<p class="bodytext"><strong>ನವದೆಹಲಿ: </strong>ಬೇರೆ ಬೇರೆ ದೇಶಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿರುವ ಕೇಂದ್ರ ಆರೋಗ್ಯ ಸಚಿವಾಲಯವು, ಕೆಲವು ಜಿಲ್ಲೆಗಳಲ್ಲಿ ಕೋವಿಡ್ ಸೋಂಕು ಪತ್ತೆ ಪರೀಕ್ಷೆಗಳನ್ನು ಕಡಿಮೆ ಮಾಡಿರುವುದಕ್ಕೆ ಕಳವಳ ವ್ಯಕ್ತಪಡಿಸಿದೆ.</p>.<p class="bodytext">ವಿವಾಹ ಸಮಾರಂಭಗಳು, ಹಬ್ಬಗಳು ಮತ್ತು ರಜಾದಿನಗಳಲ್ಲಿನ ಪ್ರಯಾಣದ ವಿವರಗಳನ್ನು ಗಮನದಲ್ಲಿಟ್ಟುಕೊಂಡು ಕೋವಿಡ್ ಪರೀಕ್ಷಾ ಸಂಖ್ಯೆಗಳನ್ನು ಹೆಚ್ಚಿಸುವಂತೆ ಕೇರಳ, ಮಹಾರಾಷ್ಟ್ರ, ಗೋವಾ ಸೇರಿದಂತೆ ವಿವಿಧ ರಾಜ್ಯಗಳಿಗೆ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್ ಪತ್ರ ಬರೆದಿದ್ದಾರೆ.</p>.<p class="bodytext">‘ಪರೀಕ್ಷಾ ಸಂಖ್ಯೆ ಇಳಿಕೆಯಾಗುತ್ತಿರುವುದರಿಂದ ಸೋಂಕಿನ ಹರಡುವಿಕೆಯನ್ನು ನಿರ್ಧರಿಸುವುದು ಕಷ್ಟವಾಗುತ್ತದೆ. ಅಭಿವೃದ್ಧಿ ಹೊಂದಿರುವ ಕೆಲವು ದೇಶಗಳು ಕೋವಿಡ್ನ ನಾಲ್ಕನೇ ಮತ್ತು ಐದನೇ ಅಲೆಯನ್ನು ಎದುರಿಸುತ್ತಿವೆ. ಸಾಂಕ್ರಾಮಿಕ ರೋಗದ ಈ ಅನಿರೀಕ್ಷಿತ ಮತ್ತು ಸಾಂಕ್ರಾಮಿಕ ಸ್ವರೂಪವನ್ನು ಗಮನಿಸಿದರೆ ನಿರಂತರ ಜಾಗರೂಕತೆಯ ಅವಶ್ಯಕತೆ ಇದೆ’ ಎಂದು ಅವರು ಪತ್ರದಲ್ಲಿ ಒತ್ತಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="bodytext"><strong>ನವದೆಹಲಿ: </strong>ಬೇರೆ ಬೇರೆ ದೇಶಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿರುವ ಕೇಂದ್ರ ಆರೋಗ್ಯ ಸಚಿವಾಲಯವು, ಕೆಲವು ಜಿಲ್ಲೆಗಳಲ್ಲಿ ಕೋವಿಡ್ ಸೋಂಕು ಪತ್ತೆ ಪರೀಕ್ಷೆಗಳನ್ನು ಕಡಿಮೆ ಮಾಡಿರುವುದಕ್ಕೆ ಕಳವಳ ವ್ಯಕ್ತಪಡಿಸಿದೆ.</p>.<p class="bodytext">ವಿವಾಹ ಸಮಾರಂಭಗಳು, ಹಬ್ಬಗಳು ಮತ್ತು ರಜಾದಿನಗಳಲ್ಲಿನ ಪ್ರಯಾಣದ ವಿವರಗಳನ್ನು ಗಮನದಲ್ಲಿಟ್ಟುಕೊಂಡು ಕೋವಿಡ್ ಪರೀಕ್ಷಾ ಸಂಖ್ಯೆಗಳನ್ನು ಹೆಚ್ಚಿಸುವಂತೆ ಕೇರಳ, ಮಹಾರಾಷ್ಟ್ರ, ಗೋವಾ ಸೇರಿದಂತೆ ವಿವಿಧ ರಾಜ್ಯಗಳಿಗೆ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್ ಪತ್ರ ಬರೆದಿದ್ದಾರೆ.</p>.<p class="bodytext">‘ಪರೀಕ್ಷಾ ಸಂಖ್ಯೆ ಇಳಿಕೆಯಾಗುತ್ತಿರುವುದರಿಂದ ಸೋಂಕಿನ ಹರಡುವಿಕೆಯನ್ನು ನಿರ್ಧರಿಸುವುದು ಕಷ್ಟವಾಗುತ್ತದೆ. ಅಭಿವೃದ್ಧಿ ಹೊಂದಿರುವ ಕೆಲವು ದೇಶಗಳು ಕೋವಿಡ್ನ ನಾಲ್ಕನೇ ಮತ್ತು ಐದನೇ ಅಲೆಯನ್ನು ಎದುರಿಸುತ್ತಿವೆ. ಸಾಂಕ್ರಾಮಿಕ ರೋಗದ ಈ ಅನಿರೀಕ್ಷಿತ ಮತ್ತು ಸಾಂಕ್ರಾಮಿಕ ಸ್ವರೂಪವನ್ನು ಗಮನಿಸಿದರೆ ನಿರಂತರ ಜಾಗರೂಕತೆಯ ಅವಶ್ಯಕತೆ ಇದೆ’ ಎಂದು ಅವರು ಪತ್ರದಲ್ಲಿ ಒತ್ತಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>