<p>ಕೋಲ್ಕತ್ತ (ಪಿಟಿಐ): ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮ ನಡೆಸಿರುವ ಆರೋಪಕ್ಕೆ ಸಂಬಂಧಿಸಿದ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಸಚಿವ ಚಂದ್ರನಾಥ ಸಿನ್ಹಾ ಅವರು ಇಲ್ಲಿನ ಜಾರಿ ನಿರ್ದೇಶನಾಲಯದ (ಇ.ಡಿ ) ಪ್ರಕರಣಗಳ ನ್ಯಾಯಾಲಯಕ್ಕೆ ಶನಿವಾರ ಶರಣಾದರು.</p>.<p>ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು ಹಾಗೂ ಜವಳಿ ಖಾತೆಯ ಸಚಿವರಾಗಿರುವ ಸಿನ್ಹಾ ಅವರು ನ್ಯಾಯಾಲಯದ ಆದೇಶದಂತೆ ಶರಣಾದರು. ಇ.ಡಿ ಕಸ್ಟಡಿಗೆ ಕೋರಿತು. ಆದರೆ ನ್ಯಾಯಾಲಯವು ಷರತ್ತು ವಿಧಿಸಿ, ₹ 10 ಸಾವಿರ ಮೊತ್ತದ ವೈಯಕ್ತಿಕ ಬಾಂಡ್ ಮೇಲೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಜಾಮೀನು ಮಂಜೂರಾಗಿದ್ದರೂ ಸಿನ್ಹಾ ಅವರು ತಮ್ಮ ವಿಧಾನಸಭಾ ಕ್ಷೇತ್ರ ಹಾಗೂ ಕೋಲ್ಕತ್ತದ ಹೊರ ಹೋಗುವಂತಿಲ್ಲ ಎಂದು ನ್ಯಾಯಾಲಯ ಸೂಚಿಸಿದೆ.</p>.<p>‘ತನಿಖೆಗೆ ಸಹಕಾರ ನೀಡಬೇಕು. ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆ ಮುಗಿಯುವ ತನಕವೂ ಷರತ್ತುಗಳನ್ನು ಪಾಲಿಸಬೇಕು’ ಎಂದು ಆದೇಶಿಸಿದೆ.</p>.<p>ಹಣ ದುರುಪಯೋಗದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿನ್ಹಾ ಕೆಲವು ಸಮಯದಿಂದ ಇ.ಡಿ.ಯ ಕಣ್ಗಾವಲಿನಲ್ಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೋಲ್ಕತ್ತ (ಪಿಟಿಐ): ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮ ನಡೆಸಿರುವ ಆರೋಪಕ್ಕೆ ಸಂಬಂಧಿಸಿದ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಸಚಿವ ಚಂದ್ರನಾಥ ಸಿನ್ಹಾ ಅವರು ಇಲ್ಲಿನ ಜಾರಿ ನಿರ್ದೇಶನಾಲಯದ (ಇ.ಡಿ ) ಪ್ರಕರಣಗಳ ನ್ಯಾಯಾಲಯಕ್ಕೆ ಶನಿವಾರ ಶರಣಾದರು.</p>.<p>ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು ಹಾಗೂ ಜವಳಿ ಖಾತೆಯ ಸಚಿವರಾಗಿರುವ ಸಿನ್ಹಾ ಅವರು ನ್ಯಾಯಾಲಯದ ಆದೇಶದಂತೆ ಶರಣಾದರು. ಇ.ಡಿ ಕಸ್ಟಡಿಗೆ ಕೋರಿತು. ಆದರೆ ನ್ಯಾಯಾಲಯವು ಷರತ್ತು ವಿಧಿಸಿ, ₹ 10 ಸಾವಿರ ಮೊತ್ತದ ವೈಯಕ್ತಿಕ ಬಾಂಡ್ ಮೇಲೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಜಾಮೀನು ಮಂಜೂರಾಗಿದ್ದರೂ ಸಿನ್ಹಾ ಅವರು ತಮ್ಮ ವಿಧಾನಸಭಾ ಕ್ಷೇತ್ರ ಹಾಗೂ ಕೋಲ್ಕತ್ತದ ಹೊರ ಹೋಗುವಂತಿಲ್ಲ ಎಂದು ನ್ಯಾಯಾಲಯ ಸೂಚಿಸಿದೆ.</p>.<p>‘ತನಿಖೆಗೆ ಸಹಕಾರ ನೀಡಬೇಕು. ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆ ಮುಗಿಯುವ ತನಕವೂ ಷರತ್ತುಗಳನ್ನು ಪಾಲಿಸಬೇಕು’ ಎಂದು ಆದೇಶಿಸಿದೆ.</p>.<p>ಹಣ ದುರುಪಯೋಗದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿನ್ಹಾ ಕೆಲವು ಸಮಯದಿಂದ ಇ.ಡಿ.ಯ ಕಣ್ಗಾವಲಿನಲ್ಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>