<p><strong>ನವದೆಹಲಿ:</strong> ‘ಸ್ವಘೋಷಿತ ದೇವಮಾನವ ಸ್ವಾಮಿ ಚೈತನ್ಯಾನಂದ ಸರಸ್ವತಿ ಅವರ ವಸತಿಗೃಹಕ್ಕೆ ತಡರಾತ್ರಿ ವೇಳೆ ವಿದ್ಯಾರ್ಥಿನಿಯರಿಗೆ ಬಲವಂತವಾಗಿ ಭೇಟಿ ನೀಡುವಂತೆ ಒತ್ತಾಯಿಸುತ್ತಿದ್ದರು’ ಎಂದು ಶ್ರೀ ಶಾರದಾ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್ಮೆಂಟ್ನ ವಿದ್ಯಾರ್ಥಿನಿಯರು ದಾಖಲಿಸಿದ ಎಫ್ಐಆರ್ನಲ್ಲಿ ವಿವರಿಸಲಾಗಿದೆ.</p><p>ಸ್ವಾಮೀಜಿಯಿಂದ ಲೈಂಗಿಕ ಕಿರುಕುಳ ಹಾಗೂ ಬೆದರಿಕೆ ಕುರಿತು ಆಡಳಿತ ಮಂಡಳಿಯು ವರ್ಚುವಲ್ ಸಂವಾದ ನಡೆಸಿದ ವೇಳೆ 30ಕ್ಕೂ ಅಧಿಕ ವಿದ್ಯಾರ್ಥಿನಿಯರು ನೋವು ತೋಡಿಕೊಂಡ ಬೆನ್ನಲ್ಲೇ ದೂರು ದಾಖಲಿಸಿದೆ. </p><p>‘ಲೈಂಗಿಕವಾಗಿ ಸಹಕರಿಸದಿದ್ದರೆ, ಕಾಲೇಜಿನಿಂದ ಅಮಾನತು ಹಾಗೂ ಪದವಿಯನ್ನು ತಡೆಹಿಡಿಯಲಾಗುವುದು ಎಂದು ವಿದ್ಯಾರ್ಥಿನಿಯರಿಗೆ ಸ್ವಾಮೀಜಿ ಬೆದರಿಕೆ ಹಾಕಿದ್ದರು’ ಎಂದು ಎಫ್ಐಆರ್ ಉಲ್ಲೇಖಿಸಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>‘ವಿದ್ಯಾರ್ಥಿನಿಯರು ಆರ್ಥಿಕವಾಗಿ ತೀವ್ರ ಹಿಂದುಳಿದವರಾಗಿದ್ದು, ತಡರಾತ್ರಿ ವೇಳೆ ಸ್ವಾಮೀಜಿಯ ವಸತಿಗೃಹಕ್ಕೆ ತೆರಳಬೇಕಿತ್ತು. ವಿದ್ಯಾರ್ಥಿನಿಯೊಬ್ಬಳ ಅವಳ ಇಚ್ಛೆಗೆ ವಿರುದ್ಧವಾಗಿ ಹೆಸರು ಬದಲಾಯಿಸಲು ಬಲವಂತಪಡಿಸಲಾಗಿತ್ತು. ಸಾಕ್ಷಿಗಳನ್ನು ನಾಶಪಡಿಸುವ ಉದ್ದೇಶದಿಂದ ಮೊಬೈಲ್ನಲ್ಲಿದ್ದ ಸಂದೇಶಗಳನ್ನು ಅಳಿಸಲು ಒತ್ತಾಯಿಸಲಾಗಿತ್ತು’ ಎಂದು ದೂರಿನಲ್ಲಿ ತಿಳಿಸಲಾಗಿದೆ.</p><p>ವಸಂತ್ಕುಂಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>‘ತನಿಖೆಗಾಗಿ ಹಲವು ತಂಡಗಳನ್ನು ರಚಿಸಲಾಗಿದೆ. ಆರೋಪಿಯು ವಿದೇಶಕ್ಕೆ ಪರಾರಿಯಾಗುವ ಶಂಕೆಯಿಂದ, ಆರೋಪಿಯ ವಿರುದ್ಧ ಈಗಾಗಲೇ ಲುಕ್ಔಟ್ ನೋಟಿಸ್ ಜಾರಿಗೊಳಿಸಲಾಗಿದೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಸ್ವಘೋಷಿತ ದೇವಮಾನವ ಸ್ವಾಮಿ ಚೈತನ್ಯಾನಂದ ಸರಸ್ವತಿ ಅವರ ವಸತಿಗೃಹಕ್ಕೆ ತಡರಾತ್ರಿ ವೇಳೆ ವಿದ್ಯಾರ್ಥಿನಿಯರಿಗೆ ಬಲವಂತವಾಗಿ ಭೇಟಿ ನೀಡುವಂತೆ ಒತ್ತಾಯಿಸುತ್ತಿದ್ದರು’ ಎಂದು ಶ್ರೀ ಶಾರದಾ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್ಮೆಂಟ್ನ ವಿದ್ಯಾರ್ಥಿನಿಯರು ದಾಖಲಿಸಿದ ಎಫ್ಐಆರ್ನಲ್ಲಿ ವಿವರಿಸಲಾಗಿದೆ.</p><p>ಸ್ವಾಮೀಜಿಯಿಂದ ಲೈಂಗಿಕ ಕಿರುಕುಳ ಹಾಗೂ ಬೆದರಿಕೆ ಕುರಿತು ಆಡಳಿತ ಮಂಡಳಿಯು ವರ್ಚುವಲ್ ಸಂವಾದ ನಡೆಸಿದ ವೇಳೆ 30ಕ್ಕೂ ಅಧಿಕ ವಿದ್ಯಾರ್ಥಿನಿಯರು ನೋವು ತೋಡಿಕೊಂಡ ಬೆನ್ನಲ್ಲೇ ದೂರು ದಾಖಲಿಸಿದೆ. </p><p>‘ಲೈಂಗಿಕವಾಗಿ ಸಹಕರಿಸದಿದ್ದರೆ, ಕಾಲೇಜಿನಿಂದ ಅಮಾನತು ಹಾಗೂ ಪದವಿಯನ್ನು ತಡೆಹಿಡಿಯಲಾಗುವುದು ಎಂದು ವಿದ್ಯಾರ್ಥಿನಿಯರಿಗೆ ಸ್ವಾಮೀಜಿ ಬೆದರಿಕೆ ಹಾಕಿದ್ದರು’ ಎಂದು ಎಫ್ಐಆರ್ ಉಲ್ಲೇಖಿಸಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>‘ವಿದ್ಯಾರ್ಥಿನಿಯರು ಆರ್ಥಿಕವಾಗಿ ತೀವ್ರ ಹಿಂದುಳಿದವರಾಗಿದ್ದು, ತಡರಾತ್ರಿ ವೇಳೆ ಸ್ವಾಮೀಜಿಯ ವಸತಿಗೃಹಕ್ಕೆ ತೆರಳಬೇಕಿತ್ತು. ವಿದ್ಯಾರ್ಥಿನಿಯೊಬ್ಬಳ ಅವಳ ಇಚ್ಛೆಗೆ ವಿರುದ್ಧವಾಗಿ ಹೆಸರು ಬದಲಾಯಿಸಲು ಬಲವಂತಪಡಿಸಲಾಗಿತ್ತು. ಸಾಕ್ಷಿಗಳನ್ನು ನಾಶಪಡಿಸುವ ಉದ್ದೇಶದಿಂದ ಮೊಬೈಲ್ನಲ್ಲಿದ್ದ ಸಂದೇಶಗಳನ್ನು ಅಳಿಸಲು ಒತ್ತಾಯಿಸಲಾಗಿತ್ತು’ ಎಂದು ದೂರಿನಲ್ಲಿ ತಿಳಿಸಲಾಗಿದೆ.</p><p>ವಸಂತ್ಕುಂಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>‘ತನಿಖೆಗಾಗಿ ಹಲವು ತಂಡಗಳನ್ನು ರಚಿಸಲಾಗಿದೆ. ಆರೋಪಿಯು ವಿದೇಶಕ್ಕೆ ಪರಾರಿಯಾಗುವ ಶಂಕೆಯಿಂದ, ಆರೋಪಿಯ ವಿರುದ್ಧ ಈಗಾಗಲೇ ಲುಕ್ಔಟ್ ನೋಟಿಸ್ ಜಾರಿಗೊಳಿಸಲಾಗಿದೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>