ಮಾಜಿ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರ ಪರವಾಗಿ, ಪತ್ನಿ ನಾರಾ ಭುವನೇಶ್ವರಿ ಕುಪ್ಪಂನಲ್ಲಿ ನಾಮಪತ್ರ ಸಲ್ಲಿಸಿದ್ದಾರೆ ಎಂದು ಟಿಡಿಪಿ ಪ್ರಕಟಣೆ ತಿಳಿಸಿದೆ.
ನಾಮಪತ್ರ ಸಲ್ಲಿಸಿದ ನಂತರ ಮಾತನಾಡಿದ ಭುವನೇಶ್ವರಿ ಕುಪ್ಪಂನಲ್ಲಿ ಟಿಡಿಪಿ ಗೆಲುವನ್ನು ಖಚಿತಪಡಿಸಿಕೊಳ್ಳುವಂತೆ ಬೇಡಿಕೊಂಡಿದ್ದಾರೆ.
ರಾಜಮಹೇಂದ್ರವರಂ ಲೋಕಸಭಾ ಕ್ಷೇತ್ರದಿಂದ ಪುರಂದೇಶ್ವರಿ ಅವರು ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಬಿಜೆಪಿಯ ಹಿರಿಯ ನಾಯಕ ವಿ. ಕೆ ಸಿಂಗ್ ಅವರು ಜೊತೆಗಿದ್ದರು.
ಟಿಡಿಪಿ, ಬಿಜೆಪಿ ಮತ್ತು ಜನಸೇನಾ ಪಕ್ಷಗಳು ಎನ್ಡಿಎ ಮೈತ್ರಿಕೂಟದ ಭಾಗವಾಗಿವೆ. ಮೇ 13ರಂದು ಆಂಧ್ರಪ್ರದೇಶದಲ್ಲಿ ಏಕಕಾಲಕ್ಕೆ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ನಡೆಯಲಿದೆ.