<p><strong>ಅಮರಾವತಿ, ಆಂಧ್ರಪ್ರದೇಶ:</strong> ಕುಪ್ಪಂ ವಿಧಾನಸಭಾ ಕ್ಷೇತ್ರ ಪ್ರವೇಶಿಸಲು ಮುಂದಾದ ತೆಲುಗು ದೇಶಂ ಪಾರ್ಟಿ (ಟಿಡಿಪಿ) ಅಧ್ಯಕ್ಷ ಎನ್.ಚಂದ್ರಬಾಬು ನಾಯ್ಡು ಅವರನ್ನು ಪೊಲೀಸರು ಬುಧವಾರ ತಡೆದರು.</p>.<p>ರಾಜ್ಯದಾದ್ಯಂತ ಸಾರ್ವಜನಿಕ ಸಭೆಗಳು ಹಾಗೂ ರ್ಯಾಲಿಗಳನ್ನು ನಡೆಸದಂತೆ ನಿಷೇಧ ಹೇರಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ ಬೆನ್ನಲ್ಲೇ, ಪೊಲೀಸರು ನಾಯ್ಡು ಅವರಿಗೆ ತಡೆಯೊಡ್ಡಿದ ಘಟನೆ ನಡೆದಿದೆ.</p>.<p>ಟಿಡಿಪಿ ನಾಯಕರಿದ್ದ ಹಲವು ವಾಹನಗಳನ್ನು ಜಪ್ತಿ ಮಾಡಿದ ಪೊಲೀಸರು, ಪಕ್ಷದ ಕಾರ್ಯಕರ್ತರನ್ನು ಚದುರಿಸಲು ಲಾಠಿ ಪ್ರಹಾರ ನಡೆಸಿದರು. ಕೆಲ ಕಾರ್ಯಕರ್ತರನ್ನು ವಶಕ್ಕೆ ಪಡೆದರು.</p>.<p>ಬೆಂಗಳೂರಿನಿಂದ ಮರಳಿದ ನಾಯ್ಡು ಅವರಿಗೆ ಸಾವಿರಾರು ಬೆಂಬಲಿಗರು ಸ್ವಾಗತ ಕೋರಿದರು. ಆದರೆ, ಅವರು ಕುಪ್ಪಂ ವಿಧಾನಸಭಾ ಕ್ಷೇತ್ರದ ಗಡಿಯ ಗ್ರಾಮ ಪೆದ್ದೂರು ತಲುಪುತ್ತಿದ್ದಂತೆಯೇ, ಪೊಲೀಸರು ಅವರನ್ನು ತಡೆದರು.</p>.<p>ಈ ವೇಳೆ, ನಾಯ್ಡು ಅವರು ಪೊಲೀಸ್ ಅಧಿಕಾರಿಯೊಂದಿಗೆ ವಾಗ್ವಾದ ನಡೆಸಿದರಲ್ಲದೇ, ತಮ್ಮ ಭೇಟಿಗೆ ಅನುಮತಿ ನಿರಾಕರಿಸಲು ಕಾರಣ ಏನು ಎಂದು ಪ್ರಶ್ನಿಸಿದರು. ಇದಕ್ಕೆ ಪೊಲೀಸ್ ಅಧಿಕಾರಿ ಉತ್ತರಿಸಲಿಲ್ಲ.</p>.<p>ನಂತರ ಅವರು, ಪೊಲೀಸರ ಪ್ರತಿರೋಧವನ್ನು ಧಿಕ್ಕರಿಸಿ, ಪೆದ್ದೂರು ಗ್ರಾಮದ ಬೀದಿಗಳಲ್ಲಿ ಸಂಚರಿಸಿದರಲ್ಲದೇ, ಸಾರ್ವಜನಿಕ ಸಭೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಮರಾವತಿ, ಆಂಧ್ರಪ್ರದೇಶ:</strong> ಕುಪ್ಪಂ ವಿಧಾನಸಭಾ ಕ್ಷೇತ್ರ ಪ್ರವೇಶಿಸಲು ಮುಂದಾದ ತೆಲುಗು ದೇಶಂ ಪಾರ್ಟಿ (ಟಿಡಿಪಿ) ಅಧ್ಯಕ್ಷ ಎನ್.ಚಂದ್ರಬಾಬು ನಾಯ್ಡು ಅವರನ್ನು ಪೊಲೀಸರು ಬುಧವಾರ ತಡೆದರು.</p>.<p>ರಾಜ್ಯದಾದ್ಯಂತ ಸಾರ್ವಜನಿಕ ಸಭೆಗಳು ಹಾಗೂ ರ್ಯಾಲಿಗಳನ್ನು ನಡೆಸದಂತೆ ನಿಷೇಧ ಹೇರಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ ಬೆನ್ನಲ್ಲೇ, ಪೊಲೀಸರು ನಾಯ್ಡು ಅವರಿಗೆ ತಡೆಯೊಡ್ಡಿದ ಘಟನೆ ನಡೆದಿದೆ.</p>.<p>ಟಿಡಿಪಿ ನಾಯಕರಿದ್ದ ಹಲವು ವಾಹನಗಳನ್ನು ಜಪ್ತಿ ಮಾಡಿದ ಪೊಲೀಸರು, ಪಕ್ಷದ ಕಾರ್ಯಕರ್ತರನ್ನು ಚದುರಿಸಲು ಲಾಠಿ ಪ್ರಹಾರ ನಡೆಸಿದರು. ಕೆಲ ಕಾರ್ಯಕರ್ತರನ್ನು ವಶಕ್ಕೆ ಪಡೆದರು.</p>.<p>ಬೆಂಗಳೂರಿನಿಂದ ಮರಳಿದ ನಾಯ್ಡು ಅವರಿಗೆ ಸಾವಿರಾರು ಬೆಂಬಲಿಗರು ಸ್ವಾಗತ ಕೋರಿದರು. ಆದರೆ, ಅವರು ಕುಪ್ಪಂ ವಿಧಾನಸಭಾ ಕ್ಷೇತ್ರದ ಗಡಿಯ ಗ್ರಾಮ ಪೆದ್ದೂರು ತಲುಪುತ್ತಿದ್ದಂತೆಯೇ, ಪೊಲೀಸರು ಅವರನ್ನು ತಡೆದರು.</p>.<p>ಈ ವೇಳೆ, ನಾಯ್ಡು ಅವರು ಪೊಲೀಸ್ ಅಧಿಕಾರಿಯೊಂದಿಗೆ ವಾಗ್ವಾದ ನಡೆಸಿದರಲ್ಲದೇ, ತಮ್ಮ ಭೇಟಿಗೆ ಅನುಮತಿ ನಿರಾಕರಿಸಲು ಕಾರಣ ಏನು ಎಂದು ಪ್ರಶ್ನಿಸಿದರು. ಇದಕ್ಕೆ ಪೊಲೀಸ್ ಅಧಿಕಾರಿ ಉತ್ತರಿಸಲಿಲ್ಲ.</p>.<p>ನಂತರ ಅವರು, ಪೊಲೀಸರ ಪ್ರತಿರೋಧವನ್ನು ಧಿಕ್ಕರಿಸಿ, ಪೆದ್ದೂರು ಗ್ರಾಮದ ಬೀದಿಗಳಲ್ಲಿ ಸಂಚರಿಸಿದರಲ್ಲದೇ, ಸಾರ್ವಜನಿಕ ಸಭೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>