<p><strong>ಲಖನೌ:</strong> ನಿರಂತರ ಮಳೆಯಿಂದ ಹಲವೆಡೆ ಭೂಕುಸಿತ ಸಂಭವಿಸಿದ್ದರಿಂದ ಉತ್ತರಾಖಂಡದ ಚಾರ್ಧಾಮ್ ಯಾತ್ರೆಯನ್ನು ಗುರುವಾರ ಸ್ಥಗಿತಗೊಳಿಸಲಾಗಿದೆ. ಮಾರ್ಗ ಮಧ್ಯದಲ್ಲಿ ಸಿಲುಕಿದ ಯಾತ್ರಾರ್ಥಿಗಳನ್ನು ಕೇಂದ್ರ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್) ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪಡೆಯ (ಎಸ್ಡಿಆರ್ಎಫ್) ಸಿಬ್ಬಂದಿ ಹಾಗೂ ಪೊಲೀಸರು ರಕ್ಷಿಸಿದ್ದಾರೆ.</p>.<p>ಕೇದರನಾಥಕ್ಕೆ ತೆರಳುವ ಹೆದ್ದಾರಿಯ ಸೋನ್ಪ್ರಯಾಗ್ ಹಾಗೂ ಗೌರಿಕುಂಡದ ಮಧ್ಯೆ ಭೂಕುಸಿತ ಸಂಭವಿಸಿ ರಸ್ತೆಗೆ ಮಣ್ಣು, ಬಂಡೆಗಳು ಬಂದು ಬಿದ್ದಿವೆ. </p>.<p>‘ರಸ್ತೆಯು ಸಂಪೂರ್ಣವಾಗಿ ಮುಚ್ಚಿದ್ದು, ಎಸ್ಡಿಆರ್ಎಫ್ ಸಿಬ್ಬಂದಿ ಯಾತ್ರಾರ್ಥಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದರು. ಬಂಡೆಗಳನ್ನು ತೆರವುಗೊಳಿಸಿದ ಬಳಿಕವೇ ಯಾತ್ರೆಯು ಮತ್ತೆ ಆರಂಭವಾಗಲಿದೆ’ ಎಂದು ರುದ್ರಪ್ರಯಾಗ್ ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಕೇದಾರನಾಥದಿಂದ ಹಿಂತಿರುಗುತ್ತಿದ್ದ 40 ಯಾತ್ರಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದು, ಅವರೆಲ್ಲರನ್ನೂ ಎಸ್ಡಿಆರ್ಎಫ್ ಸಿಬ್ಬಂದಿ ರಕ್ಷಿಸಿದ್ದಾರೆ.</p>.<div dir="ltr"> <p>ಭೂಕುಸಿತದಿಂದ ಯುಮನೋತ್ರಿಗೆ ತೆರಳುವ ಹೆದ್ದಾರಿಯನ್ನು ಬಂದ್ ಮಾಡಲಾಗಿದೆ. ಸೆಲಾಯಿ ಬಂದ್ ಹಾಗೂ ಒಜ್ರಿ ನಡುವೆ ಹೆದ್ದಾರಿಯು ಮಳೆಯಿಂದ ಕೊಚ್ಚಿಹೋಗಿದ್ದು, ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.</p> <p>‘ಯಾತ್ರಾರ್ಥಿಗಳ ಸುರಕ್ಷತೆಯೇ ಸರ್ಕಾರದ ಮೊದಲ ಆದ್ಯತೆ’ ಎಂದು ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ತಿಳಿಸಿದ್ದಾರೆ.</p> <p>‘ಅಲಕಾನಾಂದ ನದಿ ಸೇರಿದಂತೆ ರಾಜ್ಯದ ಪ್ರಮುಖ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಇದರಿಂದ ತಗ್ಗುಪ್ರದೇಶದಲ್ಲಿರುವ ಮನೆ ಹಾಗೂ ದೇವಸ್ಥಾನಗಳು ನೀರಿನಲ್ಲಿ ಮುಳುಗಿವೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p> </div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ನಿರಂತರ ಮಳೆಯಿಂದ ಹಲವೆಡೆ ಭೂಕುಸಿತ ಸಂಭವಿಸಿದ್ದರಿಂದ ಉತ್ತರಾಖಂಡದ ಚಾರ್ಧಾಮ್ ಯಾತ್ರೆಯನ್ನು ಗುರುವಾರ ಸ್ಥಗಿತಗೊಳಿಸಲಾಗಿದೆ. ಮಾರ್ಗ ಮಧ್ಯದಲ್ಲಿ ಸಿಲುಕಿದ ಯಾತ್ರಾರ್ಥಿಗಳನ್ನು ಕೇಂದ್ರ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್) ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪಡೆಯ (ಎಸ್ಡಿಆರ್ಎಫ್) ಸಿಬ್ಬಂದಿ ಹಾಗೂ ಪೊಲೀಸರು ರಕ್ಷಿಸಿದ್ದಾರೆ.</p>.<p>ಕೇದರನಾಥಕ್ಕೆ ತೆರಳುವ ಹೆದ್ದಾರಿಯ ಸೋನ್ಪ್ರಯಾಗ್ ಹಾಗೂ ಗೌರಿಕುಂಡದ ಮಧ್ಯೆ ಭೂಕುಸಿತ ಸಂಭವಿಸಿ ರಸ್ತೆಗೆ ಮಣ್ಣು, ಬಂಡೆಗಳು ಬಂದು ಬಿದ್ದಿವೆ. </p>.<p>‘ರಸ್ತೆಯು ಸಂಪೂರ್ಣವಾಗಿ ಮುಚ್ಚಿದ್ದು, ಎಸ್ಡಿಆರ್ಎಫ್ ಸಿಬ್ಬಂದಿ ಯಾತ್ರಾರ್ಥಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದರು. ಬಂಡೆಗಳನ್ನು ತೆರವುಗೊಳಿಸಿದ ಬಳಿಕವೇ ಯಾತ್ರೆಯು ಮತ್ತೆ ಆರಂಭವಾಗಲಿದೆ’ ಎಂದು ರುದ್ರಪ್ರಯಾಗ್ ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಕೇದಾರನಾಥದಿಂದ ಹಿಂತಿರುಗುತ್ತಿದ್ದ 40 ಯಾತ್ರಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದು, ಅವರೆಲ್ಲರನ್ನೂ ಎಸ್ಡಿಆರ್ಎಫ್ ಸಿಬ್ಬಂದಿ ರಕ್ಷಿಸಿದ್ದಾರೆ.</p>.<div dir="ltr"> <p>ಭೂಕುಸಿತದಿಂದ ಯುಮನೋತ್ರಿಗೆ ತೆರಳುವ ಹೆದ್ದಾರಿಯನ್ನು ಬಂದ್ ಮಾಡಲಾಗಿದೆ. ಸೆಲಾಯಿ ಬಂದ್ ಹಾಗೂ ಒಜ್ರಿ ನಡುವೆ ಹೆದ್ದಾರಿಯು ಮಳೆಯಿಂದ ಕೊಚ್ಚಿಹೋಗಿದ್ದು, ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.</p> <p>‘ಯಾತ್ರಾರ್ಥಿಗಳ ಸುರಕ್ಷತೆಯೇ ಸರ್ಕಾರದ ಮೊದಲ ಆದ್ಯತೆ’ ಎಂದು ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ತಿಳಿಸಿದ್ದಾರೆ.</p> <p>‘ಅಲಕಾನಾಂದ ನದಿ ಸೇರಿದಂತೆ ರಾಜ್ಯದ ಪ್ರಮುಖ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಇದರಿಂದ ತಗ್ಗುಪ್ರದೇಶದಲ್ಲಿರುವ ಮನೆ ಹಾಗೂ ದೇವಸ್ಥಾನಗಳು ನೀರಿನಲ್ಲಿ ಮುಳುಗಿವೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p> </div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>