<p><strong>ನವದೆಹಲಿ:</strong> ‘ಕೋವಿಡ್–19’ ಪಿಡುಗಿನ ಮೂರನೇ ಅಲೆ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ ಎಂದು ಎಚ್ಚರಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಈ ಅಲೆಯಿಂದ ಉಂಟಾಗುವ ಪರಿಣಾಮವನ್ನು ಎದುರಿಸಲು ನಮ್ಮ ಸರ್ಕಾರ ಸಮರೋಪಾದಿಯಲ್ಲಿ ಸಿದ್ಧತೆ ನಡೆಸುತ್ತಿದೆ ಎಂದು ಶನಿವಾರ ಹೇಳಿದ್ದಾರೆ.</p>.<p>ಆನ್ಲೈನ್ ಮೂಲಕ ದೆಹಲಿಯ ಒಂಬತ್ತು ಆಸ್ಪತ್ರೆಗಳಲ್ಲಿ 22 ಹೊಸ ಪಿಎಸ್ಎ ಆಮ್ಲಜನಕ ಉತ್ಪಾದಕ ಘಟಕಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಮೂರನೇ ಅಲೆಯ ಬಗ್ಗೆ ಬ್ರಿಟನ್ನಿಂದ ಆತಂಕಕಾರಿ ಸೂಚನೆಗಳು ಬರುತ್ತಿವೆ. ಆ ದೇಶದಲ್ಲಿ ಶೇ 45 ರಷ್ಟು ಲಸಿಕೆ ನೀಡುವ ಪ್ರಕ್ರಿಯೆ ಪೂರ್ಣಗೊಂಡಿದ್ದರೂ, ಕೊರೊನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಆದ್ದರಿಂದ, ನಾವು ಈ ಸಮಯದಲ್ಲಿ ಸುಮ್ಮನೆ ಕುಳಿತುಕೊಳ್ಳಲು ಸಾಧ್ಯವಿಲ್ಲ‘ ಎಂದು ಅವರು ಹೇಳಿದರು.</p>.<p>‘ಕೋವಿಡ್ನ ಮೂರನೇ ಅಲೆ ಬಾರದಿರಲಿ ಎಂದು ನಾವು ಪ್ರಾರ್ಥಿಸುತ್ತೇವೆ. ಆದರೆ ಅದು ಸಂಭವಿಸಿದಲ್ಲಿ, ದೆಹಲಿಯ ನಾಗರಿಕರು ಮತ್ತೆ ಒಗ್ಗಟ್ಟಾಗಿ ಹೋರಾಡಬೇಕಿದೆ‘ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಕೋವಿಡ್–19’ ಪಿಡುಗಿನ ಮೂರನೇ ಅಲೆ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ ಎಂದು ಎಚ್ಚರಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಈ ಅಲೆಯಿಂದ ಉಂಟಾಗುವ ಪರಿಣಾಮವನ್ನು ಎದುರಿಸಲು ನಮ್ಮ ಸರ್ಕಾರ ಸಮರೋಪಾದಿಯಲ್ಲಿ ಸಿದ್ಧತೆ ನಡೆಸುತ್ತಿದೆ ಎಂದು ಶನಿವಾರ ಹೇಳಿದ್ದಾರೆ.</p>.<p>ಆನ್ಲೈನ್ ಮೂಲಕ ದೆಹಲಿಯ ಒಂಬತ್ತು ಆಸ್ಪತ್ರೆಗಳಲ್ಲಿ 22 ಹೊಸ ಪಿಎಸ್ಎ ಆಮ್ಲಜನಕ ಉತ್ಪಾದಕ ಘಟಕಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಮೂರನೇ ಅಲೆಯ ಬಗ್ಗೆ ಬ್ರಿಟನ್ನಿಂದ ಆತಂಕಕಾರಿ ಸೂಚನೆಗಳು ಬರುತ್ತಿವೆ. ಆ ದೇಶದಲ್ಲಿ ಶೇ 45 ರಷ್ಟು ಲಸಿಕೆ ನೀಡುವ ಪ್ರಕ್ರಿಯೆ ಪೂರ್ಣಗೊಂಡಿದ್ದರೂ, ಕೊರೊನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಆದ್ದರಿಂದ, ನಾವು ಈ ಸಮಯದಲ್ಲಿ ಸುಮ್ಮನೆ ಕುಳಿತುಕೊಳ್ಳಲು ಸಾಧ್ಯವಿಲ್ಲ‘ ಎಂದು ಅವರು ಹೇಳಿದರು.</p>.<p>‘ಕೋವಿಡ್ನ ಮೂರನೇ ಅಲೆ ಬಾರದಿರಲಿ ಎಂದು ನಾವು ಪ್ರಾರ್ಥಿಸುತ್ತೇವೆ. ಆದರೆ ಅದು ಸಂಭವಿಸಿದಲ್ಲಿ, ದೆಹಲಿಯ ನಾಗರಿಕರು ಮತ್ತೆ ಒಗ್ಗಟ್ಟಾಗಿ ಹೋರಾಡಬೇಕಿದೆ‘ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>