<p><strong>ಮುಂಬೈ</strong>: ಮಹಾರಾಷ್ಟ್ರದ ಸಚಿವ ಛಗನ್ ಭುಜಬಲ್ ಅವರು ಸೋಮವಾರ ಎನ್ಸಿಪಿ (ಎಸ್ಪಿ) ಮುಖ್ಯಸ್ಥ ಶರದ್ ಪವಾರ್ ಅವರನ್ನು ಭೇಟಿಯಾಗಿ ಮರಾಠ ಮೀಸಲಾತಿ ಹೋರಾಟ ಹಾಗೂ ಅದಕ್ಕೆ ಒಬಿಸಿ ನಾಯಕರು ವಿರೋಧ ವ್ಯಕ್ತಪಡಿಸುತ್ತಿರುವುರಿಂದ ಉಂಟಾಗಿರುವ ವಿವಾದವನ್ನು ಬಗೆಹರಿಸಲು ಮಧ್ಯ ಪ್ರವೇಶಿಸುವಂತೆ ಕೋರಿದರು. </p>.<p>ಪವಾರ್ ಅವರ ಮುಂಬೈನ ಸಿಲ್ವರ್ ಓಕ್ ನಿವಾಸದಲ್ಲಿ ಇಬ್ಬರೂ ಸುಮಾರು ಒಂದೂವರೆ ಗಂಟೆ ಚರ್ಚಿಸಿದರು. ಒಬಿಸಿ ನಾಯಕರಾಗಿರುವ ಭುಜಬಲ್ ಅವರು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್ಸಿಪಿ ಬಣದಲ್ಲಿದ್ದಾರೆ. ಎದುರಾಳಿ ಬಣದ ಮುಖ್ಯಸ್ಥರನ್ನು ಭೇಟಿಯಾಗಿರುವುದು ಹಲವು ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿತು.</p>.<p>ಲೋಕಸಭಾ ಚುನಾವಣೆ ವೇಳೆ ತಮ್ಮನ್ನು ಕಡೆಗಣಿಸಿರುವುದು ಮತ್ತು ರಾಜ್ಯಸಭೆಗೆ ಆಯ್ಕೆ ಮಾಡದೇ ಇರುವುದಕ್ಕೆ ಭುಜಬಲ್ ಮುನಿಸಿಕೊಂಡಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಆದರೆ ಶರದ್ ಪವಾರ್ ಭೇಟಿ ಬಗ್ಗೆ ಭುಜಬಲ್ ಅವರು ತಮ್ಮ ಪಕ್ಷದ ನಾಯಕರಿಗೆ ಮುಂಚಿತವಾಗಿ ಮಾಹಿತಿ ನೀಡಿದ್ದರು ಎಂಬುದು ತಿಳಿದುಬಂದಿದೆ. </p>.<p>ಭೇಟಿಗೆ ಸಂಬಂಧಿಸಿದಂತೆ ಎನ್ಸಿಪಿ ಕಾರ್ಯಾಧ್ಯಕ್ಷ ಪ್ರಫುಲ್ ಪಟೇಲ್ ಅವರೊಂದಿಗೂ ಮಾತನಾಡಿದ್ದಾರೆ. ಈ ಬೆಳವಣಿಗೆ ಬಗ್ಗೆ ಎನ್ಸಿಪಿ ಅಧ್ಯಕ್ಷ ಅಜಿತ್ ಪವಾರ್ ಮತ್ತು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸುನಿಲ್ ತಟ್ಕರೆ ಅವರಿಗೂ ಮಾಹಿತಿಯಿತ್ತು ಎಂದು ಮೂಲಗಳು ತಿಳಿಸಿವೆ. </p>.<p>ಶರದ್ ಪವಾರ್ ಅವರ ಭೇಟಿ ಕುರಿತು ಕೇಳಿದಾಗ ಭುಜಬಲ್, ‘ಒಬಿಸಿ ಸಮುದಾಯಕ್ಕೆ ಮೀಸಲಾತಿ ನೀಡುವ ನಿಲುವನ್ನು ಶರದ್ ಪವಾರ್ ತಳೆದಿದ್ದರು. ಈಗ ಮರಾಠ ಸಮುದಾಯ ಮತ್ತು ಒಬಿಸಿ ಸಮುದಾಯದ ಮಧ್ಯೆ ತಪ್ಪು ತಿಳಿವಳಿಕೆ ಮೂಡಿದೆ. ಈ ಸಮಸ್ಯೆ ಬಗೆಹರಿಸಲು ಪವಾರ್ ಅವರು ಮುಂದಾಳತ್ವ ವಹಿಸಬೇಕು’ ಎಂದು ಪ್ರತಿಕ್ರಿಯಿಸಿದ್ದಾರೆ.</p>.<p>ವಿವಾದ ಬಗೆಹರಿಸಲು ಮುಂದಿನ ದಿನಗಳಲ್ಲಿ ಯಾರನ್ನೆಲ್ಲಾ ಭೇಟಿಯಾಗುವಿರಿ ಎಂಬ ಪ್ರಶ್ನೆಗೆ, ‘ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಸೇರಿದಂತೆ ಯಾರನ್ನಾದರೂ ಭೇಟಿಯಾಗಲು ನಾನು ಸಿದ್ಧನಿದ್ದೇನೆ’ ಎಂದು ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಮಹಾರಾಷ್ಟ್ರದ ಸಚಿವ ಛಗನ್ ಭುಜಬಲ್ ಅವರು ಸೋಮವಾರ ಎನ್ಸಿಪಿ (ಎಸ್ಪಿ) ಮುಖ್ಯಸ್ಥ ಶರದ್ ಪವಾರ್ ಅವರನ್ನು ಭೇಟಿಯಾಗಿ ಮರಾಠ ಮೀಸಲಾತಿ ಹೋರಾಟ ಹಾಗೂ ಅದಕ್ಕೆ ಒಬಿಸಿ ನಾಯಕರು ವಿರೋಧ ವ್ಯಕ್ತಪಡಿಸುತ್ತಿರುವುರಿಂದ ಉಂಟಾಗಿರುವ ವಿವಾದವನ್ನು ಬಗೆಹರಿಸಲು ಮಧ್ಯ ಪ್ರವೇಶಿಸುವಂತೆ ಕೋರಿದರು. </p>.<p>ಪವಾರ್ ಅವರ ಮುಂಬೈನ ಸಿಲ್ವರ್ ಓಕ್ ನಿವಾಸದಲ್ಲಿ ಇಬ್ಬರೂ ಸುಮಾರು ಒಂದೂವರೆ ಗಂಟೆ ಚರ್ಚಿಸಿದರು. ಒಬಿಸಿ ನಾಯಕರಾಗಿರುವ ಭುಜಬಲ್ ಅವರು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್ಸಿಪಿ ಬಣದಲ್ಲಿದ್ದಾರೆ. ಎದುರಾಳಿ ಬಣದ ಮುಖ್ಯಸ್ಥರನ್ನು ಭೇಟಿಯಾಗಿರುವುದು ಹಲವು ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿತು.</p>.<p>ಲೋಕಸಭಾ ಚುನಾವಣೆ ವೇಳೆ ತಮ್ಮನ್ನು ಕಡೆಗಣಿಸಿರುವುದು ಮತ್ತು ರಾಜ್ಯಸಭೆಗೆ ಆಯ್ಕೆ ಮಾಡದೇ ಇರುವುದಕ್ಕೆ ಭುಜಬಲ್ ಮುನಿಸಿಕೊಂಡಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಆದರೆ ಶರದ್ ಪವಾರ್ ಭೇಟಿ ಬಗ್ಗೆ ಭುಜಬಲ್ ಅವರು ತಮ್ಮ ಪಕ್ಷದ ನಾಯಕರಿಗೆ ಮುಂಚಿತವಾಗಿ ಮಾಹಿತಿ ನೀಡಿದ್ದರು ಎಂಬುದು ತಿಳಿದುಬಂದಿದೆ. </p>.<p>ಭೇಟಿಗೆ ಸಂಬಂಧಿಸಿದಂತೆ ಎನ್ಸಿಪಿ ಕಾರ್ಯಾಧ್ಯಕ್ಷ ಪ್ರಫುಲ್ ಪಟೇಲ್ ಅವರೊಂದಿಗೂ ಮಾತನಾಡಿದ್ದಾರೆ. ಈ ಬೆಳವಣಿಗೆ ಬಗ್ಗೆ ಎನ್ಸಿಪಿ ಅಧ್ಯಕ್ಷ ಅಜಿತ್ ಪವಾರ್ ಮತ್ತು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸುನಿಲ್ ತಟ್ಕರೆ ಅವರಿಗೂ ಮಾಹಿತಿಯಿತ್ತು ಎಂದು ಮೂಲಗಳು ತಿಳಿಸಿವೆ. </p>.<p>ಶರದ್ ಪವಾರ್ ಅವರ ಭೇಟಿ ಕುರಿತು ಕೇಳಿದಾಗ ಭುಜಬಲ್, ‘ಒಬಿಸಿ ಸಮುದಾಯಕ್ಕೆ ಮೀಸಲಾತಿ ನೀಡುವ ನಿಲುವನ್ನು ಶರದ್ ಪವಾರ್ ತಳೆದಿದ್ದರು. ಈಗ ಮರಾಠ ಸಮುದಾಯ ಮತ್ತು ಒಬಿಸಿ ಸಮುದಾಯದ ಮಧ್ಯೆ ತಪ್ಪು ತಿಳಿವಳಿಕೆ ಮೂಡಿದೆ. ಈ ಸಮಸ್ಯೆ ಬಗೆಹರಿಸಲು ಪವಾರ್ ಅವರು ಮುಂದಾಳತ್ವ ವಹಿಸಬೇಕು’ ಎಂದು ಪ್ರತಿಕ್ರಿಯಿಸಿದ್ದಾರೆ.</p>.<p>ವಿವಾದ ಬಗೆಹರಿಸಲು ಮುಂದಿನ ದಿನಗಳಲ್ಲಿ ಯಾರನ್ನೆಲ್ಲಾ ಭೇಟಿಯಾಗುವಿರಿ ಎಂಬ ಪ್ರಶ್ನೆಗೆ, ‘ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಸೇರಿದಂತೆ ಯಾರನ್ನಾದರೂ ಭೇಟಿಯಾಗಲು ನಾನು ಸಿದ್ಧನಿದ್ದೇನೆ’ ಎಂದು ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>