<p class="title">ನವದೆಹಲಿ (ಪಿಟಿಐ): ಕಾರಿನಡಿ ಸಿಲುಕಿದ್ದ ಯುವತಿಯನ್ನು 12 ಕಿ.ಮೀ ಎಳೆದೊಯ್ದ ‘ಕಂಝಾವಾಲಾ ಅಪಘಾತ’ ಪ್ರಕರಣದ ಏಳು ಆರೋಪಿಗಳ ವಿರುದ್ಧ ದೆಹಲಿ ಪೊಲೀಸರು ಶನಿವಾರ 800 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.</p>.<p>ಸುಮಾರು 117 ಸಾಕ್ಷಿಗಳ ವಿಚಾರಣೆ ಆಧಾರದಲ್ಲಿ ಈ ದೋಷಾರೋಪ ಪಟ್ಟಿ ಸಿದ್ಧಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಆರೋಪಿಗಳಾದ ಅಮಿತ್ ಖನ್ನಾ, ಕೃಷ್ಣನ್, ಮಿಥುನ್ ಮತ್ತು ಮನೋಜ್ ಮಿತ್ತಲ್ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ. ಉಳಿದಂತೆ ಎಲ್ಲಾ ಆರೋಪಿಗಳ ವಿರುದ್ಧ ಕ್ರಿಮಿನಲ್ ಪಿತೂರಿ, ಸಾಕ್ಷ್ಯ ನಾಶ, ತಪ್ಪು ಮಾಹಿತಿ ನೀಡಿಕೆ ಮತ್ತಿತರ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.</p>.<p>ಪ್ರಕರಣ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಜ.2ರಂದು ಬಂಧಿಸಲಾಗಿದೆ. ಇವರ ನ್ಯಾಯಾಂಗ ಬಂಧನ ಅವಧಿಯನ್ನು ಏ.13ರವರೆಗೆ ಕೋರ್ಟ್ ವಿಸ್ತರಿಸಿದೆ. ಉಳಿದ ಇಬ್ಬರು ಜಾಮೀನಿನ ಮೇಲೆ ಹೊರಗಿದ್ದಾರೆ.</p>.<p>ದೆಹಲಿ ಹೊರಭಾಗದ ಸುಲ್ತಾನ್ಪುರಿಯಲ್ಲಿ ಜನವರಿ 1ರಂದು ಸ್ಕೂಟಿಗೆ ಕಾರು ಡಿಕ್ಕಿ ಹೊಡೆದಿದ್ದರಿಂದಾಗಿ 20 ವರ್ಷದ ಅಂಜಲಿ ಸಿಂಗ್ ಮೃತಪಟ್ಟಿದ್ದರು. ಕಾರಿನಡಿ ಸಿಲುಕಿದ್ದ ಆಕೆಯ ಮೃತದೇಹವನ್ನು ಸುಮಾರು 12 ಕಿ.ಮೀ.ವರೆಗೂ ಎಳೆದೊಯ್ಯಲಾಗಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title">ನವದೆಹಲಿ (ಪಿಟಿಐ): ಕಾರಿನಡಿ ಸಿಲುಕಿದ್ದ ಯುವತಿಯನ್ನು 12 ಕಿ.ಮೀ ಎಳೆದೊಯ್ದ ‘ಕಂಝಾವಾಲಾ ಅಪಘಾತ’ ಪ್ರಕರಣದ ಏಳು ಆರೋಪಿಗಳ ವಿರುದ್ಧ ದೆಹಲಿ ಪೊಲೀಸರು ಶನಿವಾರ 800 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.</p>.<p>ಸುಮಾರು 117 ಸಾಕ್ಷಿಗಳ ವಿಚಾರಣೆ ಆಧಾರದಲ್ಲಿ ಈ ದೋಷಾರೋಪ ಪಟ್ಟಿ ಸಿದ್ಧಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಆರೋಪಿಗಳಾದ ಅಮಿತ್ ಖನ್ನಾ, ಕೃಷ್ಣನ್, ಮಿಥುನ್ ಮತ್ತು ಮನೋಜ್ ಮಿತ್ತಲ್ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ. ಉಳಿದಂತೆ ಎಲ್ಲಾ ಆರೋಪಿಗಳ ವಿರುದ್ಧ ಕ್ರಿಮಿನಲ್ ಪಿತೂರಿ, ಸಾಕ್ಷ್ಯ ನಾಶ, ತಪ್ಪು ಮಾಹಿತಿ ನೀಡಿಕೆ ಮತ್ತಿತರ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.</p>.<p>ಪ್ರಕರಣ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಜ.2ರಂದು ಬಂಧಿಸಲಾಗಿದೆ. ಇವರ ನ್ಯಾಯಾಂಗ ಬಂಧನ ಅವಧಿಯನ್ನು ಏ.13ರವರೆಗೆ ಕೋರ್ಟ್ ವಿಸ್ತರಿಸಿದೆ. ಉಳಿದ ಇಬ್ಬರು ಜಾಮೀನಿನ ಮೇಲೆ ಹೊರಗಿದ್ದಾರೆ.</p>.<p>ದೆಹಲಿ ಹೊರಭಾಗದ ಸುಲ್ತಾನ್ಪುರಿಯಲ್ಲಿ ಜನವರಿ 1ರಂದು ಸ್ಕೂಟಿಗೆ ಕಾರು ಡಿಕ್ಕಿ ಹೊಡೆದಿದ್ದರಿಂದಾಗಿ 20 ವರ್ಷದ ಅಂಜಲಿ ಸಿಂಗ್ ಮೃತಪಟ್ಟಿದ್ದರು. ಕಾರಿನಡಿ ಸಿಲುಕಿದ್ದ ಆಕೆಯ ಮೃತದೇಹವನ್ನು ಸುಮಾರು 12 ಕಿ.ಮೀ.ವರೆಗೂ ಎಳೆದೊಯ್ಯಲಾಗಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>