<p><strong>ತಿರುವನಂತಪುರಂ: </strong>ಕೇರಳದ ಮುಂದಿನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರ ಹೆಸರನ್ನು ಘೋಷಿಸಿದ ಬೆನ್ನಲ್ಲೇ ಹಿರಿಯ ಕಾಂಗ್ರೆಸ್ ನಾಯಕ ರಮೇಶ್ ಚೆನ್ನಿತ್ತಲ ಅವರು ತಮ್ಮ ನಿವಾಸದಿಂದ ಹೊರನಡೆದಿದ್ದಾರೆ.</p><p>ಮುಖ್ಯಮಂತ್ರಿ ಸ್ಥಾನದ ರೇಸ್ನಲ್ಲಿ ವಿ.ಡಿ. ಸತೀಶನ್, ಕೆ.ವೇಣುಗೋಪಾಲ್ ಜೊತೆಗೆ ಚೆನ್ನಿತ್ತಲ ಅವರ ಹೆಸರು ಕೇಳಿಬಂದಿತ್ತು.</p><p>ಕೇರಳದ ಎಐಸಿಸಿ ಉಸ್ತುವಾರಿ ದೀಪಾ ದಾಸ್ ಮುನ್ಷಿ ಅವರು ಮುಖ್ಯಮಂತ್ರಿ ಹೆಸರು ಪ್ರಕಟಿಸಿದ ಬೆನ್ನಲ್ಲೇ ಚೆನ್ನಿತ್ತಲ ಅವರ ಅಭಿಪ್ರಾಯ ಕೇಳಲು ಸುದ್ದಿಗಾರರು ಇಲ್ಲಿನ ವಳುತಕಾಡ್ನಲ್ಲಿರುವ ಅವರ ನಿವಾಸಕ್ಕೆ ಧಾವಿಸಿದರು. ಆದರೆ, ಪ್ರತಿಕ್ರಿಯೆ ನೀಡಲು ಅವರು ನಿವಾಸದಲ್ಲಿ ಇರಲಿಲ್ಲ.</p><p>‘ಚೆನ್ನಿತ್ತಲ ಅವರು ಹೊರಗೆ ಹೋಗಿದ್ದು, ಮನೆಯಲ್ಲಿ ಇಲ್ಲ’ ಎಂದು ಕಾಂಗ್ರೆಸ್ ನಾಯಕ ಜ್ಯೋತಿ ಕುಮಾರ್ ಚಮಕ್ಕಲ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ. ಆದರೆ, ಚೆನ್ನಿತ್ತಲ ಅವರು ಎಲ್ಲಿಗೆ ಹೋಗಿದ್ದಾರೆ ಎಂಬ ಪ್ರಶ್ನೆಗೆ ಅವರು ಪ್ರತಿಕ್ರಿಯೆ ನೀಡಿಲ್ಲ.</p><p>ಎಐಸಿಸಿ ನಿರ್ಧಾರಕ್ಕೆ ಚೆನ್ನಿತ್ತಲ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಮತ್ತು ಗುರುವಾರ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ಪಿ) ಸಭೆಗೆ ಅವರು ಗೈರಾಗುವ ಸಾಧ್ಯತೆಯಿದೆ ಎಂಬ ವರದಿಗಳು ಕೇಳಿಬಂದಿದ್ದವು.</p><p>ಆದರೆ, ಈ ವರದಿಗಳನ್ನು ಚೆನ್ನಿತ್ತಲ ಅವರ ಆಪ್ತರು ನಿರಾಕರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರಂ: </strong>ಕೇರಳದ ಮುಂದಿನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರ ಹೆಸರನ್ನು ಘೋಷಿಸಿದ ಬೆನ್ನಲ್ಲೇ ಹಿರಿಯ ಕಾಂಗ್ರೆಸ್ ನಾಯಕ ರಮೇಶ್ ಚೆನ್ನಿತ್ತಲ ಅವರು ತಮ್ಮ ನಿವಾಸದಿಂದ ಹೊರನಡೆದಿದ್ದಾರೆ.</p><p>ಮುಖ್ಯಮಂತ್ರಿ ಸ್ಥಾನದ ರೇಸ್ನಲ್ಲಿ ವಿ.ಡಿ. ಸತೀಶನ್, ಕೆ.ವೇಣುಗೋಪಾಲ್ ಜೊತೆಗೆ ಚೆನ್ನಿತ್ತಲ ಅವರ ಹೆಸರು ಕೇಳಿಬಂದಿತ್ತು.</p><p>ಕೇರಳದ ಎಐಸಿಸಿ ಉಸ್ತುವಾರಿ ದೀಪಾ ದಾಸ್ ಮುನ್ಷಿ ಅವರು ಮುಖ್ಯಮಂತ್ರಿ ಹೆಸರು ಪ್ರಕಟಿಸಿದ ಬೆನ್ನಲ್ಲೇ ಚೆನ್ನಿತ್ತಲ ಅವರ ಅಭಿಪ್ರಾಯ ಕೇಳಲು ಸುದ್ದಿಗಾರರು ಇಲ್ಲಿನ ವಳುತಕಾಡ್ನಲ್ಲಿರುವ ಅವರ ನಿವಾಸಕ್ಕೆ ಧಾವಿಸಿದರು. ಆದರೆ, ಪ್ರತಿಕ್ರಿಯೆ ನೀಡಲು ಅವರು ನಿವಾಸದಲ್ಲಿ ಇರಲಿಲ್ಲ.</p><p>‘ಚೆನ್ನಿತ್ತಲ ಅವರು ಹೊರಗೆ ಹೋಗಿದ್ದು, ಮನೆಯಲ್ಲಿ ಇಲ್ಲ’ ಎಂದು ಕಾಂಗ್ರೆಸ್ ನಾಯಕ ಜ್ಯೋತಿ ಕುಮಾರ್ ಚಮಕ್ಕಲ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ. ಆದರೆ, ಚೆನ್ನಿತ್ತಲ ಅವರು ಎಲ್ಲಿಗೆ ಹೋಗಿದ್ದಾರೆ ಎಂಬ ಪ್ರಶ್ನೆಗೆ ಅವರು ಪ್ರತಿಕ್ರಿಯೆ ನೀಡಿಲ್ಲ.</p><p>ಎಐಸಿಸಿ ನಿರ್ಧಾರಕ್ಕೆ ಚೆನ್ನಿತ್ತಲ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಮತ್ತು ಗುರುವಾರ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ಪಿ) ಸಭೆಗೆ ಅವರು ಗೈರಾಗುವ ಸಾಧ್ಯತೆಯಿದೆ ಎಂಬ ವರದಿಗಳು ಕೇಳಿಬಂದಿದ್ದವು.</p><p>ಆದರೆ, ಈ ವರದಿಗಳನ್ನು ಚೆನ್ನಿತ್ತಲ ಅವರ ಆಪ್ತರು ನಿರಾಕರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>