ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಭಾರತ ಮಾತಾಕಿ ಜೈ’ ಎಂದು ಕೂಗುವುದು ದೇಶಭಕ್ತಿಯಲ್ಲ: ಹೊಸಬಾಳೆ

Last Updated 13 ಜನವರಿ 2023, 15:32 IST
ಅಕ್ಷರ ಗಾತ್ರ

ಸುಲ್ತಾನ್‌ಪುರ (ಉತ್ತರ ಪ್ರದೇಶ): ‘ಭಾರತ ಮಾತಾಕಿ ಜೈ’ ಎಂದು ಕೂಗುವುದು ದೇಶಭಕ್ತಿ ಅಲ್ಲ. ದೇಶಭಕ್ತರಾಗುವುದಕ್ಕೆ ನಿಸ್ವಾರ್ಥ ಸೇವೆಯ ಅಗತ್ಯ ಇದೆ’ ಎಂದು ಆರ್‌ಎಸ್‌ಎಸ್‌ನ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಶುಕ್ರವಾರ ಅಭಿಪ್ರಾಯಪಟ್ಟರು.

ಶ್ರೀರಾಮನ ಹೆಸರಿನಿಂದ ಜನರ ಉನ್ನತಿಯಾಗಿಲ್ಲ. ಆದರೆ, ರಾಮನ ಕೆಲಸಗಳು ಜನರನ್ನು ಉನ್ನತೀಕರಿಸಿವೆ ಎಂದು ಹೊಸಬಾಳೆ ಅವರು ಉದಾಹರಣೆ ನೀಡಿದರು.

‘ಮಕರ ಸಂಕ್ರಾಂತಿ’ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಶ್ರೀಕೃಷ್ಣನ ಹಿರಿಮೆ, ಶ್ರೀರಾಮನ ಗರಿಮೆಗಳನ್ನು ಜನರು ತಮ್ಮ ವರ್ತನೆಯಲ್ಲಿ ರೂಢಿಸಿಕೊಂಡರೆ ಮಾತ್ರವೇ ಕೃಷ್ಣ, ರಾಮರು ಜನರ ಮಧ್ಯೆ ಇರುತ್ತಾರೆ’ ಎಂದರು.

‘ಭಾರತ ಮಾತಾಕಿ ಜೈ’ ಎಂದು ಕೂಗಿದರೆ ದೇಶಭಕ್ತಿ ಇದೆ ಎಂದು ಅರ್ಥವಲ್ಲ. ಜೀವನದಲ್ಲಿ ಕಠಿಣ ಪರಿಶ್ರಮ ಪಡುವ ವ್ಯಕ್ತಿಗೆ ಮಾತ್ರವೇ ಭಾರತ್‌ ಮಾತಾಕಿ ಜೈ ಎಂದು ಹೇಳುವ ನೈತಿಕ ಹಕ್ಕಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT