<p><strong>ನವದೆಹಲಿ</strong>: ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂಬ ಆರೋಪದ ಹಿಂದೆಯೇ ಐಎಎಸ್ ಅಧಿಕಾರಿ ದಂಪತಿಯನ್ನು ಕೇಂದ್ರ ಸರ್ಕಾರ ವರ್ಗಾವಣೆ ಮಾಡಿದೆ.</p>.<p>1994ನೇ ತಂಡದ ಅಧಿಕಾರಿಗಳಾದ ಖಿರ್ವಾರ್ಅವರನ್ನು ಲಡಾಖ್ಗೆ ಹಾಗೂ ಅವರ ಪತ್ನಿಯನ್ನು ಅರುಣಾಚಲ ಪ್ರದೇಶಕ್ಕೆವರ್ಗಾಯಿಸಲಾಗಿದೆ. ಅಧಿಕಾರಿ ತಮ್ಮ ಸಾಕು ನಾಯಿಯು ವಿಹಾರ ಮಾಡಲುಅನುವಾಗುವಂತೆ ಇಲ್ಲಿನ ತ್ಯಾಗರಾಜ್ಕ್ರೀಡಾಂಗಣದಲ್ಲಿ ಅವಧಿಗೆ ಮೊದಲೇ ಕ್ರೀಡಾ ಚಟುವಟಿಕೆಯನ್ನು ಬಂದ್ ಮಾಡಿಸುತ್ತಿದ್ದರು ಎಂಬ ಆರೋಪವಿತ್ತು.</p>.<p>ಅಧಿಕಾರಿ ದಂಪತಿ ಈ ಮೂಲಕ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಪ್ರಕಟವಾಗಿತ್ತು. ಈ ಸಂಬಂಧ ವರದಿ ನೀಡುವಂತೆ ದೆಹಲಿಯ ಮುಖ್ಯ ಕಾರ್ಯದರ್ಶಿಯಿಂದ ಕೇಂದ್ರ ವರದಿ ಕೇಳಿತ್ತು.</p>.<p>ವರದಿಯ ಹಿಂದೆಯೇ ಕೇಂದ್ರ ಸರ್ಕಾರವು ವರ್ಗಾವಣೆಯನ್ನು ಮಾಡಿ ಆದೇಶ ಹೊರಡಿಸಿದೆ.</p>.<p><strong>‘ರಾತ್ರಿ 10ರವರೆಗೆ ತೆರೆದಿರಬೇಕು’:</strong> ದೆಹಲಿಯಲ್ಲಿರುವ ಎಲ್ಲ ಕ್ರೀಡಾ ಸೌಲಭ್ಯ ಕೇಂದ್ರಗಳು ರಾತ್ರಿ 10 ಗಂಟೆವರೆಗೆ ಕ್ರೀಡಾಪಟುಗಳಿಗೆ ಮುಕ್ತವಾಗಿರಬೇಕು ಎಂದು ಮುಖ್ಯಮಂತ್ರಿ ಅರವಿಂದ್ಕೇಜ್ರಿವಾಲ್ ಸೂಚನೆ ನೀಡಿದ್ದಾರೆ.</p>.<p>‘ಕ್ರೀಡಾಂಗಣಗಳು ಸಂಜೆ 6 ಅಥವಾ 7 ಗಂಟೆಗೆ ಮುಚ್ಚುತ್ತಿದ್ದು, ಕ್ರೀಡಾಪಟುಗಳು ಸಮಸ್ಯೆ ಎದುರಿಸುತ್ತಿರುವುದು ಗಮನಕ್ಕೆ ಬಂದಿದೆ. ಕ್ರೀಡಾಪಟುಗಳಿಗೆ ಸೌಲಭ್ಯಗಳು ಲಭ್ಯವಿರಬೇಕು’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂಬ ಆರೋಪದ ಹಿಂದೆಯೇ ಐಎಎಸ್ ಅಧಿಕಾರಿ ದಂಪತಿಯನ್ನು ಕೇಂದ್ರ ಸರ್ಕಾರ ವರ್ಗಾವಣೆ ಮಾಡಿದೆ.</p>.<p>1994ನೇ ತಂಡದ ಅಧಿಕಾರಿಗಳಾದ ಖಿರ್ವಾರ್ಅವರನ್ನು ಲಡಾಖ್ಗೆ ಹಾಗೂ ಅವರ ಪತ್ನಿಯನ್ನು ಅರುಣಾಚಲ ಪ್ರದೇಶಕ್ಕೆವರ್ಗಾಯಿಸಲಾಗಿದೆ. ಅಧಿಕಾರಿ ತಮ್ಮ ಸಾಕು ನಾಯಿಯು ವಿಹಾರ ಮಾಡಲುಅನುವಾಗುವಂತೆ ಇಲ್ಲಿನ ತ್ಯಾಗರಾಜ್ಕ್ರೀಡಾಂಗಣದಲ್ಲಿ ಅವಧಿಗೆ ಮೊದಲೇ ಕ್ರೀಡಾ ಚಟುವಟಿಕೆಯನ್ನು ಬಂದ್ ಮಾಡಿಸುತ್ತಿದ್ದರು ಎಂಬ ಆರೋಪವಿತ್ತು.</p>.<p>ಅಧಿಕಾರಿ ದಂಪತಿ ಈ ಮೂಲಕ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಪ್ರಕಟವಾಗಿತ್ತು. ಈ ಸಂಬಂಧ ವರದಿ ನೀಡುವಂತೆ ದೆಹಲಿಯ ಮುಖ್ಯ ಕಾರ್ಯದರ್ಶಿಯಿಂದ ಕೇಂದ್ರ ವರದಿ ಕೇಳಿತ್ತು.</p>.<p>ವರದಿಯ ಹಿಂದೆಯೇ ಕೇಂದ್ರ ಸರ್ಕಾರವು ವರ್ಗಾವಣೆಯನ್ನು ಮಾಡಿ ಆದೇಶ ಹೊರಡಿಸಿದೆ.</p>.<p><strong>‘ರಾತ್ರಿ 10ರವರೆಗೆ ತೆರೆದಿರಬೇಕು’:</strong> ದೆಹಲಿಯಲ್ಲಿರುವ ಎಲ್ಲ ಕ್ರೀಡಾ ಸೌಲಭ್ಯ ಕೇಂದ್ರಗಳು ರಾತ್ರಿ 10 ಗಂಟೆವರೆಗೆ ಕ್ರೀಡಾಪಟುಗಳಿಗೆ ಮುಕ್ತವಾಗಿರಬೇಕು ಎಂದು ಮುಖ್ಯಮಂತ್ರಿ ಅರವಿಂದ್ಕೇಜ್ರಿವಾಲ್ ಸೂಚನೆ ನೀಡಿದ್ದಾರೆ.</p>.<p>‘ಕ್ರೀಡಾಂಗಣಗಳು ಸಂಜೆ 6 ಅಥವಾ 7 ಗಂಟೆಗೆ ಮುಚ್ಚುತ್ತಿದ್ದು, ಕ್ರೀಡಾಪಟುಗಳು ಸಮಸ್ಯೆ ಎದುರಿಸುತ್ತಿರುವುದು ಗಮನಕ್ಕೆ ಬಂದಿದೆ. ಕ್ರೀಡಾಪಟುಗಳಿಗೆ ಸೌಲಭ್ಯಗಳು ಲಭ್ಯವಿರಬೇಕು’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>