<p><strong>ಗುವಾಹಟಿ:</strong>ಈಶಾನ್ಯ ರಾಜ್ಯಗಳಿಗೆ ವಿಶೇಷ ಸೌಲಭ್ಯಗಳ ಸ್ಥಾನಮಾನ ನೀಡಿರುವ ಸಂವಿಧಾನದ 371ನೇ ವಿಧಿಯನ್ನು ಮುಟ್ಟುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಸ್ಪಷ್ಟಪಡಿಸಿದ್ದಾರೆ.</p>.<p>370ನೇ ವಿಧಿ(ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನ ಕಲ್ಪಿಸಿದ್ದ ವಿಧಿ)ಯು ತಾತ್ಕಾಲಿಕವಾದದ್ದು. ಆದರೆ, 371ನೇ ವಿಧಿ ಈಶಾನ್ಯ ವಲಯಕ್ಕೆ ವಿಶೇಷ ಸೌಲಭ್ಯಗಳ ಸ್ಥಾನಮಾನ ಕಲ್ಪಿಸಿದ್ದು, ಎರಡೂ ವಿಧಿಗಳಿಗೆ ಸಾಕಷ್ಟು ವ್ಯತ್ಯಾಸವಿದೆ ಎಂದಿದ್ದಾರೆ.</p>.<p>ಭಾನುವಾರದಿಂದ ಎರಡು ದಿನ ಅಮಿತ್ ಶಾ ಅಸ್ಸಾಂನಲ್ಲಿ ಹಲವು ಸಭೆಗಳಲ್ಲಿ ಭಾಗಿಯಾಗಲಿದ್ದಾರೆ.ರಾಷ್ಟ್ರೀಯ ಪೌರತ್ವ ನೋಂದಣಿ(ಎನ್ಆರ್ಸಿ) ಪಟ್ಟಿ ಬಿಡುಗಡೆಯಾದ ನಂತರದಲ್ಲಿ ಮೊದಲ ಬಾರಿಗೆ ಅಮಿತ್ ಶಾ ಅಸ್ಸಾಂ ಭೇಟಿ ನೀಡಿದ್ದಾರೆ.</p>.<p><span style="color:#0033ff;"><strong>ಇದನ್ನೂ ಓದಿ:</strong></span><a href="https://www.prajavani.net/op-ed/market-analysis/constitution-and-lie-657059.html" target="_blank">ಮಿಥ್ಯೆಗಳ ಸುಳಿ ಮತ್ತು ಸಂವಿಧಾನ</a></p>.<p>‘ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿ ರದ್ದುಪಡಿಸಿದ ನಂತರ ಈಶಾನ್ಯ ಭಾಗದ ಜನರಿಗೆ ಸುಳ್ಳು ಮಾಹಿತಿಗಳ ಮೂಲಕ ದಿಕ್ಕು ತಪ್ಪಿಸುವ ಪ್ರಯತ್ನ ನಡೆಸಲಾಗಿದೆ. ಕೇಂದ್ರ 371ನೇ ವಿಧಿಯನ್ನೂ ರದ್ದು ಪಡಿಸಲಿದೆ ಎಂದು ತಪ್ಪು ಮಾಹಿತಿ ಹರಡಲಾಗುತ್ತಿದೆ‘ ಎಂದು ಆರೋಪಿಸಿದ್ದಾರೆ.</p>.<p>‘ಈ ಬಗ್ಗೆ ಸಂಸತ್ತಿನಲ್ಲಿಯೂ ನಾನು ಸ್ಪಷ್ಟಪಡಿಸಿದ್ದೇನೆ. ಈಗ ಈಶಾನ್ಯ ರಾಜ್ಯಗಳ ಎಂಟು ಮಂದಿ ಮುಖ್ಯಮಂತ್ರಿಗಳ ಎದುರಿಗೆ ಮತ್ತೊಮ್ಮೆ ಹೇಳುತ್ತಿದ್ದೇನೆ, ಕೇಂದ್ರ 371ನೇ ವಿಧಿಯನ್ನು ಮುಟ್ಟುವುದಿಲ್ಲ‘ ಎಂದು ಅಮಿತ್ ಶಾ ಹೇಳಿದ್ದಾರೆ.</p>.<p><strong>ಇದನ್ನೂ ಓದಿ:<a href="https://www.prajavani.net/stories/national/jammu-and-kashmir-special-655933.html" target="_blank">ಸಂವಿಧಾನದ 370ನೇ ವಿಧಿ ಮತ್ತು ‘35–ಎ’ ಕಲಂ ಸಮಗ್ರ ಮಾಹಿತಿ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ:</strong>ಈಶಾನ್ಯ ರಾಜ್ಯಗಳಿಗೆ ವಿಶೇಷ ಸೌಲಭ್ಯಗಳ ಸ್ಥಾನಮಾನ ನೀಡಿರುವ ಸಂವಿಧಾನದ 371ನೇ ವಿಧಿಯನ್ನು ಮುಟ್ಟುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಸ್ಪಷ್ಟಪಡಿಸಿದ್ದಾರೆ.</p>.<p>370ನೇ ವಿಧಿ(ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನ ಕಲ್ಪಿಸಿದ್ದ ವಿಧಿ)ಯು ತಾತ್ಕಾಲಿಕವಾದದ್ದು. ಆದರೆ, 371ನೇ ವಿಧಿ ಈಶಾನ್ಯ ವಲಯಕ್ಕೆ ವಿಶೇಷ ಸೌಲಭ್ಯಗಳ ಸ್ಥಾನಮಾನ ಕಲ್ಪಿಸಿದ್ದು, ಎರಡೂ ವಿಧಿಗಳಿಗೆ ಸಾಕಷ್ಟು ವ್ಯತ್ಯಾಸವಿದೆ ಎಂದಿದ್ದಾರೆ.</p>.<p>ಭಾನುವಾರದಿಂದ ಎರಡು ದಿನ ಅಮಿತ್ ಶಾ ಅಸ್ಸಾಂನಲ್ಲಿ ಹಲವು ಸಭೆಗಳಲ್ಲಿ ಭಾಗಿಯಾಗಲಿದ್ದಾರೆ.ರಾಷ್ಟ್ರೀಯ ಪೌರತ್ವ ನೋಂದಣಿ(ಎನ್ಆರ್ಸಿ) ಪಟ್ಟಿ ಬಿಡುಗಡೆಯಾದ ನಂತರದಲ್ಲಿ ಮೊದಲ ಬಾರಿಗೆ ಅಮಿತ್ ಶಾ ಅಸ್ಸಾಂ ಭೇಟಿ ನೀಡಿದ್ದಾರೆ.</p>.<p><span style="color:#0033ff;"><strong>ಇದನ್ನೂ ಓದಿ:</strong></span><a href="https://www.prajavani.net/op-ed/market-analysis/constitution-and-lie-657059.html" target="_blank">ಮಿಥ್ಯೆಗಳ ಸುಳಿ ಮತ್ತು ಸಂವಿಧಾನ</a></p>.<p>‘ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿ ರದ್ದುಪಡಿಸಿದ ನಂತರ ಈಶಾನ್ಯ ಭಾಗದ ಜನರಿಗೆ ಸುಳ್ಳು ಮಾಹಿತಿಗಳ ಮೂಲಕ ದಿಕ್ಕು ತಪ್ಪಿಸುವ ಪ್ರಯತ್ನ ನಡೆಸಲಾಗಿದೆ. ಕೇಂದ್ರ 371ನೇ ವಿಧಿಯನ್ನೂ ರದ್ದು ಪಡಿಸಲಿದೆ ಎಂದು ತಪ್ಪು ಮಾಹಿತಿ ಹರಡಲಾಗುತ್ತಿದೆ‘ ಎಂದು ಆರೋಪಿಸಿದ್ದಾರೆ.</p>.<p>‘ಈ ಬಗ್ಗೆ ಸಂಸತ್ತಿನಲ್ಲಿಯೂ ನಾನು ಸ್ಪಷ್ಟಪಡಿಸಿದ್ದೇನೆ. ಈಗ ಈಶಾನ್ಯ ರಾಜ್ಯಗಳ ಎಂಟು ಮಂದಿ ಮುಖ್ಯಮಂತ್ರಿಗಳ ಎದುರಿಗೆ ಮತ್ತೊಮ್ಮೆ ಹೇಳುತ್ತಿದ್ದೇನೆ, ಕೇಂದ್ರ 371ನೇ ವಿಧಿಯನ್ನು ಮುಟ್ಟುವುದಿಲ್ಲ‘ ಎಂದು ಅಮಿತ್ ಶಾ ಹೇಳಿದ್ದಾರೆ.</p>.<p><strong>ಇದನ್ನೂ ಓದಿ:<a href="https://www.prajavani.net/stories/national/jammu-and-kashmir-special-655933.html" target="_blank">ಸಂವಿಧಾನದ 370ನೇ ವಿಧಿ ಮತ್ತು ‘35–ಎ’ ಕಲಂ ಸಮಗ್ರ ಮಾಹಿತಿ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>