‘ಸಂತ್ರಸ್ತರೊಂದಿಗೆ ಚರ್ಚಿಸಿದ್ದೇನೆ. ಈ ವೇಳೆ ಕೆಲವರು ಹಣಕಾಸಿನ ನೆರವು ಒದಗಿಸುವಂತೆ ಕೇಳಿದ್ದಾರೆ. ನಿವೇಶನ ಕಳೆದುಕೊಂಡವರು ಬೇರೆಡೆ ನಿವೇಶನ ನೀಡುವಂತೆ ಮನವಿ ಮಾಡಿದ್ದಾರೆ. ಇನ್ನೂ ಕೆಲವರು ಜೋಶಿಮಠದಲ್ಲೇ ಸುರಕ್ಷಿತವಾಗಿರುವ ಸ್ಥಳಕ್ಕೆ ತಮ್ಮನ್ನು ಸ್ಥಳಾಂತರಿಸುವಂತೆ ಬೇಡಿಕೆ ಇಟ್ಟಿದ್ದಾರೆ. ಇದನ್ನೆಲ್ಲಾ ಗಮನದಲ್ಲಿಟ್ಟುಕೊಂಡು ಪುನರ್ವಸತಿ ಪ್ಯಾಕೇಜ್ ಸಿದ್ಧಪಡಿಸಲಾಗುತ್ತದೆ’ ಎಂದು ತಿಳಿಸಿದ್ದಾರೆ.