<p><strong>ದಂತೇವಾಡಾ:</strong> ಛತ್ತೀಸ್ಗಡದಲ್ಲಿ ನಕ್ಸಲ್ ಪೀಡಿತ ದಂತೇವಾಡಾ ಜಿಲ್ಲೆಯಲ್ಲಿ ಕಬ್ಬಿಣದ ಅದಿರು ತುಂಬಿದ್ದ ಗೂಡ್ಸ್ ರೈಲಿನ 17 ಬೋಗಿಗಳು ಹಳಿ ತಪ್ಪಿದ್ದು, ಪ್ರಾಣ ಹಾನಿ ಸಂಭವಿಸಿಲ್ಲ ಎಂದು ಪೊಲೀಸ್ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.</p>.<p>ಕಿರಾಂದುಲ್-ವಿಶಾಖಪಟ್ಟಣ ರೈಲ್ವೆ ವಿಭಾಗದಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಯಾರೊಬ್ಬರೂ ಗಾಯಗೊಂಡಿರುವ ಬಗ್ಗೆ ವರದಿಯಾಗಿಲ್ಲ.</p>.<p>ಕಬ್ಬಿಣದ ಅದಿರು ತುಂಬಿದ ರೈಲು ಕಿರಾಂದುಲ್ (ದಂತೇವಾಡಾ)ದಿಂದ ವಿಶಾಖಪಟ್ಟಣಕ್ಕೆಚಲಿಸುತ್ತಿದ್ದಾಗ ಭನ್ಸ್ ಮತ್ತು ಕಮಲೂರ್ ನಿಲ್ದಾಣಗಳ ನಡುವೆ ಮುಂಜಾನೆ 4.05ರ ವೇಳೆಗೆ ಘಟನೆ ನಡೆದಿದೆ ಎಂದು ದಂತೇವಾಡಾ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಪಲ್ಲವ ತಿಳಿಸಿದ್ದಾರೆ.</p>.<p>ರೈಲು ಹಳ್ಳಿ ತಪ್ಪಿದ ಪರಿಣಾಮ ಜಗದಲಪುರ ಮತ್ತು ಕಿರಾಂದುಲ್ ನಡುವೆ ರೈಲುಗಳ ಸಂಚಾರಕ್ಕೆ ತೊಂದರೆಯಾಗಿದೆ ಎಂದು ಅವರು ಹೇಳಿದರು.</p>.<p>ಏತನ್ಮಧ್ಯೆ ಮಾವೋವಾದಿಗಳ ಕೈವಾಡ ಸಾಧ್ಯತೆಯನ್ನು ತಳ್ಳಿ ಹಾಕಿದ್ದಾರೆ. ಅಲ್ಲದೆ ಪ್ರಾಥಮಿಕ ತನಿಖೆಯಲ್ಲಿ ಯಾಂತ್ರಿಕ ದೋಷಗಳಿಂದಾಗಿ ಘಟನೆ ಸಂಭವಿಸಿರಬಹುದು ಎಂದುವಿವರಣೆ ನೀಡಿದ್ದಾರೆ.</p>.<p>ಜಿಲ್ಲಾ ಮೀಸಲು ಪಡೆ (ಡಿಆರ್ಜಿ) ಹಾಗೂ ರೈಲ್ವೆ ರಕ್ಷಣಾ ಪಡೆ (ಆರ್ಪಿಎಫ್) ಸ್ಥಳಕ್ಕೆ ಭೇಟಿ ನೀಡಿದ್ದು, ರೈಲು ಹಳಿ ದುರಸ್ತಿಗೊಳಿಸುವ ಕಾಮಗಾರಿ ಪ್ರಗತಿಯಲ್ಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಂತೇವಾಡಾ:</strong> ಛತ್ತೀಸ್ಗಡದಲ್ಲಿ ನಕ್ಸಲ್ ಪೀಡಿತ ದಂತೇವಾಡಾ ಜಿಲ್ಲೆಯಲ್ಲಿ ಕಬ್ಬಿಣದ ಅದಿರು ತುಂಬಿದ್ದ ಗೂಡ್ಸ್ ರೈಲಿನ 17 ಬೋಗಿಗಳು ಹಳಿ ತಪ್ಪಿದ್ದು, ಪ್ರಾಣ ಹಾನಿ ಸಂಭವಿಸಿಲ್ಲ ಎಂದು ಪೊಲೀಸ್ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.</p>.<p>ಕಿರಾಂದುಲ್-ವಿಶಾಖಪಟ್ಟಣ ರೈಲ್ವೆ ವಿಭಾಗದಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಯಾರೊಬ್ಬರೂ ಗಾಯಗೊಂಡಿರುವ ಬಗ್ಗೆ ವರದಿಯಾಗಿಲ್ಲ.</p>.<p>ಕಬ್ಬಿಣದ ಅದಿರು ತುಂಬಿದ ರೈಲು ಕಿರಾಂದುಲ್ (ದಂತೇವಾಡಾ)ದಿಂದ ವಿಶಾಖಪಟ್ಟಣಕ್ಕೆಚಲಿಸುತ್ತಿದ್ದಾಗ ಭನ್ಸ್ ಮತ್ತು ಕಮಲೂರ್ ನಿಲ್ದಾಣಗಳ ನಡುವೆ ಮುಂಜಾನೆ 4.05ರ ವೇಳೆಗೆ ಘಟನೆ ನಡೆದಿದೆ ಎಂದು ದಂತೇವಾಡಾ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಪಲ್ಲವ ತಿಳಿಸಿದ್ದಾರೆ.</p>.<p>ರೈಲು ಹಳ್ಳಿ ತಪ್ಪಿದ ಪರಿಣಾಮ ಜಗದಲಪುರ ಮತ್ತು ಕಿರಾಂದುಲ್ ನಡುವೆ ರೈಲುಗಳ ಸಂಚಾರಕ್ಕೆ ತೊಂದರೆಯಾಗಿದೆ ಎಂದು ಅವರು ಹೇಳಿದರು.</p>.<p>ಏತನ್ಮಧ್ಯೆ ಮಾವೋವಾದಿಗಳ ಕೈವಾಡ ಸಾಧ್ಯತೆಯನ್ನು ತಳ್ಳಿ ಹಾಕಿದ್ದಾರೆ. ಅಲ್ಲದೆ ಪ್ರಾಥಮಿಕ ತನಿಖೆಯಲ್ಲಿ ಯಾಂತ್ರಿಕ ದೋಷಗಳಿಂದಾಗಿ ಘಟನೆ ಸಂಭವಿಸಿರಬಹುದು ಎಂದುವಿವರಣೆ ನೀಡಿದ್ದಾರೆ.</p>.<p>ಜಿಲ್ಲಾ ಮೀಸಲು ಪಡೆ (ಡಿಆರ್ಜಿ) ಹಾಗೂ ರೈಲ್ವೆ ರಕ್ಷಣಾ ಪಡೆ (ಆರ್ಪಿಎಫ್) ಸ್ಥಳಕ್ಕೆ ಭೇಟಿ ನೀಡಿದ್ದು, ರೈಲು ಹಳಿ ದುರಸ್ತಿಗೊಳಿಸುವ ಕಾಮಗಾರಿ ಪ್ರಗತಿಯಲ್ಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>