<p><strong>ನವದೆಹಲಿ:</strong> ವಿಶ್ವದ ಅತ್ಯಂತ ಎತ್ತರದ ಚೆನಾಬ್ ಸೇತುವೆ ಎಂಜಿನಿಯರಿಂಗ್ ವಿಸ್ಮಯಕ್ಕೆ ನಿದರ್ಶನವಾಗಿದೆ. ಕಾಶ್ಮೀರಕ್ಕೆ ದೇಶದ ಇತರ ಭಾಗದೊಂದಿಗೆ ರೈಲು ಸಂಪರ್ಕ ಸಾಧ್ಯವಾಗಿಸುವ ಈ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಉದ್ಘಾಟಿಸುವರು.</p>.<p>ದೇಶದ ಗಮನವನ್ನು ಸೆಳೆದಿರುವ ಈ ಸೇತುವೆ ನಿರ್ಮಾಣದಲ್ಲಿ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ(ಐಐಎಸ್ಸಿ) ಪ್ರಾಧ್ಯಾಪಕಿ ಜಿ.ಮಾಧವಿ ಲತಾ ಅವರು ಮಹತ್ವದ ಪಾತ್ರ ವಹಿಸಿದ್ದಾರೆ ಎಂಬುದು ಅಷ್ಟೇ ಗಮನಾರ್ಹ.</p>.<p>ಕಳೆದ 17 ವರ್ಷಗಳಿಂದ ಈ ಯೋಜನೆಗೆ ಅವರು ಮಾರ್ಗದರ್ಶನ ನೀಡುತ್ತಿದ್ದಾರೆ. ₹1,486 ಕೋಟಿ ವೆಚ್ಚದ ಈ ಸೇತುವೆ ನೂರು ವರ್ಷಗಳಿಗೂ ಹೆಚ್ಚು ಕಾಲ ಸದೃಢವಾಗಿ ನಿಲ್ಲುವುದನ್ನು ಖಾತ್ರಿಪಡಿಸುವ ನಿರ್ಮಾಣಕ್ಕೆ ಮಾರ್ಗದರ್ಶನ ನೀಡಿದ್ದಾರೆ.</p>.<p>ಐಐಎಸ್ಸಿಯ ಸಿವಿಲ್ ಎಂಜಿನಿಯರಿಂಗ್ ವಿಭಾಗದಲ್ಲಿ ಪ್ರಾಧ್ಯಾಪಕಿಯಾಗಿರುವ ಮಾಧವಿ ಲತಾ ಅವರು, ‘ರಾಕ್ ಎಂಜಿನಿಯರಿಂಗ್’ ತಜ್ಞೆ.</p>.<p>ಉತ್ತರ ರೈಲ್ವೆ ಹಾಗೂ ಸೇತುವೆ ನಿರ್ಮಾಣದ ಗುತ್ತಿಗೆ ಪಡೆದ ಸಂಸ್ಥೆ ಅಫ್ಕಾನ್ಸ್, ಮಾಧವಿ ಲತಾ ಅವರನ್ನು ತಮ್ಮ ಯೋಜನೆಗೆ ಮಾರ್ಗದರ್ಶನ ನೀಡುವುದಕ್ಕೆ ನೇಮಕ ಮಾಡಿಕೊಂಡಿವೆ.</p>.<p>‘ಕಣಿವೆಯಲ್ಲಿ ಈ ಸೇತುವೆ ನಿರ್ಮಾಣ ಸಾಕಷ್ಟು ಸವಾಲಿನಿಂದ ಕೂಡಿತ್ತು. ಇಳಿಜಾರಿನಲ್ಲಿ ನಿರ್ಮಾಣ ಹಾಗೂ ಭದ್ರ ತಳಪಾಯ ಹಾಕುವ ಕಾರ್ಯಕ್ಕೆ ಐಐಎಸ್ಸಿ ಕನ್ಸಲ್ಟಂಟ್ ಆಗಿತ್ತು. ವಿದೇಶಿ ಕಂಪನಿಗಳು ಉಕ್ಕಿನ ಕಮಾನು ನಿರ್ಮಾಣ ಮಾಡಿವೆ’ ಎಂದು ಮಾಧವಿ ಲತಾ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ನಿಗದಿತ ವಿನ್ಯಾಸದಂತೆ ಸೇತುವೆ ನಿರ್ಮಾಣ ಕಷ್ಟವಾಗಿತ್ತು. ಹೀಗಾಗಿ, ನಿರ್ಮಾಣ ಕಾರ್ಯ ಆರಂಭಗೊಂಡ ಮೇಲೆ, ಅಗತ್ಯಕ್ಕೆ ತಕ್ಕಂತೆ ವಿನ್ಯಾಸದಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ’ ಎಂದೂ ಹೇಳಿದರು.</p>.<p>ಉಧಂಪುರ–ಶ್ರೀನಗರ–ಬಾರಾಮುಲ್ಲಾ ರೈಲು ಮಾರ್ಗದಲ್ಲಿರುವ ಈ ಸೇತುವೆ ಉದ್ದ 1,315 ಮೀಟರ್. ಇದು ಈ ಮಾರ್ಗದ ಪ್ರಮುಖ ಭಾಗವೂ ಆಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ವಿಶ್ವದ ಅತ್ಯಂತ ಎತ್ತರದ ಚೆನಾಬ್ ಸೇತುವೆ ಎಂಜಿನಿಯರಿಂಗ್ ವಿಸ್ಮಯಕ್ಕೆ ನಿದರ್ಶನವಾಗಿದೆ. ಕಾಶ್ಮೀರಕ್ಕೆ ದೇಶದ ಇತರ ಭಾಗದೊಂದಿಗೆ ರೈಲು ಸಂಪರ್ಕ ಸಾಧ್ಯವಾಗಿಸುವ ಈ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಉದ್ಘಾಟಿಸುವರು.</p>.<p>ದೇಶದ ಗಮನವನ್ನು ಸೆಳೆದಿರುವ ಈ ಸೇತುವೆ ನಿರ್ಮಾಣದಲ್ಲಿ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ(ಐಐಎಸ್ಸಿ) ಪ್ರಾಧ್ಯಾಪಕಿ ಜಿ.ಮಾಧವಿ ಲತಾ ಅವರು ಮಹತ್ವದ ಪಾತ್ರ ವಹಿಸಿದ್ದಾರೆ ಎಂಬುದು ಅಷ್ಟೇ ಗಮನಾರ್ಹ.</p>.<p>ಕಳೆದ 17 ವರ್ಷಗಳಿಂದ ಈ ಯೋಜನೆಗೆ ಅವರು ಮಾರ್ಗದರ್ಶನ ನೀಡುತ್ತಿದ್ದಾರೆ. ₹1,486 ಕೋಟಿ ವೆಚ್ಚದ ಈ ಸೇತುವೆ ನೂರು ವರ್ಷಗಳಿಗೂ ಹೆಚ್ಚು ಕಾಲ ಸದೃಢವಾಗಿ ನಿಲ್ಲುವುದನ್ನು ಖಾತ್ರಿಪಡಿಸುವ ನಿರ್ಮಾಣಕ್ಕೆ ಮಾರ್ಗದರ್ಶನ ನೀಡಿದ್ದಾರೆ.</p>.<p>ಐಐಎಸ್ಸಿಯ ಸಿವಿಲ್ ಎಂಜಿನಿಯರಿಂಗ್ ವಿಭಾಗದಲ್ಲಿ ಪ್ರಾಧ್ಯಾಪಕಿಯಾಗಿರುವ ಮಾಧವಿ ಲತಾ ಅವರು, ‘ರಾಕ್ ಎಂಜಿನಿಯರಿಂಗ್’ ತಜ್ಞೆ.</p>.<p>ಉತ್ತರ ರೈಲ್ವೆ ಹಾಗೂ ಸೇತುವೆ ನಿರ್ಮಾಣದ ಗುತ್ತಿಗೆ ಪಡೆದ ಸಂಸ್ಥೆ ಅಫ್ಕಾನ್ಸ್, ಮಾಧವಿ ಲತಾ ಅವರನ್ನು ತಮ್ಮ ಯೋಜನೆಗೆ ಮಾರ್ಗದರ್ಶನ ನೀಡುವುದಕ್ಕೆ ನೇಮಕ ಮಾಡಿಕೊಂಡಿವೆ.</p>.<p>‘ಕಣಿವೆಯಲ್ಲಿ ಈ ಸೇತುವೆ ನಿರ್ಮಾಣ ಸಾಕಷ್ಟು ಸವಾಲಿನಿಂದ ಕೂಡಿತ್ತು. ಇಳಿಜಾರಿನಲ್ಲಿ ನಿರ್ಮಾಣ ಹಾಗೂ ಭದ್ರ ತಳಪಾಯ ಹಾಕುವ ಕಾರ್ಯಕ್ಕೆ ಐಐಎಸ್ಸಿ ಕನ್ಸಲ್ಟಂಟ್ ಆಗಿತ್ತು. ವಿದೇಶಿ ಕಂಪನಿಗಳು ಉಕ್ಕಿನ ಕಮಾನು ನಿರ್ಮಾಣ ಮಾಡಿವೆ’ ಎಂದು ಮಾಧವಿ ಲತಾ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ನಿಗದಿತ ವಿನ್ಯಾಸದಂತೆ ಸೇತುವೆ ನಿರ್ಮಾಣ ಕಷ್ಟವಾಗಿತ್ತು. ಹೀಗಾಗಿ, ನಿರ್ಮಾಣ ಕಾರ್ಯ ಆರಂಭಗೊಂಡ ಮೇಲೆ, ಅಗತ್ಯಕ್ಕೆ ತಕ್ಕಂತೆ ವಿನ್ಯಾಸದಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ’ ಎಂದೂ ಹೇಳಿದರು.</p>.<p>ಉಧಂಪುರ–ಶ್ರೀನಗರ–ಬಾರಾಮುಲ್ಲಾ ರೈಲು ಮಾರ್ಗದಲ್ಲಿರುವ ಈ ಸೇತುವೆ ಉದ್ದ 1,315 ಮೀಟರ್. ಇದು ಈ ಮಾರ್ಗದ ಪ್ರಮುಖ ಭಾಗವೂ ಆಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>