ಈ ಕುರಿತು ಸುದ್ದಿ ಸಂಸ್ಥೆ ಎಎನ್ಐ ಜೊತೆಗೆ ಮಾತನಾಡಿರುವ ರೇಖಾ ಶರ್ಮಾ,‘2018 ರಲ್ಲಿ ಮೀಟೂ ಚಳವಳಿಯ ಸಮಯದಲ್ಲಿ ಚರಣಜಿತ್ ಸಿಂಗ್ ಚನ್ನಿ ಅವರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಹೊರಿಸಲಾಯಿತು. ಪಂಜಾಬ್ ರಾಜ್ಯ ಮಹಿಳಾ ಆಯೋಗವು ಈ ವಿಷಯದ ಬಗ್ಗೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿತು. ಚನ್ನಿ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಲು ಆಗ್ರಹಿಸಿ ರಾಜ್ಯ ಮಹಿಳಾ ಆಯೋಗದ ಆಧ್ಯಕ್ಷರು ಸ್ವತಃ ಧರಣಿ ಕುಳಿತರು. ಆದರೆ ಏನೂ ಆಗಲಿಲ್ಲ,‘ ಎಂದು ರೇಖಾ ಶರ್ಮಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.