<p><strong>ಅಮರಾವತಿ:</strong> ತಿರುಪತಿ ಲಡ್ಡು ವಿರುದ್ಧದ ಕಲಬೆರಕೆ ಆರೋಪವನ್ನು ಬಹಿರಂಗ ಪಡಿಸಿರುವ ತಮ್ಮ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡಿರುವ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಇದನ್ನು ಮುಚ್ಚಿಡುವುದು ಅಪಚಾರಕ್ಕೆ ಸಮಾನವಾಗಿದೆ ಎಂದು ಪ್ರತಿಪಾದಿಸಿದರು.</p>.<p>ವಿಧಾನಸಭಾ ಅಧಿವೇಶನದಲ್ಲಿ ಮಾತನಾಡಿದ ಮುಖ್ಯಮಂತ್ರಿ, ‘ಇಂಥ ವಿಚಾರಗಳನ್ನು ತಡೆಹಿಡಿಯುವುದು ಸಾರ್ವಜನಿಕರ ನಂಬಿಕೆಗೆ ದ್ರೋಹವಾಗುತ್ತದೆ’ ಎಂದು ಹೇಳಿದರು. ‘ಭವಿಷ್ಯದಲ್ಲಿ ಏನಾದರೂ ವ್ಯತ್ಯಾಸಗಳಾದರೆ, ಅದಕ್ಕೆ ಸರ್ಕಾರ ಹೊಣೆಯಾಗಬೇಕಾಗುತ್ತದೆ’ ಎಂದು ತಿಳಿಸಿದರು.</p>.<p>‘ಲಡ್ಡು ಕಲಬೆರಕೆಯಾಗಿರುವುದನ್ನು ಬಹಿರಂಗಪಡಿಸದಿದ್ದರೆ, ನಮಗೆ ಅಪಚಾರವಾಗುತ್ತದೆ. ಸರ್ಕಾರ ಇದನ್ನು ಏಕೆ ಬಹಿರಂಗಪಡಿಸಿರಲಿಲ್ಲ’ ಎಂಬ ಪ್ರಶ್ನೆಯೂ ಉದ್ಭವಿಸುತ್ತದೆ’ ಎಂದು ನಾಯ್ಡು ಹೇಳಿದರು.</p>.<p>2024ರಲ್ಲಿ ವೈ.ಎಸ್. ಜಗಮೋಹನ್ರೆಡ್ಡಿ ನೇತೃತ್ವದ ಸರ್ಕಾರವಿದ್ದಾಗ, ಚಂದ್ರಬಾಬು ನಾಯ್ಡು ಅವರು ‘ತಿರುಪತಿಯ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂದು ಚಂದ್ರಬಾಬು ನಾಯ್ಡು ಆರೋಪಿಸಿದ್ದರು.</p>.<p>ಇದೇ ವೇಳೆ ‘ರಾಜ್ಯದ ಎಲ್ಲ ದೇವಾಲಯಗಳನ್ನು ಶುದ್ಧೀಕರಿಸಲಾಗಿದೆ. ಯಾರ ಭಾವನೆಗಳನ್ನೂ ನೋಯಿಸುವುದಿಲ್ಲ. ಪ್ರತಿ ದೇವಾಲಯದ ಪಾವಿತ್ರ್ಯ ಉಳಿಸುವ ಜವಾಬ್ದಾರಿಯನ್ನು ಎನ್ಡಿಎ ಸರ್ಕಾರ ತೆಗೆದುಕೊಳ್ಳಲಿದೆ ಎಂದು ಈ ಮೂಲಕ ಭರವಸೆ ನೀಡುತ್ತೇನೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಮರಾವತಿ:</strong> ತಿರುಪತಿ ಲಡ್ಡು ವಿರುದ್ಧದ ಕಲಬೆರಕೆ ಆರೋಪವನ್ನು ಬಹಿರಂಗ ಪಡಿಸಿರುವ ತಮ್ಮ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡಿರುವ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಇದನ್ನು ಮುಚ್ಚಿಡುವುದು ಅಪಚಾರಕ್ಕೆ ಸಮಾನವಾಗಿದೆ ಎಂದು ಪ್ರತಿಪಾದಿಸಿದರು.</p>.<p>ವಿಧಾನಸಭಾ ಅಧಿವೇಶನದಲ್ಲಿ ಮಾತನಾಡಿದ ಮುಖ್ಯಮಂತ್ರಿ, ‘ಇಂಥ ವಿಚಾರಗಳನ್ನು ತಡೆಹಿಡಿಯುವುದು ಸಾರ್ವಜನಿಕರ ನಂಬಿಕೆಗೆ ದ್ರೋಹವಾಗುತ್ತದೆ’ ಎಂದು ಹೇಳಿದರು. ‘ಭವಿಷ್ಯದಲ್ಲಿ ಏನಾದರೂ ವ್ಯತ್ಯಾಸಗಳಾದರೆ, ಅದಕ್ಕೆ ಸರ್ಕಾರ ಹೊಣೆಯಾಗಬೇಕಾಗುತ್ತದೆ’ ಎಂದು ತಿಳಿಸಿದರು.</p>.<p>‘ಲಡ್ಡು ಕಲಬೆರಕೆಯಾಗಿರುವುದನ್ನು ಬಹಿರಂಗಪಡಿಸದಿದ್ದರೆ, ನಮಗೆ ಅಪಚಾರವಾಗುತ್ತದೆ. ಸರ್ಕಾರ ಇದನ್ನು ಏಕೆ ಬಹಿರಂಗಪಡಿಸಿರಲಿಲ್ಲ’ ಎಂಬ ಪ್ರಶ್ನೆಯೂ ಉದ್ಭವಿಸುತ್ತದೆ’ ಎಂದು ನಾಯ್ಡು ಹೇಳಿದರು.</p>.<p>2024ರಲ್ಲಿ ವೈ.ಎಸ್. ಜಗಮೋಹನ್ರೆಡ್ಡಿ ನೇತೃತ್ವದ ಸರ್ಕಾರವಿದ್ದಾಗ, ಚಂದ್ರಬಾಬು ನಾಯ್ಡು ಅವರು ‘ತಿರುಪತಿಯ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂದು ಚಂದ್ರಬಾಬು ನಾಯ್ಡು ಆರೋಪಿಸಿದ್ದರು.</p>.<p>ಇದೇ ವೇಳೆ ‘ರಾಜ್ಯದ ಎಲ್ಲ ದೇವಾಲಯಗಳನ್ನು ಶುದ್ಧೀಕರಿಸಲಾಗಿದೆ. ಯಾರ ಭಾವನೆಗಳನ್ನೂ ನೋಯಿಸುವುದಿಲ್ಲ. ಪ್ರತಿ ದೇವಾಲಯದ ಪಾವಿತ್ರ್ಯ ಉಳಿಸುವ ಜವಾಬ್ದಾರಿಯನ್ನು ಎನ್ಡಿಎ ಸರ್ಕಾರ ತೆಗೆದುಕೊಳ್ಳಲಿದೆ ಎಂದು ಈ ಮೂಲಕ ಭರವಸೆ ನೀಡುತ್ತೇನೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>