‘ದೇಶವನ್ನು ಆಳುತ್ತಿರುವ ಕೆಲವು ಶಕ್ತಿಗಳು ಸಮಾಜದಲ್ಲಿ ಜಾತಿ ಮತ್ತು ಧರ್ಮದ ಆಧಾರದ ಮೇಲೆ ಉದ್ವಿಗ್ನತೆಯನ್ನು ಉಂಟುಮಾಡುವ ಮೂಲಕ ಅದನ್ನು ಹಿಂದಕ್ಕೆ ಕೊಂಡೊಯ್ಯುತ್ತಿವೆ. ಅವರು ಅಧಿಕಾರವನ್ನು ಜನರ ಕಲ್ಯಾಣಕ್ಕಾಗಿ ಬಳಸುತ್ತಿಲ್ಲ, ಬದಲಿಗೆ ಜನರ ನಡುವೆ ಒಡಕು ಮೂಡಿಸಲು ಬಳಸುತ್ತಿದ್ದಾರೆ’ ಎಂದು ಆರೋಪಿಸಿದ ಅವರು, ‘ಇಂಥ ಶಕ್ತಿಗಳ ವಿರುದ್ಧ ಹೋರಾಡುವುದು ಅಗತ್ಯ. ಇಲ್ಲದಿದ್ದರೆ ಜನಸಾಮಾನ್ಯರು ನಾಶವಾಗುತ್ತಾರೆ’ ಎಂದರು.