ಅಷ್ಟಬಂಧನ ಬಾಲಾಲಯ ಮಹಾ ಸಂಪ್ರೋಕ್ಷಣಮ್ ಎಂಬ ಧಾರ್ಮಿಕ ಆಚರಣೆಯನ್ನು 12 ವರ್ಷಗಳಿಗೊಮ್ಮೆ ನಡೆಸಲಾಗುತ್ತಿದೆ. ಈ ವೇಳೆ ಭಕ್ತರಿಗೆ ದೇವಸ್ಥಾನ ಪ್ರವೇಶ ನಿರ್ಬಂಧಿಸಲು ಟಿಟಿಡಿ ನಿರ್ಧರಿಸಿತ್ತು. ಅಧಿಕಾರಿಗಳ ಜೊತೆ ಮಂಗಳವಾರ ಸಭೆ ನಡೆಸಿದ ನಾಯ್ಡು, ನಿತ್ಯ 25ರಿಂದ 30 ಸಾವಿರ ಭಕ್ತರಿಗಾದರೂ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡುವಂತೆ ಸೂಚಿಸಿದ್ದಾರೆ.