<p><strong>ನವದೆಹಲಿ:</strong> ರಾಷ್ಟ್ರೀಯ ರಕ್ಷಣಾ ಅಕಾಡೆಮಿ(ಎನ್ಡಿಎ)ಗೆ ಮಹಿಳೆಯರನ್ನು ಸೇರಿಸಿಕೊಳ್ಳಲು ನಿರ್ಧರಿಸಿರುವುದಾಗಿ ಕೇಂದ್ರ ಸರ್ಕಾರ ಬುಧವಾರ ಸುಪ್ರೀಂ ಕೋರ್ಟ್ಗೆ ಹೇಳಿದೆ. ಈ ಮೂಲಕ ಭಾರತೀಯ ಸಶಸ್ತ್ರ ಪಡೆ ಸೇರಬೇಕು ಎಂಬ ಮಹಿಳೆಯರ ಬಹು ದಿನಗಳ ಆಶಯಕ್ಕೆ ಗೆಲುವು ಸಿಕ್ಕಿದೆ.</p>.<p>ಮಹಿಳೆಯರನ್ನು ಸಶಸ್ತ್ರ ಪಡೆಗೆ ಸೇರಿಸಿಕೊಳ್ಳುವ ವಿಚಾರವಾಗಿ ಕೇಂದ್ರ ಸರ್ಕಾರದ ತೆಗೆದುಕೊಳ್ಳಲಿರುವ ಭವಿಷ್ಯದ ಯೋಜನೆಗಳ ಕುರಿತು ಮಾಹಿತಿ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದ್ದು, ಎರಡು ವಾರಗಳ ಕಾಲಾವಕಾಶವನ್ನು ನೀಡಿದೆ.</p>.<p>ಸೇನೆಯಲ್ಲಿ ಮಹಿಳೆಯರಿಗೆ ಅವಕಾಶ ನೀಡಬೇಕು ಎಂಬ ವಾದವನ್ನು ಎತ್ತಿ ಹಿಡಿದ ಸುಪ್ರೀಂ, 'ಮಹಿಳೆಯರ ಕುರಿತಾಗಿ ಇಂತಹ ಮನೋಭಾವವನ್ನು ಬದಲಿಸಿಕೊಳ್ಳಬೇಕು. ಇಂತಹ ವಿಚಾರಗಳಿಗೆಲ್ಲ ನ್ಯಾಯಾಲಯವು ಆದೇಶ ನೀಡುವ ವರೆಗೆ ಕಾಯಬಾರದು' ಎಂದಿದೆ.</p>.<p><a href="https://www.prajavani.net/entertainment/cinema/indrajit-lankesh-reaction-about-anushree-and-sandalwood-drugs-scandal-864969.html" itemprop="url">ಡ್ರಗ್ಸ್ ಕೇಸ್ನಲ್ಲಿ ಅನುಶ್ರೀ: ಎಲ್ಲರನ್ನೇಕೆ ಪರೀಕ್ಷಿಸಿಲ್ಲ ಎಂದ ಇಂದ್ರಜಿತ್ </a></p>.<p>ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ನೇತೃತ್ವದ ಪೀಠ ಕೇಂದ್ರ ಸರ್ಕಾರಪರ ಹೆಚ್ಚುವರಿ ಸಾಲಿಸಿಟರ್ ಜೆನೆರಲ್ ಐಶ್ವರ್ಯ ಭಾಟಿ ಅವರ 'ಈ ನೀತಿಯು ಕೇಂದ್ರ ಸರ್ಕಾರದ ನಿರ್ಧಾರವಾಗಿದೆ' ಎಂಬ ವಾದವನ್ನು ತಿರಸ್ಕರಿಸಿತು. 'ಈ ನೀತಿಯು ಲಿಂಗತಾರತಮ್ಯವನ್ನು ಒಳಗೊಂಡಿದೆ. ಈ ಕುರಿತು ಕೇಂದ್ರವು ರಚನಾತ್ಮಕ ಅವಲೋಕನ ಮಾಡಿಕೊಳ್ಳಬೇಕು' ಎಂದು ತಿಳಿಸಿದೆ.</p>.<p>ಕಳೆದ ಆಗಸ್ಟ್ನಲ್ಲಿ ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಪ್ರವೇಶ ಪರೀಕ್ಷೆಗೆ ಮಹಿಳೆಯರೂ ಹಾಜರಾಗಲು ಅನುಮತಿ ನೀಡುವಂತೆ ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶ ನೀಡಿತ್ತು. ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಹೃಷಿಕೇಶ್ ರಾಯ್ ಅವರಿದ್ದ ನ್ಯಾಯಪೀಠ ಈ ಆದೇಶ ಹೊರಡಿಸಿತ್ತು.</p>.<p><a href="https://www.prajavani.net/entertainment/cinema/trouble-for-mani-ratnams-ponniyan-selvan-mounts-after-demands-of-actress-trishas-arrest-864956.html" itemprop="url">ಚಪ್ಪಲಿ ಧರಿಸಿ ’ಶಿವ’ ದೇವಾಲಯದಲ್ಲಿ ಓಡಾಟ: ನಟಿ ತ್ರಿಷಾಗೆ ಬಂಧನ ಭೀತಿ </a></p>.<p>ಎನ್ಡಿಎ ಮತ್ತು ನೌಕಾದಳ ಅಕಾಡೆಮಿ ಪರೀಕ್ಷೆಗಳಿಗೆ ಹಾಜರಾಗಲು ಮಹಿಳಾ ಅಭ್ಯರ್ಥಿಗಳಿಗೆ ಅನುಮತಿ ನೀಡದ ಕೇಂದ್ರದ ನೀತಿಯನ್ನು ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು.</p>.<p>ಸಹ ಶಿಕ್ಷಣವು ಏಕೆ ಸಮಸ್ಯೆಯಾಗಲಿದೆ ಎಂದು ಪ್ರಶ್ನಿಸಿರುವ ನ್ಯಾಯಾಲಯ, ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ. ಇದು ಕೇವಲ ಲಿಂಗ ತತ್ವದ ಪ್ರಕರಣವಲ್ಲ. ಲಿಂಗತಾರತಮ್ಯವನ್ನು ಒಳಗೊಂಡಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತು.</p>.<p>ಸೇನೆಯಲ್ಲಿ ಮಹಿಳೆಯರಿಗೆ ಅವಕಾಶ ಇದೆ ಎಂದಾದರೆ, ಎನ್ಡಿಎ ಪ್ರವೇಶಕ್ಕೆ ಏಕೆ ತಡೆಹಿಡಿಯಲಾಗುತ್ತಿದೆ ಎಂದಿರುವ ನ್ಯಾಯಾಲಯ, ಸರ್ಕಾರ ಪ್ರತಿ ಬಾರಿ ನ್ಯಾಯಾಂಗದ ಮಧ್ಯಸ್ಥಿಕೆಯನ್ನು ಬಯಸಬಾರದು ಎಂದು ತಿಳಿಸಿತ್ತು.</p>.<p><a href="https://www.prajavani.net/india-news/sc-asks-journalists-to-move-hc-for-quashing-of-3-firs-lodged-in-up-864984.html" itemprop="url">ಪತ್ರಿಕಾ ಸ್ವಾತಂತ್ರ್ಯ: ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದ ಸುಪ್ರೀಂಕೋರ್ಟ್ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ರಾಷ್ಟ್ರೀಯ ರಕ್ಷಣಾ ಅಕಾಡೆಮಿ(ಎನ್ಡಿಎ)ಗೆ ಮಹಿಳೆಯರನ್ನು ಸೇರಿಸಿಕೊಳ್ಳಲು ನಿರ್ಧರಿಸಿರುವುದಾಗಿ ಕೇಂದ್ರ ಸರ್ಕಾರ ಬುಧವಾರ ಸುಪ್ರೀಂ ಕೋರ್ಟ್ಗೆ ಹೇಳಿದೆ. ಈ ಮೂಲಕ ಭಾರತೀಯ ಸಶಸ್ತ್ರ ಪಡೆ ಸೇರಬೇಕು ಎಂಬ ಮಹಿಳೆಯರ ಬಹು ದಿನಗಳ ಆಶಯಕ್ಕೆ ಗೆಲುವು ಸಿಕ್ಕಿದೆ.</p>.<p>ಮಹಿಳೆಯರನ್ನು ಸಶಸ್ತ್ರ ಪಡೆಗೆ ಸೇರಿಸಿಕೊಳ್ಳುವ ವಿಚಾರವಾಗಿ ಕೇಂದ್ರ ಸರ್ಕಾರದ ತೆಗೆದುಕೊಳ್ಳಲಿರುವ ಭವಿಷ್ಯದ ಯೋಜನೆಗಳ ಕುರಿತು ಮಾಹಿತಿ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದ್ದು, ಎರಡು ವಾರಗಳ ಕಾಲಾವಕಾಶವನ್ನು ನೀಡಿದೆ.</p>.<p>ಸೇನೆಯಲ್ಲಿ ಮಹಿಳೆಯರಿಗೆ ಅವಕಾಶ ನೀಡಬೇಕು ಎಂಬ ವಾದವನ್ನು ಎತ್ತಿ ಹಿಡಿದ ಸುಪ್ರೀಂ, 'ಮಹಿಳೆಯರ ಕುರಿತಾಗಿ ಇಂತಹ ಮನೋಭಾವವನ್ನು ಬದಲಿಸಿಕೊಳ್ಳಬೇಕು. ಇಂತಹ ವಿಚಾರಗಳಿಗೆಲ್ಲ ನ್ಯಾಯಾಲಯವು ಆದೇಶ ನೀಡುವ ವರೆಗೆ ಕಾಯಬಾರದು' ಎಂದಿದೆ.</p>.<p><a href="https://www.prajavani.net/entertainment/cinema/indrajit-lankesh-reaction-about-anushree-and-sandalwood-drugs-scandal-864969.html" itemprop="url">ಡ್ರಗ್ಸ್ ಕೇಸ್ನಲ್ಲಿ ಅನುಶ್ರೀ: ಎಲ್ಲರನ್ನೇಕೆ ಪರೀಕ್ಷಿಸಿಲ್ಲ ಎಂದ ಇಂದ್ರಜಿತ್ </a></p>.<p>ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ನೇತೃತ್ವದ ಪೀಠ ಕೇಂದ್ರ ಸರ್ಕಾರಪರ ಹೆಚ್ಚುವರಿ ಸಾಲಿಸಿಟರ್ ಜೆನೆರಲ್ ಐಶ್ವರ್ಯ ಭಾಟಿ ಅವರ 'ಈ ನೀತಿಯು ಕೇಂದ್ರ ಸರ್ಕಾರದ ನಿರ್ಧಾರವಾಗಿದೆ' ಎಂಬ ವಾದವನ್ನು ತಿರಸ್ಕರಿಸಿತು. 'ಈ ನೀತಿಯು ಲಿಂಗತಾರತಮ್ಯವನ್ನು ಒಳಗೊಂಡಿದೆ. ಈ ಕುರಿತು ಕೇಂದ್ರವು ರಚನಾತ್ಮಕ ಅವಲೋಕನ ಮಾಡಿಕೊಳ್ಳಬೇಕು' ಎಂದು ತಿಳಿಸಿದೆ.</p>.<p>ಕಳೆದ ಆಗಸ್ಟ್ನಲ್ಲಿ ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಪ್ರವೇಶ ಪರೀಕ್ಷೆಗೆ ಮಹಿಳೆಯರೂ ಹಾಜರಾಗಲು ಅನುಮತಿ ನೀಡುವಂತೆ ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶ ನೀಡಿತ್ತು. ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಹೃಷಿಕೇಶ್ ರಾಯ್ ಅವರಿದ್ದ ನ್ಯಾಯಪೀಠ ಈ ಆದೇಶ ಹೊರಡಿಸಿತ್ತು.</p>.<p><a href="https://www.prajavani.net/entertainment/cinema/trouble-for-mani-ratnams-ponniyan-selvan-mounts-after-demands-of-actress-trishas-arrest-864956.html" itemprop="url">ಚಪ್ಪಲಿ ಧರಿಸಿ ’ಶಿವ’ ದೇವಾಲಯದಲ್ಲಿ ಓಡಾಟ: ನಟಿ ತ್ರಿಷಾಗೆ ಬಂಧನ ಭೀತಿ </a></p>.<p>ಎನ್ಡಿಎ ಮತ್ತು ನೌಕಾದಳ ಅಕಾಡೆಮಿ ಪರೀಕ್ಷೆಗಳಿಗೆ ಹಾಜರಾಗಲು ಮಹಿಳಾ ಅಭ್ಯರ್ಥಿಗಳಿಗೆ ಅನುಮತಿ ನೀಡದ ಕೇಂದ್ರದ ನೀತಿಯನ್ನು ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು.</p>.<p>ಸಹ ಶಿಕ್ಷಣವು ಏಕೆ ಸಮಸ್ಯೆಯಾಗಲಿದೆ ಎಂದು ಪ್ರಶ್ನಿಸಿರುವ ನ್ಯಾಯಾಲಯ, ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ. ಇದು ಕೇವಲ ಲಿಂಗ ತತ್ವದ ಪ್ರಕರಣವಲ್ಲ. ಲಿಂಗತಾರತಮ್ಯವನ್ನು ಒಳಗೊಂಡಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತು.</p>.<p>ಸೇನೆಯಲ್ಲಿ ಮಹಿಳೆಯರಿಗೆ ಅವಕಾಶ ಇದೆ ಎಂದಾದರೆ, ಎನ್ಡಿಎ ಪ್ರವೇಶಕ್ಕೆ ಏಕೆ ತಡೆಹಿಡಿಯಲಾಗುತ್ತಿದೆ ಎಂದಿರುವ ನ್ಯಾಯಾಲಯ, ಸರ್ಕಾರ ಪ್ರತಿ ಬಾರಿ ನ್ಯಾಯಾಂಗದ ಮಧ್ಯಸ್ಥಿಕೆಯನ್ನು ಬಯಸಬಾರದು ಎಂದು ತಿಳಿಸಿತ್ತು.</p>.<p><a href="https://www.prajavani.net/india-news/sc-asks-journalists-to-move-hc-for-quashing-of-3-firs-lodged-in-up-864984.html" itemprop="url">ಪತ್ರಿಕಾ ಸ್ವಾತಂತ್ರ್ಯ: ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದ ಸುಪ್ರೀಂಕೋರ್ಟ್ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>