<p><strong>ನವದೆಹಲಿ</strong>: ಮಧ್ಯ ಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ 'ಜ್ವಾಲಾ' ಹೆಸರಿನ ಚೀತಾ ಸೋಮವಾರ ಐದು ಮರಿಗಳಿಗೆ ಜನ್ಮ ನೀಡಿದೆ. ಈ ಮರಿಗಳ ಜನನದಿಂದ ದೇಶದ ಒಟ್ಟು ಚೀತಾಗಳ ಸಂಖ್ಯೆ 53ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಹೇಳಿದ್ದಾರೆ.</p><p>ಕೆಲವೇ ದಿನಗಳ ಹಿಂದಷ್ಟೇ ಇದೇ ಉದ್ಯಾನವನದಲ್ಲಿ 'ಗಾಮಿನಿ' ಎಂಬ ಚೀತಾ ನಾಲ್ಕು ಮರಿಗಳಿಗೆ ಜನ್ಮ ನೀಡಿತ್ತು. </p><p>‘ಪ್ರಾಜೆಕ್ಟ್ ಚೀತಾ’ ಪಾಲಿಗೆ ಇದು ಹೆಮ್ಮೆಯ ಕ್ಷಣ. ನಮೀಬಿಯಾದಿಂದ ಭಾರತಕ್ಕೆ ತಂದಿದ್ದ ಜ್ವಾಲಾ ಹೆಸರಿನ ಚೀತಾ ಐದು ಮರಿಗಳಿಗೆ ಜನ್ಮ ನೀಡಿದೆ. ಈ ಮೂಲಕ ಭಾರತದಲ್ಲಿ ಜನಿಸಿದ ಚೀತಾ ಮರಿಗಳ ಸಂಖ್ಯೆ 33ಕ್ಕೆ ಏರಿಕೆಯಾಗಿದೆ’ ಎಂದು ಅವರು ಎಕ್ಸ್ನಲ್ಲಿ ಸಂತಸ ಹಂಚಿಕೊಂಡಿದ್ದಾರೆ.</p>.<p>‘ಈ ಮರಿಗಳ ಆಗಮನದೊಂದಿಗೆ ಭಾರತದಲ್ಲಿನ ಒಟ್ಟು ಚೀತಾಗಳ ಸಂಖ್ಯೆ ಈಗ 53ಕ್ಕೆ ತಲುಪಿದೆ. ಇದು ವನ್ಯಜೀವಿ ಸಂರಕ್ಷಣೆಯ ದೃಷ್ಟಿಯಿಂದ ಐತಿಹಾಸಿಕ ಕ್ಷಣವಾಗಿದೆ’ ಎಂದು ಅವರು ಹೇಳಿದ್ದಾರೆ.</p><p>ಇದೇ ವೇಳೆ, ಪಶುವೈದ್ಯರು, ಕ್ಷೇತ್ರ ಸಿಬ್ಬಂದಿ ಸೇರಿದಂತೆ ಯೋಜನೆಯಲ್ಲಿ ಭಾಗಿಯಾಗಿರುವ ಎಲ್ಲರನ್ನು ಸಚಿವರು ಶ್ಲಾಘಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಮಧ್ಯ ಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ 'ಜ್ವಾಲಾ' ಹೆಸರಿನ ಚೀತಾ ಸೋಮವಾರ ಐದು ಮರಿಗಳಿಗೆ ಜನ್ಮ ನೀಡಿದೆ. ಈ ಮರಿಗಳ ಜನನದಿಂದ ದೇಶದ ಒಟ್ಟು ಚೀತಾಗಳ ಸಂಖ್ಯೆ 53ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಹೇಳಿದ್ದಾರೆ.</p><p>ಕೆಲವೇ ದಿನಗಳ ಹಿಂದಷ್ಟೇ ಇದೇ ಉದ್ಯಾನವನದಲ್ಲಿ 'ಗಾಮಿನಿ' ಎಂಬ ಚೀತಾ ನಾಲ್ಕು ಮರಿಗಳಿಗೆ ಜನ್ಮ ನೀಡಿತ್ತು. </p><p>‘ಪ್ರಾಜೆಕ್ಟ್ ಚೀತಾ’ ಪಾಲಿಗೆ ಇದು ಹೆಮ್ಮೆಯ ಕ್ಷಣ. ನಮೀಬಿಯಾದಿಂದ ಭಾರತಕ್ಕೆ ತಂದಿದ್ದ ಜ್ವಾಲಾ ಹೆಸರಿನ ಚೀತಾ ಐದು ಮರಿಗಳಿಗೆ ಜನ್ಮ ನೀಡಿದೆ. ಈ ಮೂಲಕ ಭಾರತದಲ್ಲಿ ಜನಿಸಿದ ಚೀತಾ ಮರಿಗಳ ಸಂಖ್ಯೆ 33ಕ್ಕೆ ಏರಿಕೆಯಾಗಿದೆ’ ಎಂದು ಅವರು ಎಕ್ಸ್ನಲ್ಲಿ ಸಂತಸ ಹಂಚಿಕೊಂಡಿದ್ದಾರೆ.</p>.<p>‘ಈ ಮರಿಗಳ ಆಗಮನದೊಂದಿಗೆ ಭಾರತದಲ್ಲಿನ ಒಟ್ಟು ಚೀತಾಗಳ ಸಂಖ್ಯೆ ಈಗ 53ಕ್ಕೆ ತಲುಪಿದೆ. ಇದು ವನ್ಯಜೀವಿ ಸಂರಕ್ಷಣೆಯ ದೃಷ್ಟಿಯಿಂದ ಐತಿಹಾಸಿಕ ಕ್ಷಣವಾಗಿದೆ’ ಎಂದು ಅವರು ಹೇಳಿದ್ದಾರೆ.</p><p>ಇದೇ ವೇಳೆ, ಪಶುವೈದ್ಯರು, ಕ್ಷೇತ್ರ ಸಿಬ್ಬಂದಿ ಸೇರಿದಂತೆ ಯೋಜನೆಯಲ್ಲಿ ಭಾಗಿಯಾಗಿರುವ ಎಲ್ಲರನ್ನು ಸಚಿವರು ಶ್ಲಾಘಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>