ ತಿಂಗಳು ಸುಪ್ರೀಂಕೋರ್ಟ್ಗೆ ಹೇಳಿತ್ತು.</p>.<div dir="ltr"><p>ಎಸ್ಡಿಆರ್ಎಫ್ ಅಡಿಯಲ್ಲಿ ಮಾನದಂಡಗಳನ್ನು ಪರಿಷ್ಕರಿಸಿ ಕೋವಿಡ್ನಿಂದ ಮೃತರಾದವರ ಹತ್ತಿರದ ಸಂಬಂಧಿಕರಿಗೆ ಎಕ್ಸ್ ಗ್ರೇಷಿಯಾ ಪಾವತಿಸುವ ಸಂಬಂಧ ಕೇಂದ್ರ ಸರ್ಕಾರ ಸೆಪ್ಟೆಂಬರ್ 25 ರಂದು ಆದೇಶ ಹೊರಡಿಸಿತ್ತು.</p><p>ಐದು ರಾಜ್ಯಗಳಿಗೆ ಈಗಾಗಲೇ ಎರಡನೇ ಕಂತಿನ ಮೊತ್ತ ₹1,599 ಕೋಟಿ ಬಿಡುಗಡೆ ಮಾಡಲಾಗಿದೆ ಎಂದೂ ಕೇಂದ್ರ ತಿಳಿಸಿದೆ.</p></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ: </strong>ಕೋವಿಡ್–19ನಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡಲು ರಾಜ್ಯ ವಿಕೋಪ ಸ್ಪಂದನೆ ನಿಧಿಗೆ (ಎಸ್ಡಿಆರ್ಎಫ್) ಸಂಬಂಧಿಸಿದ ತನ್ನ ಪಾಲಿನ ಎರಡನೇ ಕಂತಿನ ಮೊತ್ತ ₹7,274 ಕೋಟಿಯನ್ನು 23 ರಾಜ್ಯಗಳಿಗೆ ಮುಂಗಡವಾಗಿ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಶುಕ್ರವಾರ ಅನುಮೋದನೆ ನೀಡಿದೆ.</p>.<p class="title">ಕೋವಿಡ್–19ನಿಂದ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ನೀಡುವಂತೆ ಕೋರಿ ಕೆಲವರು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ನಂತರ, ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿತ್ತು. ಕೋವಿಡ್ ಸಂತ್ರಸ್ತರ ಕುಟಂಬಗಳಿಗೆ ₹50 ಸಾವಿರ ಪರಿಹಾರ ನೀಡುವುದಾಗಿ ಕೇಂದ್ರ ಸರ್ಕಾರ ಕಳೆದ ತಿಂಗಳು ಸುಪ್ರೀಂಕೋರ್ಟ್ಗೆ ಹೇಳಿತ್ತು.</p>.<div dir="ltr"><p>ಎಸ್ಡಿಆರ್ಎಫ್ ಅಡಿಯಲ್ಲಿ ಮಾನದಂಡಗಳನ್ನು ಪರಿಷ್ಕರಿಸಿ ಕೋವಿಡ್ನಿಂದ ಮೃತರಾದವರ ಹತ್ತಿರದ ಸಂಬಂಧಿಕರಿಗೆ ಎಕ್ಸ್ ಗ್ರೇಷಿಯಾ ಪಾವತಿಸುವ ಸಂಬಂಧ ಕೇಂದ್ರ ಸರ್ಕಾರ ಸೆಪ್ಟೆಂಬರ್ 25 ರಂದು ಆದೇಶ ಹೊರಡಿಸಿತ್ತು.</p><p>ಐದು ರಾಜ್ಯಗಳಿಗೆ ಈಗಾಗಲೇ ಎರಡನೇ ಕಂತಿನ ಮೊತ್ತ ₹1,599 ಕೋಟಿ ಬಿಡುಗಡೆ ಮಾಡಲಾಗಿದೆ ಎಂದೂ ಕೇಂದ್ರ ತಿಳಿಸಿದೆ.</p></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>