<p><strong>ಮುಂಬೈ: </strong>ಛಗನ್ ಭುಜಬಲ್ ಅವರನ್ನು ಮಹಾರಾಷ್ಟ್ರ ಸಚಿವ ಸಂಪುಟದಿಂದ ಹೊರಗಿಟ್ಟಿರುವುದು ಎನ್ಸಿಪಿಯ ಆಂತರಿಕ ವಿಚಾರ ಎಂದು ಮಹಾರಾಷ್ಟ್ರ ಸಚಿವ ಹಾಗೂ ಶಿವಸೇನಾ ನಾಯಕ ಭರತ್ ಗೊಗವಾಲೆ ಭಾನುವಾರ ಹೇಳಿದ್ದಾರೆ.</p><p>ಬಿಜೆಪಿ ಹಾಗೂ ಶಿವಸೇನಾ ಪಕ್ಷಗಳಂತೆಯೇ, ಸಚಿವರನ್ನು ಆಯ್ಕೆ ಮಾಡುವುದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ವಿವೇಚನೆಗೆ ಬಿಟ್ಟದ್ದು ಎಂದು ಅಭಿಪ್ರಾಯಪಟ್ಟಿದ್ದಾರೆ.</p><p>ನಗರದಲ್ಲಿ ಮಾತನಾಡಿರುವ ಭರತ್, 'ಈ ವಿಚಾರದ ಬಗ್ಗೆ ಬೇರೆಯವರು ಹೇಳಿಕೆ ನೀಡಲಾಗದು. ಭುಜಬಲ್ ಅವರನ್ನು ಸಚಿವ ಸಂಪುಟದಿಂದ ಹೊರಗಿಟ್ಟಿರುವುದು ಎನ್ಸಿಪಿಯ ಆಂತರಿಕ ವಿಚಾರ. ಅದು ಆಡಳಿತಾರೂಢ ಮಹಾಯುತಿ ಮೈತ್ರಿಯ ಸಮಸ್ಯೆಯಲ್ಲ' ಎಂದಿದ್ದಾರೆ.</p><p>ತಮಗೆ ಸಚಿವ ಸ್ಥಾನ ನೀಡದಿರುವುದಕ್ಕೆ ಭುಜಬಲ್ ಅವರು ಪಕ್ಷದ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ವಿರುದ್ಧ ಕಿಡಿಕಾರಿದ್ದರು. ಹಾಗೆಯೇ, ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರಿಗೆ ತಮ್ಮನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಒಲವಿದೆ ಎಂದು ಹೇಳಿದ್ದಾರೆ.</p>. ಮಹಾರಾಷ್ಟ್ರ | ದೊರೆಯದ ಸಚಿವ ಸ್ಥಾನ: ಛಗನ್ ಭುಜಬಲ್ ಅಸಮಾಧಾನ.ಛಗನ್ ಭುಜ್ಬಲ್ ಎನ್ಸಿಪಿ ತೊರೆಯುವುದಿಲ್ಲ: ವದಂತಿ ಅಲ್ಲಗಳೆದ ಎನ್ಸಿಪಿ.<p>ಡಿಸೆಂಬರ್ 15ರಂದು ಒಟ್ಟು 39 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಪೈಕಿ 33 ಮಂದಿ ಕ್ಯಾಬಿನೆಟ್ ದರ್ಜೆ ಸಚಿವರು.</p><p>ಭುಜಬಲ್ ಅವರು ಏಕನಾಥ ಶಿಂದೆ ನೇತೃತ್ವದ ಹಿಂದಿನ ಸರ್ಕಾರದ ಅವಧಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾಗಿದ್ದರು. ಈ ವರ್ಷ ನಡೆದ ವಿಧಾನಸಭೆ ಚುನಾವಣೆಗೂ ಮುನ್ನ ಅವರು ಎನ್ಸಿಪಿ ತೊರೆಯಲಿದ್ದಾರೆ ಎಂಬ ವದಂತಿ ಹರಿದಾಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ: </strong>ಛಗನ್ ಭುಜಬಲ್ ಅವರನ್ನು ಮಹಾರಾಷ್ಟ್ರ ಸಚಿವ ಸಂಪುಟದಿಂದ ಹೊರಗಿಟ್ಟಿರುವುದು ಎನ್ಸಿಪಿಯ ಆಂತರಿಕ ವಿಚಾರ ಎಂದು ಮಹಾರಾಷ್ಟ್ರ ಸಚಿವ ಹಾಗೂ ಶಿವಸೇನಾ ನಾಯಕ ಭರತ್ ಗೊಗವಾಲೆ ಭಾನುವಾರ ಹೇಳಿದ್ದಾರೆ.</p><p>ಬಿಜೆಪಿ ಹಾಗೂ ಶಿವಸೇನಾ ಪಕ್ಷಗಳಂತೆಯೇ, ಸಚಿವರನ್ನು ಆಯ್ಕೆ ಮಾಡುವುದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ವಿವೇಚನೆಗೆ ಬಿಟ್ಟದ್ದು ಎಂದು ಅಭಿಪ್ರಾಯಪಟ್ಟಿದ್ದಾರೆ.</p><p>ನಗರದಲ್ಲಿ ಮಾತನಾಡಿರುವ ಭರತ್, 'ಈ ವಿಚಾರದ ಬಗ್ಗೆ ಬೇರೆಯವರು ಹೇಳಿಕೆ ನೀಡಲಾಗದು. ಭುಜಬಲ್ ಅವರನ್ನು ಸಚಿವ ಸಂಪುಟದಿಂದ ಹೊರಗಿಟ್ಟಿರುವುದು ಎನ್ಸಿಪಿಯ ಆಂತರಿಕ ವಿಚಾರ. ಅದು ಆಡಳಿತಾರೂಢ ಮಹಾಯುತಿ ಮೈತ್ರಿಯ ಸಮಸ್ಯೆಯಲ್ಲ' ಎಂದಿದ್ದಾರೆ.</p><p>ತಮಗೆ ಸಚಿವ ಸ್ಥಾನ ನೀಡದಿರುವುದಕ್ಕೆ ಭುಜಬಲ್ ಅವರು ಪಕ್ಷದ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ವಿರುದ್ಧ ಕಿಡಿಕಾರಿದ್ದರು. ಹಾಗೆಯೇ, ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರಿಗೆ ತಮ್ಮನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಒಲವಿದೆ ಎಂದು ಹೇಳಿದ್ದಾರೆ.</p>. ಮಹಾರಾಷ್ಟ್ರ | ದೊರೆಯದ ಸಚಿವ ಸ್ಥಾನ: ಛಗನ್ ಭುಜಬಲ್ ಅಸಮಾಧಾನ.ಛಗನ್ ಭುಜ್ಬಲ್ ಎನ್ಸಿಪಿ ತೊರೆಯುವುದಿಲ್ಲ: ವದಂತಿ ಅಲ್ಲಗಳೆದ ಎನ್ಸಿಪಿ.<p>ಡಿಸೆಂಬರ್ 15ರಂದು ಒಟ್ಟು 39 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಪೈಕಿ 33 ಮಂದಿ ಕ್ಯಾಬಿನೆಟ್ ದರ್ಜೆ ಸಚಿವರು.</p><p>ಭುಜಬಲ್ ಅವರು ಏಕನಾಥ ಶಿಂದೆ ನೇತೃತ್ವದ ಹಿಂದಿನ ಸರ್ಕಾರದ ಅವಧಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾಗಿದ್ದರು. ಈ ವರ್ಷ ನಡೆದ ವಿಧಾನಸಭೆ ಚುನಾವಣೆಗೂ ಮುನ್ನ ಅವರು ಎನ್ಸಿಪಿ ತೊರೆಯಲಿದ್ದಾರೆ ಎಂಬ ವದಂತಿ ಹರಿದಾಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>