<p><strong>ನವದೆಹಲಿ</strong>: ಕೇಂದ್ರ ಸರ್ಕಾರವು ಶೀಘ್ರದಲ್ಲೇ ಹೊಸ ಸಹಕಾರ ನೀತಿಯನ್ನು ಜಾರಿಗೆ ತರಲಿದೆ ಎಂದು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಅವರು ಶನಿವಾರ ಹೇಳಿದ್ದಾರೆ.</p>.<p>ಸಹಕಾರ ಚಳವಳಿ ಬಲಪಡಿಸಲು ಕೇಂದ್ರ ಸರ್ಕಾರವು ರಾಜ್ಯಗಳ ಜೊತೆಗೂಡಿ ಕೆಲಸ ಮಾಡಲಿದೆ ಎಂದೂ ಅವರು ತಿಳಿಸಿದ್ದಾರೆ. ಕೇಂದ್ರ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಹೊಸದಾಗಿ ಸಹಕಾರ ಖಾತೆ ರಚಿಸಲಾಗಿದ್ದು, ಜುಲೈನಲ್ಲಿ ಸಹಕಾರ ಸಚಿವಾಲಯವು ಕಾರ್ಯಾರಂಭ ಮಾಡಿದೆ.</p>.<p>ಮೊದಲ ರಾಷ್ಟ್ರೀಯ ಸಹಕಾರ ಸಮಾವೇಶ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಹಕಾರವು ರಾಜ್ಯಗಳ ವಿಷಯ ಆಗಿರುವುದರಿಂದ ಕೇಂದ್ರವು ಈ ಹೊಸ ಸಚಿವಾಲಯವನ್ನು ಏಕೆ ಸೃಷ್ಟಿಸಿದೆ ಎನ್ನುವುದು ಹಲವರಿಗೆ ಅಚ್ಚರಿ ಮೂಡಿಸಿದೆ. ಈ ಕ್ಷೇತ್ರವನ್ನು ಬಲಪಡಿಸಲು ಮತ್ತು ಆಧುನೀಕರಣಗೊಳಿಸುವ ಉದ್ದೇಶದಿಂದ ಸಚಿವಾಲಯವನ್ನು ರೂಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.</p>.<p>ರಾಜ್ಯಗಳೊಂದಿಗೆ ಸಹಕರಿಸಲಾಗುವುದು. ಯಾವುದೇ ಸಂಘರ್ಷ ಇರುವುದಿಲ್ಲ ಎಂದು ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ.</p>.<p>ಸಹಕಾರ ಚಳವಳಿ ಹಿಂದೆಂದಿಗಿಂತಲೂ ಇಂದು ಹೆಚ್ಚು ಪ್ರಸ್ತುತವಾಗಿದೆ ಎಂದು ಹೇಳಿದ ಅವರು, ಸಹಕಾರಿ ಸಂಸ್ಥೆಗಳು ದೇಶದ ಅಭಿವೃದ್ಧಿಯಲ್ಲಿ ಸಾಕಷ್ಟು ಕೊಡುಗೆ ನೀಡಬಲ್ಲವು ಎಂದಿದ್ದಾರೆ.</p>.<p>ತೆರಿಗೆ ಮತ್ತು ಇತರೆ ವಿಷಯಗಳಿಗೆ ಸಂಬಂಧಿಸಿದಂತೆ ಸಹಕಾರಿ ಕ್ಷೇತ್ರವು ಎದುರಿಸುತ್ತಿರುವ ಸಮಸ್ಯೆಗಳನ್ನು ಉಲ್ಲೇಖಿಸಿದ ಅವರು, ಸಹಕಾರಿಕ್ಷೇತ್ರಕ್ಕೆ ಯಾವುದೇ ಅನ್ಯಾಯ ಆಗುವುದಿಲ್ಲ ಎನ್ನುವ ಭರವಸೆ ನೀಡಿದ್ದಾರೆ.</p>.<p><strong>ಓದಿ:</strong><a href="https://www.prajavani.net/world-news/india-and-china-engaged-in-war-of-words-over-galwan-valley-clash-hours-before-quad-summit-869751.html" itemprop="url">ಕ್ವಾಡ್ ಸಭೆಗೂ ಮುನ್ನ ಗಾಲ್ವಾನ್ ಸಂಘರ್ಷದ ಬಗ್ಗೆ ಭಾರತ–ಚೀನಾ ವಾಕ್ಸಮರ</a></p>.<p><strong>ಕೃಷಿ ಸಹಕಾರಿ ಸಂಘಗಳ ಡಿಜಿಟಲೀಕರಣ: </strong>ಡಿಜಿಟಲ್ ವ್ಯವಸ್ಥೆಯ ಮುಲಕ ಸಾಲ ನೀಡಲು ಅನುಕೂಲ ಆಗುವಂತೆ 98 ಸಾವಿರ ಪ್ರಾಥಮಿಕ ಕೃಷಿ ಸಹಕಾರ ಸಂಘಗಳನ್ನು ಡಿಜಿಟಲೀಕರಣ ಮತ್ತು ಆಧುನೀಕರಣಗೊಳಿಸುವ ಕಡೆಗೆ ಕೇಂದ್ರವು ಗಮನ ಹರಿಸಲಿದೆ ಎಂದು ಸಹಕಾರ ಸಚಿವಾಲಯದ ಕಾರ್ಯದರ್ಶಿ ದೇವೇಂದ್ರ ಕುಮಾರ್ ಸಿಂಗ್ ಹೇಳಿದ್ದಾರೆ.</p>.<p>ಸಹಕಾರ ಚಳವಳಿ ಮತ್ತು ಸಹಕಾರಿ ಸಂಸ್ಥೆಗಳಿಂದ ತಯಾರಾದ ಗುಣಮಟ್ಟದ ಉತ್ಪನ್ನಗಳನ್ನು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಜನಪ್ರಿಯಗೊಳಿಸಲುಕೇಂದ್ರ ಸರ್ಕಾರವು ಕ್ರಮಗಳನ್ನುತೆಗೆದುಕೊಳ್ಳಲಿದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕೇಂದ್ರ ಸರ್ಕಾರವು ಶೀಘ್ರದಲ್ಲೇ ಹೊಸ ಸಹಕಾರ ನೀತಿಯನ್ನು ಜಾರಿಗೆ ತರಲಿದೆ ಎಂದು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಅವರು ಶನಿವಾರ ಹೇಳಿದ್ದಾರೆ.</p>.<p>ಸಹಕಾರ ಚಳವಳಿ ಬಲಪಡಿಸಲು ಕೇಂದ್ರ ಸರ್ಕಾರವು ರಾಜ್ಯಗಳ ಜೊತೆಗೂಡಿ ಕೆಲಸ ಮಾಡಲಿದೆ ಎಂದೂ ಅವರು ತಿಳಿಸಿದ್ದಾರೆ. ಕೇಂದ್ರ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಹೊಸದಾಗಿ ಸಹಕಾರ ಖಾತೆ ರಚಿಸಲಾಗಿದ್ದು, ಜುಲೈನಲ್ಲಿ ಸಹಕಾರ ಸಚಿವಾಲಯವು ಕಾರ್ಯಾರಂಭ ಮಾಡಿದೆ.</p>.<p>ಮೊದಲ ರಾಷ್ಟ್ರೀಯ ಸಹಕಾರ ಸಮಾವೇಶ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಹಕಾರವು ರಾಜ್ಯಗಳ ವಿಷಯ ಆಗಿರುವುದರಿಂದ ಕೇಂದ್ರವು ಈ ಹೊಸ ಸಚಿವಾಲಯವನ್ನು ಏಕೆ ಸೃಷ್ಟಿಸಿದೆ ಎನ್ನುವುದು ಹಲವರಿಗೆ ಅಚ್ಚರಿ ಮೂಡಿಸಿದೆ. ಈ ಕ್ಷೇತ್ರವನ್ನು ಬಲಪಡಿಸಲು ಮತ್ತು ಆಧುನೀಕರಣಗೊಳಿಸುವ ಉದ್ದೇಶದಿಂದ ಸಚಿವಾಲಯವನ್ನು ರೂಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.</p>.<p>ರಾಜ್ಯಗಳೊಂದಿಗೆ ಸಹಕರಿಸಲಾಗುವುದು. ಯಾವುದೇ ಸಂಘರ್ಷ ಇರುವುದಿಲ್ಲ ಎಂದು ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ.</p>.<p>ಸಹಕಾರ ಚಳವಳಿ ಹಿಂದೆಂದಿಗಿಂತಲೂ ಇಂದು ಹೆಚ್ಚು ಪ್ರಸ್ತುತವಾಗಿದೆ ಎಂದು ಹೇಳಿದ ಅವರು, ಸಹಕಾರಿ ಸಂಸ್ಥೆಗಳು ದೇಶದ ಅಭಿವೃದ್ಧಿಯಲ್ಲಿ ಸಾಕಷ್ಟು ಕೊಡುಗೆ ನೀಡಬಲ್ಲವು ಎಂದಿದ್ದಾರೆ.</p>.<p>ತೆರಿಗೆ ಮತ್ತು ಇತರೆ ವಿಷಯಗಳಿಗೆ ಸಂಬಂಧಿಸಿದಂತೆ ಸಹಕಾರಿ ಕ್ಷೇತ್ರವು ಎದುರಿಸುತ್ತಿರುವ ಸಮಸ್ಯೆಗಳನ್ನು ಉಲ್ಲೇಖಿಸಿದ ಅವರು, ಸಹಕಾರಿಕ್ಷೇತ್ರಕ್ಕೆ ಯಾವುದೇ ಅನ್ಯಾಯ ಆಗುವುದಿಲ್ಲ ಎನ್ನುವ ಭರವಸೆ ನೀಡಿದ್ದಾರೆ.</p>.<p><strong>ಓದಿ:</strong><a href="https://www.prajavani.net/world-news/india-and-china-engaged-in-war-of-words-over-galwan-valley-clash-hours-before-quad-summit-869751.html" itemprop="url">ಕ್ವಾಡ್ ಸಭೆಗೂ ಮುನ್ನ ಗಾಲ್ವಾನ್ ಸಂಘರ್ಷದ ಬಗ್ಗೆ ಭಾರತ–ಚೀನಾ ವಾಕ್ಸಮರ</a></p>.<p><strong>ಕೃಷಿ ಸಹಕಾರಿ ಸಂಘಗಳ ಡಿಜಿಟಲೀಕರಣ: </strong>ಡಿಜಿಟಲ್ ವ್ಯವಸ್ಥೆಯ ಮುಲಕ ಸಾಲ ನೀಡಲು ಅನುಕೂಲ ಆಗುವಂತೆ 98 ಸಾವಿರ ಪ್ರಾಥಮಿಕ ಕೃಷಿ ಸಹಕಾರ ಸಂಘಗಳನ್ನು ಡಿಜಿಟಲೀಕರಣ ಮತ್ತು ಆಧುನೀಕರಣಗೊಳಿಸುವ ಕಡೆಗೆ ಕೇಂದ್ರವು ಗಮನ ಹರಿಸಲಿದೆ ಎಂದು ಸಹಕಾರ ಸಚಿವಾಲಯದ ಕಾರ್ಯದರ್ಶಿ ದೇವೇಂದ್ರ ಕುಮಾರ್ ಸಿಂಗ್ ಹೇಳಿದ್ದಾರೆ.</p>.<p>ಸಹಕಾರ ಚಳವಳಿ ಮತ್ತು ಸಹಕಾರಿ ಸಂಸ್ಥೆಗಳಿಂದ ತಯಾರಾದ ಗುಣಮಟ್ಟದ ಉತ್ಪನ್ನಗಳನ್ನು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಜನಪ್ರಿಯಗೊಳಿಸಲುಕೇಂದ್ರ ಸರ್ಕಾರವು ಕ್ರಮಗಳನ್ನುತೆಗೆದುಕೊಳ್ಳಲಿದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>