‘ಪೆಟ್ರೋಲ್ ಮತ್ತು ಡೀಸೆಲ್ನ ಬೆಲೆ ಏರಿಕೆಯ ಹೊರೆಯನ್ನು ಜನರ ಮೇಲಿಂದ ಇಳಿಸಲು ಕಳೆದ ನವೆಂಬರ್ನಲ್ಲಿ ಕೇಂದ್ರ ಸರ್ಕಾರವು ಎಕ್ಸೈಸ್ ಸುಂಕವನ್ನು ಇಳಿಸಿತ್ತು. ರಾಜ್ಯಗಳೂ ತಮ್ಮ ಪಾಲಿನ ತೆರಿಗೆಯನ್ನು ಕಡಿತ ಮಾಡುವಂತೆ ಕೋರಿಕೊಂಡಿದ್ದೆವು. ಕೆಲವು ರಾಜ್ಯಗಳು ತೆರಿಗೆ ಕಡಿತ ಮಾಡಿದ್ದವು. ಕೆಲವು ರಾಜ್ಯಗಳು ತೆರಿಗೆ ಕಡಿತ ಮಾಡದೆ, ಅದರ ಲಾಭವನ್ನು ಜನರಿಗೆ ನೀಡಿಲ್ಲ. ಈ ಮೂಲಕ, ಆ ರಾಜ್ಯಗಳು ತಮ್ಮ ನಾಗರಿಕರಿಗೆ ಅನ್ಯಾಯ ಮಾಡಿವೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಅರೋಪಿಸಿದ್ದರು.