<p><strong>ಅಮರಾವತಿ: ‘</strong>ಹಿಂದಿನ ವೈಎಸ್ಆರ್ಸಿಪಿ ಅವಧಿಯಲ್ಲಿ ಸುಮಾರು 60 ಲಕ್ಷ ಕೆ.ಜಿಯಷ್ಟು ಕಲಬೆರಕೆ ತುಪ್ಪ ಬಳಸಿ 20 ಕೋಟಿಗಿಂತಲೂ ಹೆಚ್ಚಿನ ಲಡ್ಡು ಪ್ರಸಾದ ತಯಾರಿಸಲಾಗಿದ್ದು, ಇದೊಂದು ಸಂಘಟಿತ ಅಪರಾಧ’ ಎಂದು ಆಂಧ್ರ ಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಹೇಳಿದರು. </p>.<p>ಕಲಬೆರಕೆ ತುಪ್ಪಕ್ಕೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಮಂಗಳವಾರ ನಡೆದ ವಿಶೇಷ ಸಭೆಯಲ್ಲಿ ಮಾತನಾಡಿದ ಅವರು, ‘ಕಲಬೆರಕೆ ತುಪ್ಪದ ಹಿಂದಿನ ಅಪರಾಧಿಗಳ ಕೂಟವು ವೆಂಕಟೇಶ್ವರ ಸ್ವಾಮಿಯ ಪ್ರಸಾದವನ್ನೇ ಅಪವಿತ್ರಗೊಳಿಸಿದೆ’ ಎಂದು ಆರೋಪಿಸಿದರು. </p>.<p>2019ರಿಂದ 2024ರ ಅವಧಿಯಲ್ಲಿ ಟಿಟಿಡಿಗೆ ಸುಮಾರು 59.71 ಲಕ್ಷ ಕೆ.ಜಿಯಷ್ಟು ಕಲಬೆರಕೆ ತುಪ್ಪ ಪೂರೈಕೆ ಆಗಿರುವುದು ಪರಿಶೀಲನೆಯಲ್ಲಿ ದೃಢಪಟ್ಟಿದೆ. ತಿರುಮಲ ತಿರುಪತಿ ದೇವಸ್ಥಾನದ ಆಡಳಿತದ ಜವಾಬ್ದಾರಿ ಹೊಂದಿರುವ ವ್ಯಕ್ತಿಯು ಕಲಬೆರಕೆ ತುಪ್ಪವನ್ನು ಸಂಗ್ರಹಿಸಿಟ್ಟುಕೊಳ್ಳಲು ಸುಮಾರು ₹234.51 ಕೋಟಿ ಖರ್ಚು ಮಾಡಿರುವ ಅಂಶವೂ ತನಿಖೆಯಲ್ಲಿ ಬಹಿರಂಗಗೊಂಡಿದೆ. ಅಪರಾಧಿಗಳು ಪ್ರಸಾದದ ಹೆಸರಿನಲ್ಲಿ ‘ಅಪವಿತ್ರ ಸಂಪ್ರದಾಯ’ವನ್ನೇ ಆರಂಭಿಸಿದ್ದರು ಎಂದರು. </p>.<p class="bodytext">‘ರಾಷ್ಷ್ಟ್ರೀಯ ಡೇರಿ ಅಭಿವೃದ್ಧಿ ಮಂಡಳಿ (ಎನ್ಡಿಡಿಬಿ) ನಡೆಸಿದ ಪರೀಕ್ಷೆಯಲ್ಲಿ ಲಡ್ಡು ಪ್ರಸಾದ ತಯಾರಿಕೆಗೆ ಬಳಸಿರುವುದು ಕಲಬೆರಕೆ ತುಪ್ಪ ಎನ್ನುವುದು ದೃಢಪಟ್ಟಿದೆ. ಈ ವರದಿ ಬಂದ ನಂತರವೇ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬಿನ ಅಂಶವಿದೆ ಎಂದು ಮಾತನಾಡಿದ್ದೇನೆ’ ಎಂದು ಚಂದ್ರಬಾಬು ನಾಯ್ಡು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಮರಾವತಿ: ‘</strong>ಹಿಂದಿನ ವೈಎಸ್ಆರ್ಸಿಪಿ ಅವಧಿಯಲ್ಲಿ ಸುಮಾರು 60 ಲಕ್ಷ ಕೆ.ಜಿಯಷ್ಟು ಕಲಬೆರಕೆ ತುಪ್ಪ ಬಳಸಿ 20 ಕೋಟಿಗಿಂತಲೂ ಹೆಚ್ಚಿನ ಲಡ್ಡು ಪ್ರಸಾದ ತಯಾರಿಸಲಾಗಿದ್ದು, ಇದೊಂದು ಸಂಘಟಿತ ಅಪರಾಧ’ ಎಂದು ಆಂಧ್ರ ಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಹೇಳಿದರು. </p>.<p>ಕಲಬೆರಕೆ ತುಪ್ಪಕ್ಕೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಮಂಗಳವಾರ ನಡೆದ ವಿಶೇಷ ಸಭೆಯಲ್ಲಿ ಮಾತನಾಡಿದ ಅವರು, ‘ಕಲಬೆರಕೆ ತುಪ್ಪದ ಹಿಂದಿನ ಅಪರಾಧಿಗಳ ಕೂಟವು ವೆಂಕಟೇಶ್ವರ ಸ್ವಾಮಿಯ ಪ್ರಸಾದವನ್ನೇ ಅಪವಿತ್ರಗೊಳಿಸಿದೆ’ ಎಂದು ಆರೋಪಿಸಿದರು. </p>.<p>2019ರಿಂದ 2024ರ ಅವಧಿಯಲ್ಲಿ ಟಿಟಿಡಿಗೆ ಸುಮಾರು 59.71 ಲಕ್ಷ ಕೆ.ಜಿಯಷ್ಟು ಕಲಬೆರಕೆ ತುಪ್ಪ ಪೂರೈಕೆ ಆಗಿರುವುದು ಪರಿಶೀಲನೆಯಲ್ಲಿ ದೃಢಪಟ್ಟಿದೆ. ತಿರುಮಲ ತಿರುಪತಿ ದೇವಸ್ಥಾನದ ಆಡಳಿತದ ಜವಾಬ್ದಾರಿ ಹೊಂದಿರುವ ವ್ಯಕ್ತಿಯು ಕಲಬೆರಕೆ ತುಪ್ಪವನ್ನು ಸಂಗ್ರಹಿಸಿಟ್ಟುಕೊಳ್ಳಲು ಸುಮಾರು ₹234.51 ಕೋಟಿ ಖರ್ಚು ಮಾಡಿರುವ ಅಂಶವೂ ತನಿಖೆಯಲ್ಲಿ ಬಹಿರಂಗಗೊಂಡಿದೆ. ಅಪರಾಧಿಗಳು ಪ್ರಸಾದದ ಹೆಸರಿನಲ್ಲಿ ‘ಅಪವಿತ್ರ ಸಂಪ್ರದಾಯ’ವನ್ನೇ ಆರಂಭಿಸಿದ್ದರು ಎಂದರು. </p>.<p class="bodytext">‘ರಾಷ್ಷ್ಟ್ರೀಯ ಡೇರಿ ಅಭಿವೃದ್ಧಿ ಮಂಡಳಿ (ಎನ್ಡಿಡಿಬಿ) ನಡೆಸಿದ ಪರೀಕ್ಷೆಯಲ್ಲಿ ಲಡ್ಡು ಪ್ರಸಾದ ತಯಾರಿಕೆಗೆ ಬಳಸಿರುವುದು ಕಲಬೆರಕೆ ತುಪ್ಪ ಎನ್ನುವುದು ದೃಢಪಟ್ಟಿದೆ. ಈ ವರದಿ ಬಂದ ನಂತರವೇ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬಿನ ಅಂಶವಿದೆ ಎಂದು ಮಾತನಾಡಿದ್ದೇನೆ’ ಎಂದು ಚಂದ್ರಬಾಬು ನಾಯ್ಡು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>