ಮಹಸಮುಂಡ್ (ಛತ್ತೀಸಗಡ): ಜಿಲ್ಲೆಯ ಗ್ರಾಮವೊಂದರಲ್ಲಿ ಆಯೋಜಿಸಿದ್ದ ‘ದಸ್ಗಾತ್ರ್‘ (ಮೃತಪಟ್ಟ ವ್ಯಕ್ತಿಯ ಹತ್ತನೇ ದಿನದ ಕಾರ್ಯ) ಕಾರ್ಯಕ್ರಮದಲ್ಲಿ ಆಹಾರ ಸೇವಿಸಿದ ನಂತರ ಮಕ್ಕಳು ಸೇರಿದಂತೆ, ನೂರು ಮಂದಿ ಅಸ್ವಸ್ಥಗೊಂಡಿದ್ದು, ಅವರೆಲ್ಲರನ್ನೂ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.