<p><strong>ಶ್ರೀನಗರ:</strong> ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಜಿಲ್ಲಾ ಅಭಿವೃದ್ಧಿ ಮಂಡಳಿ(ಡಿಡಿಸಿ) ಚುನಾವಣೆಗೆ ಸ್ಪರ್ಧಿಸಿರುವ ಬಿಜೆಪಿಯೇತರ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಮುಕ್ತವಾಗಿ ಚುನಾವಣಾ ಪ್ರಚಾರ ನಡೆಸದಂತೆ ಕೇಂದ್ರ ಸರ್ಕಾರ ಉದ್ದೇಶಪೂರ್ವಕವಾಗಿ ಅಡ್ಡಿಪಡಿಸುತ್ತಿದೆ ಎಂದು ಪಿಡಿಪಿ ಪಕ್ಷದ ಅಧ್ಯಕ್ಷೆ ಮೆಹಬೂಬ ಮಫ್ತಿ ಆರೋಪಿಸಿದ್ದಾರೆ.</p>.<p>’ಚುನಾವಣಾ ಪ್ರಚಾರಕ್ಕೆ ಅಡ್ಡಿಪಡಿಸುವ ಮೂಲಕ ಬಿಜೆಪಿಯೇತರ ಪಕ್ಷಗಳು ಚುನಾವಣೆಯಲ್ಲಿ ಭಾಗವಹಿಸದಂತೆ ಮಾಡುತ್ತಿದೆ‘ ಎಂದು ಅವರು ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ.</p>.<p>‘ನ್ಯಾಷನಲ್ ಕಾನ್ಫರೆನ್ಸ್ ಮತ್ತು ಪಿಡಿಪಿ ಸೇರಿದಂತೆ ಕಣಿವೆ ರಾಜ್ಯದ ಪ್ರಮುಖ ರಾಜಕೀಯ ಪಕ್ಷಗಳು ಒಂದು ಹಂತದವರೆಗೆ ತಮ್ಮ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದರು. ಆದರೆ, ಈ ಪಕ್ಷದ ಅಭ್ಯರ್ಥಿಗಳನ್ನು ಹಲವು ವಸತಿಗೃಹಗಳಲ್ಲಿ ಬಂಧಿಸಿಡಲಾಗಿದೆ. ಈ ಮೂಲಕ ಅವರಿಗೆ ಪ್ರಚಾರ ಮಾಡಲು ಅವಕಾಶ ನೀಡುತ್ತಿಲ್ಲ‘ ಎಂದು ಮೆಹಬೂಬ ಆರೋಪಿಸಿದ್ದಾರೆ.</p>.<p>ಭದ್ರತೆಯ ನೆಪದಲ್ಲಿ ಪಿಡಿಪಿಯ ಅಭ್ಯರ್ಥಿ ಬಶೀರ್ ಅಹ್ಮದ್ ಅವರನ್ನು ಪಹಲ್ಗಂನಲ್ಲಿ ಬಂಧಿಸಲಾಗಿದೆ. ನಾಮಪತ್ರ ಸಲ್ಲಿಸಲು ಇಂದು ಕೊನೆಯದಿನವಾಗಿದ್ದು, ಬಶೀರ್ ಅವರನ್ನು ಬಿಡುಗಡೆ ಮಾಡುವಂತೆ ಮೆಹಬೂಬ ಅವರು ಅನಂತ್ನಾಗ್ ಜಿಲ್ಲೆಯ ಜಿಲ್ಲಾಧಿಕಾರಿಗೆ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.</p>.<p>ಮುಫ್ತಿ ಅವರ ಆರೋಪಕ್ಕೆ ಪ್ರತಿಕ್ರಿಯಿಸಿರುವ ಪೊಲೀಸರು, ’ಪ್ರತಿ ಅಭ್ಯರ್ಥಿಗೆ ಭದ್ರತೆ ಒದಗಿಸುವುದು ಕಷ್ಟವಾದ ಕಾರಣ, ಅಭ್ಯರ್ಥಿಗಳಿಗೆ ಸಾಮೂಹಿಕ ಭದ್ರತೆ ಒದಗಿಸುವ ಜತೆಗೆ, ಸುರಕ್ಷಿತ ಪ್ರದೇಶಗಳಲ್ಲಿ ಇರಿಸಲಾಗುತ್ತಿದೆ‘ ಎಂದು ಪೊಲೀಸರು ಹೇಳಿದ್ದಾರೆ.</p>.<p>ಕಾಶ್ಮೀರದ ಪೊಲೀಸ್ ಇನ್ಸ್ಪೆಕ್ಟರ್ ಜನರಲ್ ವಿಜಯ್ ಕುಮಾರ್, ‘ಅಭ್ಯರ್ಥಿಗಳಿಗೆ ದುಪ್ಪಟ್ಟು ಬೆಂಗಾವಲು ಒದಗಿಸಿದ್ದೇವೆ. ಅವರು ತಮ್ಮ ವಸತಿ ಗೃಹದಿಂದ ಚುನಾವಣಾ ಪ್ರಚಾರಕ್ಕೆ ತೆರಳುವ ಪ್ರದೇಶದವರೆಗೂ ಭದ್ರತಾ ಪಡೆಗಳು ಅಭ್ಯರ್ಥಿಗಳಿಗೆ ರಕ್ಷಣೆ ಒದಗಿಸುತ್ತಿದ್ದಾರೆ‘ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ:</strong> ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಜಿಲ್ಲಾ ಅಭಿವೃದ್ಧಿ ಮಂಡಳಿ(ಡಿಡಿಸಿ) ಚುನಾವಣೆಗೆ ಸ್ಪರ್ಧಿಸಿರುವ ಬಿಜೆಪಿಯೇತರ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಮುಕ್ತವಾಗಿ ಚುನಾವಣಾ ಪ್ರಚಾರ ನಡೆಸದಂತೆ ಕೇಂದ್ರ ಸರ್ಕಾರ ಉದ್ದೇಶಪೂರ್ವಕವಾಗಿ ಅಡ್ಡಿಪಡಿಸುತ್ತಿದೆ ಎಂದು ಪಿಡಿಪಿ ಪಕ್ಷದ ಅಧ್ಯಕ್ಷೆ ಮೆಹಬೂಬ ಮಫ್ತಿ ಆರೋಪಿಸಿದ್ದಾರೆ.</p>.<p>’ಚುನಾವಣಾ ಪ್ರಚಾರಕ್ಕೆ ಅಡ್ಡಿಪಡಿಸುವ ಮೂಲಕ ಬಿಜೆಪಿಯೇತರ ಪಕ್ಷಗಳು ಚುನಾವಣೆಯಲ್ಲಿ ಭಾಗವಹಿಸದಂತೆ ಮಾಡುತ್ತಿದೆ‘ ಎಂದು ಅವರು ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ.</p>.<p>‘ನ್ಯಾಷನಲ್ ಕಾನ್ಫರೆನ್ಸ್ ಮತ್ತು ಪಿಡಿಪಿ ಸೇರಿದಂತೆ ಕಣಿವೆ ರಾಜ್ಯದ ಪ್ರಮುಖ ರಾಜಕೀಯ ಪಕ್ಷಗಳು ಒಂದು ಹಂತದವರೆಗೆ ತಮ್ಮ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದರು. ಆದರೆ, ಈ ಪಕ್ಷದ ಅಭ್ಯರ್ಥಿಗಳನ್ನು ಹಲವು ವಸತಿಗೃಹಗಳಲ್ಲಿ ಬಂಧಿಸಿಡಲಾಗಿದೆ. ಈ ಮೂಲಕ ಅವರಿಗೆ ಪ್ರಚಾರ ಮಾಡಲು ಅವಕಾಶ ನೀಡುತ್ತಿಲ್ಲ‘ ಎಂದು ಮೆಹಬೂಬ ಆರೋಪಿಸಿದ್ದಾರೆ.</p>.<p>ಭದ್ರತೆಯ ನೆಪದಲ್ಲಿ ಪಿಡಿಪಿಯ ಅಭ್ಯರ್ಥಿ ಬಶೀರ್ ಅಹ್ಮದ್ ಅವರನ್ನು ಪಹಲ್ಗಂನಲ್ಲಿ ಬಂಧಿಸಲಾಗಿದೆ. ನಾಮಪತ್ರ ಸಲ್ಲಿಸಲು ಇಂದು ಕೊನೆಯದಿನವಾಗಿದ್ದು, ಬಶೀರ್ ಅವರನ್ನು ಬಿಡುಗಡೆ ಮಾಡುವಂತೆ ಮೆಹಬೂಬ ಅವರು ಅನಂತ್ನಾಗ್ ಜಿಲ್ಲೆಯ ಜಿಲ್ಲಾಧಿಕಾರಿಗೆ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.</p>.<p>ಮುಫ್ತಿ ಅವರ ಆರೋಪಕ್ಕೆ ಪ್ರತಿಕ್ರಿಯಿಸಿರುವ ಪೊಲೀಸರು, ’ಪ್ರತಿ ಅಭ್ಯರ್ಥಿಗೆ ಭದ್ರತೆ ಒದಗಿಸುವುದು ಕಷ್ಟವಾದ ಕಾರಣ, ಅಭ್ಯರ್ಥಿಗಳಿಗೆ ಸಾಮೂಹಿಕ ಭದ್ರತೆ ಒದಗಿಸುವ ಜತೆಗೆ, ಸುರಕ್ಷಿತ ಪ್ರದೇಶಗಳಲ್ಲಿ ಇರಿಸಲಾಗುತ್ತಿದೆ‘ ಎಂದು ಪೊಲೀಸರು ಹೇಳಿದ್ದಾರೆ.</p>.<p>ಕಾಶ್ಮೀರದ ಪೊಲೀಸ್ ಇನ್ಸ್ಪೆಕ್ಟರ್ ಜನರಲ್ ವಿಜಯ್ ಕುಮಾರ್, ‘ಅಭ್ಯರ್ಥಿಗಳಿಗೆ ದುಪ್ಪಟ್ಟು ಬೆಂಗಾವಲು ಒದಗಿಸಿದ್ದೇವೆ. ಅವರು ತಮ್ಮ ವಸತಿ ಗೃಹದಿಂದ ಚುನಾವಣಾ ಪ್ರಚಾರಕ್ಕೆ ತೆರಳುವ ಪ್ರದೇಶದವರೆಗೂ ಭದ್ರತಾ ಪಡೆಗಳು ಅಭ್ಯರ್ಥಿಗಳಿಗೆ ರಕ್ಷಣೆ ಒದಗಿಸುತ್ತಿದ್ದಾರೆ‘ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>