‘ಸೋನ್ಕರ್ ಅವರು ಪಾಲಿಕೆ ಆಯುಕ್ತರಿಗೆ ರಾಜೀನಾಮೆ ಸಲ್ಲಿಸಿದ್ದಾರೆ’ ಎಂದು ಚಂಡೀಗಢ ಬಿಜೆಪಿ ಅಧ್ಯಕ್ಷ ಜತೀಂದರ್ ಪಾಲ್ ಮಲ್ಹೋತ್ರಾ ಹೇಳಿದ್ದಾರೆ.
‘ಕಾಂಗ್ರೆಸ್ ಹಾಗೂ ಎಎಪಿ ನಡುವೆ ಯಾವುದೇ ಮೈತ್ರಿ ಇಲ್ಲ. ಅವರು ಜನರನ್ನು ಮೂರ್ಖರನ್ನಾಗಿ ಮಾಡುತ್ತಿದ್ದಾರೆ. ಅವರು ಜನರ ಮುಂದೆ ಬೆತ್ತಲಾಗುತ್ತಿದ್ದಾರೆ’ ಎಂದು ಮಲ್ಹೋತ್ರಾ ಹೇಳಿದ್ದಾರೆ.
ಏತನ್ಮಧ್ಯೆ, ಎಎಪಿಯ ಮೂವರು ಕೌನ್ಸಿಲರ್ಗಳು ನೇಹಾ, ಪೂನಂ ಹಾಗೂ ಗುರುಚರಣ್ ಕಾಲಾ ಅವರು ಪಕ್ಷದ ಹಿರಿಯ ನಾಯಕ ವಿನೋದ್ ತಾವ್ಡೆ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.