<p class="title"><strong>ಶ್ರೀನಗರ/ನವದೆಹಲಿ:</strong> ‘ಮುಖ್ಯವಾಹಿನಿಯ ಆರು ಪಕ್ಷಗಳ ಒಕ್ಕೂಟವಾಗಿರುವ ಗುಪ್ಕಾರ್ ಮೈತ್ರಿಕೂಟವು ವಿಭಜನೆಯತ್ತ ಸಾಗುತ್ತಿದೆ’ಎನ್ನುವ ಕೇಂದ್ರ ಸರ್ಕಾರದ ಆರೋಪವನ್ನು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಭಾನುವಾರ ತಳ್ಳಿ ಹಾಕಿದ್ದಾರೆ.</p>.<p class="title">‘ಜಮ್ಮು ಮತ್ತು ಕಾಶ್ಮೀರದ ವಿರುದ್ಧ ಕೇಂದ್ರ ಸರ್ಕಾರದ ಧೋರಣೆಯನ್ನು ಗಮನಿಸಿದರೆ ಪಿಎಜಿಡಿಯು ಒಗ್ಗಟಾಗಿರುವುದು ಬಿಟ್ಟು ಅನ್ಯಮಾರ್ಗವಿಲ್ಲ’ ಎಂದೂ ಅವರು ಹೇಳಿದ್ದಾರೆ.</p>.<p class="title">‘ಗುಪ್ಕಾರ್ ಮೈತ್ರಿಕೂಟದಂಥ ಒಕ್ಕೂಟ ನೆಲೆಗೊಳ್ಳಲು ಸ್ವಲ್ಪ ಕಾಲಾವಕಾಶ ತೆಗೆದುಕೊಳ್ಳುತ್ತದೆ. ಮೈತ್ರಿ ಕೂಟದಲ್ಲಿ ಇತ್ತೀಚಿನ ಸಮಸ್ಯೆಗಳು ನಿರೀಕ್ಷಿತವಾಗಿರುವಂಥವೇ ಆಗಿವೆ’ ಎಂದು ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ (ಪಿಡಿಪಿ) ಮುಖ್ಯಸ್ಥೆಯೂ ಆಗಿರುವ ಮೆಹಬೂಬಾ ಅಭಿಪ್ರಾಯಪಟ್ಟಿದ್ದಾರೆ.</p>.<p class="title">‘ಗುಪ್ಕಾರ್ ಮೈತ್ರಿಕೂಟದಲ್ಲಿದ್ದ ಪೀಪಲ್ಸ್ ಕಾನ್ಫರೆನ್ಸ್ ಮೈತ್ರಿಕೂಟದಿಂದ ನಿರ್ಗಮಿಸಿದ ಹಿನ್ನೆಲೆಯಲ್ಲಿ ಪಕ್ಷದ ಕೆಲವರಿಂದ ನ್ಯಾಷನಲ್ ಕಾನ್ಫರೆನ್ಸ್ ಜೊತೆಗಿನ ಪಿಡಿಪಿಯ ಸಂಬಂಧವನ್ನು ಕೂಡ ಮರುಪರಿಶೀಲಿಸಬೇಕು’ ಎನ್ನುವ ಮಾತುಗಳು ಕೇಳಿಬಂದ ಹಿನ್ನೆಲೆಯಲ್ಲಿ ಮೆಹಬೂಬಾ ಪ್ರತಿಕ್ರಿಯಿಸಿದ್ದಾರೆ.</p>.<p class="title">2020ರ ಅಕ್ಟೋಬರ್ ವೇಳೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್, ಪಿಡಿಪಿ, ಪೀಪಲ್ಸ್ ಕಾನ್ಫರೆನ್ಸ್, ಸಿಪಿಎಂ, ಸಿಪಿಐ, ಅವಾಮಿ ನ್ಯಾಷನಲ್ ಕಾನ್ಫರೆನ್ಸ್ ಮತ್ತು ಜೆಕೆಪಿಎಂ ಜತೆಗೂಡಿ ಗುಪ್ಕಾರ ಮೈತ್ರಿಕೂಟವು ರಚನೆಯಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಶ್ರೀನಗರ/ನವದೆಹಲಿ:</strong> ‘ಮುಖ್ಯವಾಹಿನಿಯ ಆರು ಪಕ್ಷಗಳ ಒಕ್ಕೂಟವಾಗಿರುವ ಗುಪ್ಕಾರ್ ಮೈತ್ರಿಕೂಟವು ವಿಭಜನೆಯತ್ತ ಸಾಗುತ್ತಿದೆ’ಎನ್ನುವ ಕೇಂದ್ರ ಸರ್ಕಾರದ ಆರೋಪವನ್ನು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಭಾನುವಾರ ತಳ್ಳಿ ಹಾಕಿದ್ದಾರೆ.</p>.<p class="title">‘ಜಮ್ಮು ಮತ್ತು ಕಾಶ್ಮೀರದ ವಿರುದ್ಧ ಕೇಂದ್ರ ಸರ್ಕಾರದ ಧೋರಣೆಯನ್ನು ಗಮನಿಸಿದರೆ ಪಿಎಜಿಡಿಯು ಒಗ್ಗಟಾಗಿರುವುದು ಬಿಟ್ಟು ಅನ್ಯಮಾರ್ಗವಿಲ್ಲ’ ಎಂದೂ ಅವರು ಹೇಳಿದ್ದಾರೆ.</p>.<p class="title">‘ಗುಪ್ಕಾರ್ ಮೈತ್ರಿಕೂಟದಂಥ ಒಕ್ಕೂಟ ನೆಲೆಗೊಳ್ಳಲು ಸ್ವಲ್ಪ ಕಾಲಾವಕಾಶ ತೆಗೆದುಕೊಳ್ಳುತ್ತದೆ. ಮೈತ್ರಿ ಕೂಟದಲ್ಲಿ ಇತ್ತೀಚಿನ ಸಮಸ್ಯೆಗಳು ನಿರೀಕ್ಷಿತವಾಗಿರುವಂಥವೇ ಆಗಿವೆ’ ಎಂದು ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ (ಪಿಡಿಪಿ) ಮುಖ್ಯಸ್ಥೆಯೂ ಆಗಿರುವ ಮೆಹಬೂಬಾ ಅಭಿಪ್ರಾಯಪಟ್ಟಿದ್ದಾರೆ.</p>.<p class="title">‘ಗುಪ್ಕಾರ್ ಮೈತ್ರಿಕೂಟದಲ್ಲಿದ್ದ ಪೀಪಲ್ಸ್ ಕಾನ್ಫರೆನ್ಸ್ ಮೈತ್ರಿಕೂಟದಿಂದ ನಿರ್ಗಮಿಸಿದ ಹಿನ್ನೆಲೆಯಲ್ಲಿ ಪಕ್ಷದ ಕೆಲವರಿಂದ ನ್ಯಾಷನಲ್ ಕಾನ್ಫರೆನ್ಸ್ ಜೊತೆಗಿನ ಪಿಡಿಪಿಯ ಸಂಬಂಧವನ್ನು ಕೂಡ ಮರುಪರಿಶೀಲಿಸಬೇಕು’ ಎನ್ನುವ ಮಾತುಗಳು ಕೇಳಿಬಂದ ಹಿನ್ನೆಲೆಯಲ್ಲಿ ಮೆಹಬೂಬಾ ಪ್ರತಿಕ್ರಿಯಿಸಿದ್ದಾರೆ.</p>.<p class="title">2020ರ ಅಕ್ಟೋಬರ್ ವೇಳೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್, ಪಿಡಿಪಿ, ಪೀಪಲ್ಸ್ ಕಾನ್ಫರೆನ್ಸ್, ಸಿಪಿಎಂ, ಸಿಪಿಐ, ಅವಾಮಿ ನ್ಯಾಷನಲ್ ಕಾನ್ಫರೆನ್ಸ್ ಮತ್ತು ಜೆಕೆಪಿಎಂ ಜತೆಗೂಡಿ ಗುಪ್ಕಾರ ಮೈತ್ರಿಕೂಟವು ರಚನೆಯಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>