<p><strong>ಅಮರಾವತಿ</strong>: ಟಿಡಿಪಿ ವರಿಷ್ಠ ಮತ್ತು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಶಾಸಕ ಪಿ. ಶ್ರೀನಿವಾಸರಾವ್ ಯಾದವ್ ಅವರನ್ನು ಪಕ್ಷದ ಅಧ್ಯಕ್ಷರನ್ನಾಗಿ ನೇಮಿಸಿದ್ದಾರೆ.</p>.<p>ವಿಶಾಖಪಟ್ಟಣಂನ ಟಿಡಿಪಿ ಸಂಸದೀಯ ಪಕ್ಷದ ಅಧ್ಯಕ್ಷರಾಗಿ ಕೆಲಸ ಮಾಡಿರುವ ಯಾದವ್, ಹೊಸ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಲಿದ್ದಾರೆ ಎಂದು ನಾಯ್ಡು ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p>.<p>‘ಗಾಜುವಾಕ ಶಾಸಕ ಪಿ. ಶ್ರೀನಿವಾಸರಾವ್ ಯಾದವ್ ಅವರನ್ನು ಆಂಧ್ರಪ್ರದೇಶದ ಟಿಡಿಪಿ ಅಧ್ಯಕ್ಷರನ್ನಾಗಿ ನೇಮಿಸುತ್ತಿದ್ದೇನೆ. ಇದುವರೆಗೆ ಅಧ್ಯಕ್ಷರಾಗಿ ಪಕ್ಷವನ್ನು ಮುನ್ನಡೆಸಿದ ಹಿರಿಯ ನಾಯಕ ಅಚ್ಚನಾಯ್ಡು ಅವರನ್ನು ಅಭಿನಂದಿಸುತ್ತೇನೆ’ ಎಂದು ನಾಯ್ಡು ಅವರು ಟಿಡಿಪಿಯ ‘ಎಕ್ಸ್’ ಖಾತೆಯಲ್ಲಿ ಹೊಸ ಅಧ್ಯಕ್ಷರ ನೇಮಕಾತಿ ಪತ್ರವನ್ನು ಹಂಚಿಕೊಂಡಿದ್ದಾರೆ.</p>.<p>ಟಿಡಿಪಿ ಅಧ್ಯಕ್ಷರಾಗಿದ್ದ ಅಚ್ಚನಾಯ್ಡು ಅವರು ಚಂದ್ರಬಾಬು ನಾಯ್ಡು ಅವರ ಸಚಿವ ಸಂಪುಟದಲ್ಲಿ ಕೃಷಿ, ಸಹಕಾರ, ಮಾರುಕಟ್ಟೆ, ಪಶುಸಂಗೋಪನೆ ಮತ್ತು ಡೇರಿ ಅಭಿವೃದ್ಧಿ ಹಾಗೂ ಮೀನುಗಾರಿಕೆ ಇಲಾಖೆಯ ಸಚಿವರಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಮರಾವತಿ</strong>: ಟಿಡಿಪಿ ವರಿಷ್ಠ ಮತ್ತು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಶಾಸಕ ಪಿ. ಶ್ರೀನಿವಾಸರಾವ್ ಯಾದವ್ ಅವರನ್ನು ಪಕ್ಷದ ಅಧ್ಯಕ್ಷರನ್ನಾಗಿ ನೇಮಿಸಿದ್ದಾರೆ.</p>.<p>ವಿಶಾಖಪಟ್ಟಣಂನ ಟಿಡಿಪಿ ಸಂಸದೀಯ ಪಕ್ಷದ ಅಧ್ಯಕ್ಷರಾಗಿ ಕೆಲಸ ಮಾಡಿರುವ ಯಾದವ್, ಹೊಸ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಲಿದ್ದಾರೆ ಎಂದು ನಾಯ್ಡು ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p>.<p>‘ಗಾಜುವಾಕ ಶಾಸಕ ಪಿ. ಶ್ರೀನಿವಾಸರಾವ್ ಯಾದವ್ ಅವರನ್ನು ಆಂಧ್ರಪ್ರದೇಶದ ಟಿಡಿಪಿ ಅಧ್ಯಕ್ಷರನ್ನಾಗಿ ನೇಮಿಸುತ್ತಿದ್ದೇನೆ. ಇದುವರೆಗೆ ಅಧ್ಯಕ್ಷರಾಗಿ ಪಕ್ಷವನ್ನು ಮುನ್ನಡೆಸಿದ ಹಿರಿಯ ನಾಯಕ ಅಚ್ಚನಾಯ್ಡು ಅವರನ್ನು ಅಭಿನಂದಿಸುತ್ತೇನೆ’ ಎಂದು ನಾಯ್ಡು ಅವರು ಟಿಡಿಪಿಯ ‘ಎಕ್ಸ್’ ಖಾತೆಯಲ್ಲಿ ಹೊಸ ಅಧ್ಯಕ್ಷರ ನೇಮಕಾತಿ ಪತ್ರವನ್ನು ಹಂಚಿಕೊಂಡಿದ್ದಾರೆ.</p>.<p>ಟಿಡಿಪಿ ಅಧ್ಯಕ್ಷರಾಗಿದ್ದ ಅಚ್ಚನಾಯ್ಡು ಅವರು ಚಂದ್ರಬಾಬು ನಾಯ್ಡು ಅವರ ಸಚಿವ ಸಂಪುಟದಲ್ಲಿ ಕೃಷಿ, ಸಹಕಾರ, ಮಾರುಕಟ್ಟೆ, ಪಶುಸಂಗೋಪನೆ ಮತ್ತು ಡೇರಿ ಅಭಿವೃದ್ಧಿ ಹಾಗೂ ಮೀನುಗಾರಿಕೆ ಇಲಾಖೆಯ ಸಚಿವರಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>