‘ಸರ್ಕಾರಕ್ಕೆ ರುಚಿಸದ ರೀತಿಯಲ್ಲಿ ಈ ನ್ಯಾಯಾಲಯ ಅಥವಾ ಕೊಲಿಜಿಯಂ ತೀರ್ಮಾನ ತೆಗೆದುಕೊಳ್ಳಬೇಕಾಗುವ ಸಂದರ್ಭವು ಸೃಷ್ಟಿ ಆಗುವುದಿಲ್ಲ ಎಂಬುದು ನಮ್ಮ ಆಶಯ’ ಎಂದು ಕೂಡ ಪೀಠವು ಹೇಳಿದೆ. ನ್ಯಾಯಮೂರ್ತಿಗಳ ನೇಮಕ ಹಾಗೂ ವರ್ಗಾವಣೆಗೆ ಸಂಬಂಧಿಸಿದ ಶಿಫಾರಸುಗಳ ವಿಚಾರದಲ್ಲಿ ಕೇಂದ್ರವು ತ್ವರಿತವಾಗಿ ಕ್ರಮ ಕೈಗೊಳ್ಳುತ್ತಿಲ್ಲ ಎಂದು ದೂರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಪೀಠ ನಡೆಸುತ್ತಿದೆ.