<p><strong>ನವದೆಹಲಿ:</strong> ಸ್ವಯಂ ಘೋಷಿತ ದೇವಮಾನವ ಸ್ವಾಮಿ ಚೈತನ್ಯಾನಂದ ಸರಸ್ವತಿ ಅವರು ತಮ್ಮ ವಿರುದ್ಧದ ವಂಚನೆ, ನಕಲು ಹಾಗೂ ಕ್ರಿಮಿನಲ್ ಪಿತೂರಿ ಆರೋಪಗಳ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ದೆಹಲಿ ನ್ಯಾಯಾಲಯ, ಆದೇಶವನ್ನು ಕಾಯ್ದಿರಿಸಿದೆ. </p>.<p>ಹೆಚ್ಚುವರಿ ಸೆಷನ್ಸ್ ನ್ಯಾಯಧೀಶೆ ಹರ್ದೀಪ್ ಕೌರ್ ಅವರು ಶುಕ್ರವಾರ ಸಂಜೆ ಅಥವಾ ಶನಿವಾರ ಆದೇಶವನ್ನು ಪ್ರಕಟಿಸಲಿದ್ದಾರೆ. </p>.<p>ಶ್ರೀ ಶಾರದಾ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್ಮೆಂಟ್ನಲ್ಲಿ ವ್ಯಾಸಾಂಗ ಮಾಡುತ್ತಿರುವ 17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆಯೂ ಚೈತನ್ಯಾನಂದ ಸರಸ್ವತಿ ವಿರುದ್ಧ ಎಫ್ಐಆರ್ ದಾಖಲಾಗಿದೆ. </p>.<p>‘ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನಂ ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠಂ’ ಸಂಸ್ಥೆಯ ಆಸ್ತಿಯನ್ನು ಲಾಭಕ್ಕಾಗಿ ಖಾಸಗಿ ಕಂಪನಿಗಳಿಗೆ ಬಿಟ್ಟುಕೊಡುವ ಮೂಲಕ ಚೈತನ್ಯಾನಂದ ಅವರು ಸಂಸ್ಥೆಯ ಮೇಲೆ ತಮ್ಮ ನಿಯಂತ್ರಣ ಸಾಧಿಸುತ್ತಿರುವುದು ತನಿಖೆ ವೇಳೆ ತಿಳಿದು ಬಂದಿದೆ. ಈ ರೀತಿ ಬಂದ ಹಣವನ್ನು ಅವರು ಐಷಾರಾಮಿ ವಾಹನಗಳನ್ನು ಖರೀದಿಸಲು ಬಳಸಿದ್ದಾರೆ’ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಸ್ವಯಂ ಘೋಷಿತ ದೇವಮಾನವ ಸ್ವಾಮಿ ಚೈತನ್ಯಾನಂದ ಸರಸ್ವತಿ ಅವರು ತಮ್ಮ ವಿರುದ್ಧದ ವಂಚನೆ, ನಕಲು ಹಾಗೂ ಕ್ರಿಮಿನಲ್ ಪಿತೂರಿ ಆರೋಪಗಳ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ದೆಹಲಿ ನ್ಯಾಯಾಲಯ, ಆದೇಶವನ್ನು ಕಾಯ್ದಿರಿಸಿದೆ. </p>.<p>ಹೆಚ್ಚುವರಿ ಸೆಷನ್ಸ್ ನ್ಯಾಯಧೀಶೆ ಹರ್ದೀಪ್ ಕೌರ್ ಅವರು ಶುಕ್ರವಾರ ಸಂಜೆ ಅಥವಾ ಶನಿವಾರ ಆದೇಶವನ್ನು ಪ್ರಕಟಿಸಲಿದ್ದಾರೆ. </p>.<p>ಶ್ರೀ ಶಾರದಾ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್ಮೆಂಟ್ನಲ್ಲಿ ವ್ಯಾಸಾಂಗ ಮಾಡುತ್ತಿರುವ 17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆಯೂ ಚೈತನ್ಯಾನಂದ ಸರಸ್ವತಿ ವಿರುದ್ಧ ಎಫ್ಐಆರ್ ದಾಖಲಾಗಿದೆ. </p>.<p>‘ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನಂ ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠಂ’ ಸಂಸ್ಥೆಯ ಆಸ್ತಿಯನ್ನು ಲಾಭಕ್ಕಾಗಿ ಖಾಸಗಿ ಕಂಪನಿಗಳಿಗೆ ಬಿಟ್ಟುಕೊಡುವ ಮೂಲಕ ಚೈತನ್ಯಾನಂದ ಅವರು ಸಂಸ್ಥೆಯ ಮೇಲೆ ತಮ್ಮ ನಿಯಂತ್ರಣ ಸಾಧಿಸುತ್ತಿರುವುದು ತನಿಖೆ ವೇಳೆ ತಿಳಿದು ಬಂದಿದೆ. ಈ ರೀತಿ ಬಂದ ಹಣವನ್ನು ಅವರು ಐಷಾರಾಮಿ ವಾಹನಗಳನ್ನು ಖರೀದಿಸಲು ಬಳಸಿದ್ದಾರೆ’ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>